ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ತಮಿಳುನಾಡು: ಭೀಕರ ಅಪಘಾತಕ್ಕೆ ಐವರು ಬಲಿ
ಕೃಷ್ಣಗಿರಿ, ಮಾರ್ಚ್ 13: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಇಂದು(ಮಾ.13) ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಮೃತರಾಗಿದ್ದಾರೆ.
ಐದು ಜನರಿದ್ದ ಕಾರೊಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ) ಗೆ ಸೇರಿದ ಬಸ್ ಗೆಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರೂ ಸ್ಥಳದಲ್ಲೇ ಮೃತರಾಗಿದ್ದಾರೆ.
ಜೂಮ್ ಕಾರ್ ಪಲ್ಟಿ: ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
ಬಸ್ಸಿನಲ್ಲಿದ್ದ 15 ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಮೃತರ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
Comments
English summary
Five people, including two women, died when a car collided with a Karnataka State Road Transport Corporation (KSRTC) bus in Tamil Nadu's Krishnagiri district on Tuesday.
Story first published: Tuesday, March 13, 2018, 7:00 [IST]