ಚುನಾವಣಾ ಆಯೋಗ App ಬಳಸಿ ಫಲಿತಾಂಶ ನೋಡೋದು ಹೇಗೆ?
ಐದು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆದ ವಿಧಾನಸಭೆ ಚುನಾವಣೆ ಫಲಿತಾಂಶ ನೋಡುವ ಸಮಯ ಬಂದಿದೆ. ಕೇರಳ, ತಮಿಳುನಾಡು, ಅಸ್ಸಾಂ ಮತ್ತು ಪುದುಚೆರಿ ವಿಧಾನಸಭೆ ಚುನಾವಣೆಗಳು ಏಪ್ರಿಲ್ 6ರಂದು ಮುಕ್ತಾಯಗೊಂಡರೆ, ಪಶ್ಚಿಮ ಬಂಗಾಳದಲ್ಲಿ 8ನೇ ಹಾಗೂ ಕೊನೆ ಹಂತದ ಮತದಾನ ಏಪ್ರಿಲ್ 29 ಸಂಪನ್ನವಾಗಿತ್ತು. ಪಶ್ಚಿಮ ಬಂಗಾಳದಲ್ಲಿ 294, ತಮಿಳುನಾಡಿನಲ್ಲಿ 234, ಕೇರಳದಲ್ಲಿ 140, ಪುದುಚೇರಿಯಲ್ಲಿ 30 ಹಾಗೂ ಅಸ್ಸಾಂನಲ್ಲಿ 126 ಸ್ಥಾನಕ್ಕಾಗಿ ಚುನಾವಣೆ ನಡೆಸಲಾಗಿದೆ. ಮೇ 2ರಂದು ಅಂತಿಮ ಫಲಿತಾಂಶವನ್ನು ಕೇಂದ್ರ ಚುನಾವಣಾ ಆಯೋಗ ನೀಡಲಿದೆ.
ಏಪ್ರಿಲ್ 17ರಂದು ಕರ್ನಾಟಕದ ಒಂದು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ನಡೆದಿದ್ದು, ವಿವಿಧ ರಾಜ್ಯಗಳಲ್ಲಿನ ಉಪ ಚುನಾವಣೆ ಫಲಿತಾಂಶ ಕೂಡಾ ಹೊರಬರಲಿದೆ. ಕೋವಿಡ್ 19 ಸಾಂಕ್ರಾಮಿಕದ ನಡುವೆ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕೇಂದ್ರದ ಬಳಿ ಏಜೆಂಟರುಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಮತ ಎಣಿಕೆ ಮಾಡುವ ಅಧಿಕಾರಿಗಳಿಗೆ ಆರ್ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದ್ದು, ಕೋವಿಡ್ ನೆಗಟಿವ್ ಪ್ರಮಾಣ ಪತ್ರ ಹೊಂದಿರಬೇಕು ಅಥವಾ ಎರಡು ಬಾರಿ ಕೊರೊನಾ ಲಸಿಕೆ ಹಾಕಿಸಿಕೊಂಡಿರಬೇಕು ಎಂಬ ನಿಯಮ ರೂಪಿಸಲಾಗಿದೆ.

ಚುನಾವಣಾ ಆಯೋಗದ ಅಧಿಕೃತ ವೆಬ್ತಾಣ ಅಥವಾ ಮತದಾರರಿಗೆ ನೆರವು ನೀಡುವ ಅಪ್ಲಿಕೇಷನ್ ಮೂಲಕ ಐದು ರಾಜ್ಯಗಳ ಫಲಿತಾಂಶ ಪಡೆದುಕೊಳ್ಳಬಹುದು.
ಚುನಾವಣಾ ಆಯೋಗದ ವೆಬ್ತಾಣ: https://results.eci.gov.in/
ಮೊಬೈಲ್ ಅಪ್ಲಿಕೇಷನ್: Voter Helpline (https://play.google.com/store/apps/details?id=com.eci.citizen&hl=en_IN&gl=US)
ಗೂಗಲ್ ಪ್ಲೇ ಸ್ಟೋರಿನಿಂದ ಡೌನ್ ಲೋಡ್ ಮಾಡಿಕೊಂಡು ವೀಕ್ಷಿಸಬಹುದು. ನಿಮ್ಮ ಮೊಬೈಲ್ ಸಂಖ್ಯೆ ದಾಖಲಿಸಿ, ಒಟಿಪಿ ಒದಗಿಸಿದ ಬಳಿಕ ಮುಖ್ಯ ಪುಟ ತೆರೆದುಕೊಳ್ಳುತ್ತದೆ. ಅಲ್ಲಿಂದ ನೇರವಾಗಿ ಫಲಿತಾಂಶ ಪುಟಕ್ಕೆ ತೆರಳಬಹುದು. ಕ್ಷಣ ಕ್ಷಣಕ್ಕೆ ಪಕ್ಷವಾರು, ಕ್ಷೇತ್ರವಾರು ಟ್ರೆಂಡ್ ಅಲ್ಲದೆ ಪೂರ್ಣ ಫಲಿತಾಂಶವನ್ನು ಸುಲಭವಾಗಿ ಪಡೆದುಕೊಳ್ಳಬಹುದು ಎಂದು ಆಯೋಗ ಹೇಳಿದೆ.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕಡೆ ಭರ್ಜರಿ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಎಂದ ಡಿ.ಕೆ.ಶಿವಕುಮಾರ್ -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications