ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚಳ; 5 ಔಷಧ ಕಂಪನಿಗಳಿಗೆ ಪರವಾನಗಿ ನೀಡಿದ ಕೇಂದ್ರ
ನವದೆಹಲಿ, ಮೇ 21: ದೇಶದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿಗೆ ಔಷಧಗಳ ಉತ್ಪಾದನೆಗೆ ಐದು ಕಂಪನಿಗಳಿಗೆ ಪರವಾನಗಿ ನೀಡಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಬ್ಲ್ಯಾಕ್ ಫಂಗಸ್ ಸೋಂಕಿಗೆ ಸದ್ಯಕ್ಕೆ ಆಂಫೊಟೆರಿಸಿನ್ ಬಿ ಎಂಬ ಔಷಧ ಬಳಸಲಾಗುತ್ತಿದ್ದು, ಜುಲೈ ತಿಂಗಳಿನಿಂದ ಈ ಕಂಪನಿಗಳು 1,11,000 ವಯಲ್ ಔಷಧ ಉತ್ಪಾದನೆ ಆರಂಭಿಸಲಿವೆ. ಹೈದರಾಬಾದ್ನ ನ್ಯಾಟ್ಕೊ ಫಾರ್ಮಾಸ್ಯುಟಿಕಲ್, ವಡೋದರದ ಅಲೆಂಬಿಕ್ ಫಾರ್ಮಾಸ್ಯುಟಿಕಲ್, ಗುಜರಾತ್ನ ಗೂಫಿಕ್ ಬಯೋಸೈನ್ಸಸ್ ಲಿಮಿಟೆಡ್ ಹಾಗೂ ಲೈಕಾ, ಪುಣೆಯ ಎಂಕ್ಯೂರ್ ಫಾರ್ಮಾಸ್ಯುಟಿಕಲ್ ಕಂಪನಿಗಳಿಗೆ ಪರವಾನಗಿ ನೀಡಲಾಗಿದೆ.
ಆಮದಿನ ಜೊತೆಗೆ ಶಿಲೀಂಧ್ರ ವಿರೋಧಿ ಔಷಧಗಳ ದೇಶೀಯ ಲಭ್ಯತೆಗೆ ಪೂರಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದ್ದು, ಆಂಫೊಟೆರಿಸಿನ್ ಬಿ 3,63,000 ವಯಲ್ಗಳನ್ನು ಮೇ ತಿಂಗಳಿನಲ್ಲಿ ಆಮದು ಮಾಡಿಕೊಳ್ಳಲಾಗುವುದು. ಈ ಮೂಲಕ ದೇಶದಲ್ಲಿ 5,26,752 ವಯಲ್ಗಳು ಲಭ್ಯವಾಗಲಿವೆ ಎಂದು ಮಾಹಿತಿ ನೀಡಿದೆ.

ಜೂನ್ನಲ್ಲಿ 3,15,000 ವಯಲ್ಗಳ ಔಷಧಿಯನ್ನು ಆಮದು ಮಾಡಿಕೊಳ್ಳಲಾಗುವುದು. ಜೂನ್ಲ್ಲಿ ದೇಶಾದ್ಯಂತ 5,70,114 ವಯಲ್ ಔಷಧಿಗಳ ಲಭ್ಯತೆ ಇರುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದೆ. ಹಲವು ರಾಜ್ಯಗಳಲ್ಲಿ ಮ್ಯೂಕರ್ ಮೈಕೋಸಿಸ್- ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆಂಫೊಟೆರಿಸಿನ್ ಬಿ ಔಷಧಗಳ ಅಭಾವವೂ ಎದುರಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿಕೆ ನೀಡಿದೆ.
ಆಂಫೊಟೆರಿಸಿನ್ ಬಿ ಹೆಚ್ಚಿನ ಉತ್ಪಾದನೆಗೆ ಕೇಂದ್ರ ಆರೋಗ್ಯ ಸಚಿವಾಲಯ, ಔಷಧ ಇಲಾಖೆ ಹಾಗೂ ವಿದೇಶಾಂಗ ಸಚಿವಾಲಯದಿಂದ ಪ್ರಯತ್ನ ಮುಂದುವರೆಸಿರುವುದಾಗಿ ತಿಳಿಸಿದೆ.
ಕೊರೊನಾ ಸೋಂಕಿನಿಂದ ಗುಣಮುಖರಾದವರಲ್ಲಿ ಕಾಣಿಸಿಕೊಳ್ಳುತ್ತಿರುವ ಬ್ಲ್ಯಾಕ್ ಫಂಗಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬುಧವಾರದವರೆಗಿನ ಅಧಿಕೃತ ಮಾಹಿತಿ ಪ್ರಕಾರ 5,500 ಜನರು ಬ್ಲ್ಯಾಕ್ ಫಂಗಸ್ಗೆ ತುತ್ತಾಗಿದ್ದಾರೆ. ಒಟ್ಟು 126 ಜನ ಇದರಿಂದ ಪ್ರಾಣ ಕಳೆದುಕೊಂಡಿದ್ದು ಮಹಾರಾಷ್ಟ್ರವೊಂದರಲ್ಲೇ 90 ಸಾವಿನ ಪ್ರಕರಣಗಳು ದೃಢಪಟ್ಟಿದೆ. ಬ್ಲ್ಯಾಕ್ ಫಂಗಸ್ ಪ್ರಕರಣಗಳಿಂದ ಸಾವನ್ನಪ್ಪುತ್ತಿರುವ ರಾಜ್ಯಗಳಲ್ಲಿ ಹರಯಾಣ ಎರಡನೇ ಸ್ಥಾನದಲ್ಲಿದ್ದು ಈವರೆಗೆ 14 ಜನರು ಸಾವನ್ನಪ್ಪಿದ್ದಾರೆ.
-
NASA Artemis II: ಬಾಹ್ಯಾಕಾಶಯಾನ ಯಶಸ್ವಿ, 4 ಗಗನಯಾನಿಗಳು ಮರಳಿ ಭೂಮಿಗೆ, ಅವರೊಂದಿಗೆ ಹಾರಿದ್ದ 'ಡಲ್ಕೋಫ್ಲೆಕ್ಸ್' ಮಾತ್ರೆ -
ಮೊಡವೆ ಕಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವ ಸಿಂಪಲ್ ಟ್ರಿಕ್ಸ್ : ಬೇಸಿಗೆಯಲ್ಲಿ ಅನುಸರಿಸಿ ಈ 9 ಟಿಪ್ಸ್ -
ಬೇಸಿಗೆಯಲ್ಲಿ ಸೌತೆಕಾಯಿ ತಿನ್ನಲು ಟಾಪ್ 5 ಕಾರಣಗಳು: ಆರೋಗ್ಯಕ್ಕೆ ಅದ್ಭುತ ಲಾಭಗಳು -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications