ಸುಪ್ರೀಂ ಕೋರ್ಟ್ಗೆ 5 ನ್ಯಾಯಧೀಶರ ನೇಮಕ, ಯಾರ್ಯಾರು ತಿಳಿಯಿರಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್ಗೆ ಐವರು ಹೊಸ ನ್ಯಾಯಾಧೀಶರನ್ನು ನೇಮಿಸುವ ಆದೇಶಗಳಿಗೆ ಶನಿವಾರ ಸಹಿ ಹಾಕಿದ್ದರು.
ನವದೆಹಲಿ, ಫೆಬ್ರವರಿ 6: ಭಾರತದ ಸುಪ್ರೀಂ ಕೋರ್ಟ್ಗೆ ಹೊಸದಾಗಿ ಐವರು ನ್ಯಾಯಾಧೀಶರು ನೇಮಕವಾಗಿದ್ದಾರೆ. ಅವರಿಗೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ಐವರು ಹೊಸ ನ್ಯಾಯಾಧೀಶರಿಗೆ ಸೋಮವಾರ ಪ್ರಮಾಣ ವಚನ ಬೋಧಿಸಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್ಗೆ ಐವರು ಹೊಸ ನ್ಯಾಯಾಧೀಶರನ್ನು ನೇಮಿಸುವ ಆದೇಶಗಳಿಗೆ ಶನಿವಾರ ಸಹಿ ಹಾಕಿದ್ದರು. ಅದರಂತೆ ಸೋಮವಾರ ಸುಪ್ರೀಂ ಕೋರ್ಟ್ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಬಳಿಕ ನೂತನ ನ್ಯಾಯಮೂರ್ತಿಗಳನ್ನು ಪದಗ್ರಹಣ ನಡೆಯಿತು.
ಹೊಸದಾಗಿ ನೇಮಕಗೊಂಡ ಐವರು ನ್ಯಾಯಾಧೀಶರಲ್ಲಿ ರಾಜಸ್ಥಾನ ಹೈಕೋರ್ಟ್ (ಎಚ್ಸಿ) ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿಥಾಲ್, ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜಯ್ ಕರೋಲ್, ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್, ಪಾಟ್ನಾ ಹೈಕೋರ್ಟ್ ನ್ಯಾಯಮೂರ್ತಿ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕಳೆದ ವರ್ಷ ಡಿಸೆಂಬರ್ 13ರಂದು ಸುಪ್ರೀಂ ಕೋರ್ಟ್ನ ಕೊಲಿಜಿಯಂ ಈ ಹೆಸರುಗಳನ್ನು ಉನ್ನತಿಗೆ ಶಿಫಾರಸು ಮಾಡಿತ್ತು. ಕೊಲಿಜಿಯಂ ಎಂಬುದು ಸುಪ್ರೀಂ ಕೋರ್ಟ್ಗೆ ನ್ಯಾಯಧೀಶರನ್ನು ನೇಮಕ ಮಾಡುವ ವ್ಯವಸ್ಥೆ ಅಥವಾ ಸದಸ್ಯರ ಗುಂಪು. ಫೆಬ್ರವರಿ 3ರಂದು, ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಕೇಂದ್ರಕ್ಕೆ ಸೂಚನೆಯನ್ನು ನೀಡಿತ್ತು. ಕೇಂದ್ರ ಸರ್ಕಾರವು ನ್ಯಾಯಾಂಗ ನೇಮಕಾತಿಗಳು ಮತ್ತು ವರ್ಗಾವಣೆಗಳನ್ನು ವಿಳಂಬಗೊಳಿಸುವುದನ್ನು ಮುಂದುವರಿಸಿದರೆ ಖಂಡಿತ ಪರಿಣಾಮ ಬೀರುತ್ತದೆ ಎಂದು ಹೇಳಿದರು.
ನ್ಯಾಯಮೂರ್ತಿ ಕೌಲ್ ಅವರು ಕೇಂದ್ರಕ್ಕೆ, ನೀವು ನೇಮಕಾತಿ ಇಲ್ಲವೆ ವರ್ಗಾವಣೆಗಳನ್ನು ಬಾಕಿ ಇರಿಸಿದರೆ, ಕೆಲವು ಅತ್ಯಂತ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಮಾಡುತ್ತೀರಿ ಎಂದು ಎಚ್ಚರಿಕೆ ನೀಡಿದ್ದರು. ಐದು ಹೊಸ ನ್ಯಾಯಾಧೀಶರ ಪ್ರಮಾಣ ವಚನ ಸ್ವೀಕಾರದೊಂದಿಗೆ ಉನ್ನತ ನ್ಯಾಯಾಲಯದ ಬಲವು 27ರಿಂದ 32ಕ್ಕೆ ಏರಿದೆ. ಈಗ ಕೇವಲ ಎರಡು ನ್ಯಾಯಾಧೀಶರ ಹುದ್ದೆಗಳು ಖಾಲಿ ಉಳಿದಿದೆ. ಸುಪ್ರೀಂ ಕೋರ್ಟ್ನಲ್ಲಿ ಒಟ್ಟಾಗಿ 34 ನ್ಯಾಯಾಧೀಶರ ಹುದ್ದೆಗಳಿವೆ.
ಸುಪ್ರೀಂ ಕೋರ್ಟ್ ಕೊಲಿಜಿಯಂ ಜನವರಿ 31ರಂದು ಸುಪ್ರೀಂ ಕೋರ್ಟ್ಗೆ ಇಬ್ಬರು ನ್ಯಾಯಾಧೀಶರ ಹೆಸರನ್ನು ಶಿಫಾರಸು ಮಾಡಿತ್ತು. ಈ ಎರಡು ಹೆಸರುಗಳೆಂದರೆ ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಮತ್ತು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್. ಆಗಸ್ಟ್ 26, 2021ರ ನಂತರ ಒಂಬತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಒಟ್ಟಿಗೆ ನೇಮಕಗೊಂಡಾಗ ಒಂದೇ ಬ್ಯಾಚ್ನಲ್ಲಿ ಇಷ್ಟೊಂದು ನ್ಯಾಯಾಧೀಶರನ್ನು ನೇಮಕ ಮಾಡುವುದು ಇದು ಎರಡನೇ ಬಾರಿ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications