LPG Cylinder Price hike: ಪಂಚ ರಾಜ್ಯ ಚುನಾವಣೆ ಪೂರ್ಣ: ಇಂದು LPG ಸಿಲಿಂಡರ್ ಬೆಲೆ ಏರಿಕೆ!
ದೆಹಲಿ ಡಿಸೆಂಬರ್ 01- ಐದು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು, ಇಂದಿನಿಂದ ಅಂದರೆ ಡಿಸೆಂಬರ್ 1 ರಿಂದ ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು 21 ರೂಪಾಯಿ ಹೆಚ್ಚಿಸಿವೆ. ಇಂದಿನಿಂದ ಅಂದರೆ ಡಿಸೆಂಬರ್ 1 ರಿಂದ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ಗೆ 1796.50 ರೂಪಾಯಿಗಳನ್ನು ಖರ್ಚು ಮಾಡಬೇಕಾಗುತ್ತದೆ.
ಹಾಗೆ ಮುಂಬೈನಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1749 ರೂ., ಕೋಲ್ಕತ್ತಾದಲ್ಲಿ 1885.50 ರೂ., ಚೆನ್ನೈನಲ್ಲಿ 1968.50 ರೂಪಾಯಿ ಆಗಲಿದೆ. ವಾಣಿಜ್ಯ ಅನಿಲ ಸಿಲಿಂಡರ್ಗಳ ಬೆಲೆಯಲ್ಲಿನ ಹೆಚ್ಚಳವು ವಿಶೇಷವಾಗಿ ರೆಸ್ಟೋರೆಂಟ್ ಅಥವಾ ಆಹಾರ ವ್ಯವಹಾರದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದಾಗಿ ಹೊರಗೆ ತಿನ್ನುವ ಜನರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆ ಕೂಡ ಇದೆ.

ದೇಶೀಯ ಗ್ರಾಹಕರಿಗೆ ಪರಿಹಾರ
ಆದರೆ ದೇಶಿ ಗ್ರಾಹಕರಿಗೆ ಸಮಾಧಾನದ ಸುದ್ದಿಯಿದೆ. ಅದೆಂದರೆ 14.2 ಕೆಜಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಂಪನಿಗಳು ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಸರ್ಕಾರ ಈ ಸಿಲಿಂಡರ್ನ ಬೆಲೆಯನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಿತ್ತು. ಇಂಡಿಯನ್ ಆಯಿಲ್ನ ಅಧಿಕೃತ ವೆಬ್ಸೈಟ್ ಪ್ರಕಾರ, ಈ ಸಿಲಿಂಡರ್ ದೆಹಲಿಯಲ್ಲಿ 903 ರೂ.ಗೆ ಲಭ್ಯವಿದೆ. ಈ ಸಿಲಿಂಡರ್ ನೋಯ್ಡಾದಲ್ಲಿ 900.50 ರೂ.ಗೆ ಲಭ್ಯವಿದ್ದರೆ, ಅದೇ ರೀತಿ ಪ್ರತಿ ಸಿಲಿಂಡರ್ ಕೋಲ್ಕತ್ತಾದಲ್ಲಿ 929 ರೂ. ಮುಂಬೈನಲ್ಲಿ 902.50 ರೂ ಮತ್ತು ಚೆನ್ನೈನಲ್ಲಿ 918.50 ರೂಪಾಯಿಗೂ ಲಭ್ಯವಿದೆ.
ಎಟಿಎಫ್ ಬೆಲೆ ಕಡಿತ
ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 1 ರಂದು ಏವಿಯೇಷನ್ ಟರ್ಬೈನ್ ಇಂಧನದ (ಎಟಿಎಫ್) ಬೆಲೆಯನ್ನು ಕಡಿಮೆ ಮಾಡಿದೆ. ದೇಶೀಯ ವಿಮಾನಯಾನ ಸಂಸ್ಥೆಗಳಿಗೆ ಈಗ ರಾಜಧಾನಿ ದೆಹಲಿಯಲ್ಲಿ 1,06,155.67 ರೂ., ಕೋಲ್ಕತ್ತಾದಲ್ಲಿ 1,44,639.70 ರೂ., ಮುಂಬೈನಲ್ಲಿ 99,223.44 ರೂ. ಮತ್ತು ಚೆನ್ನೈನಲ್ಲಿ ಪ್ರತಿ ಕಿಲೋ ಲೀಟರ್ಗೆ 1,09,966.39 ರೂಪಾಯಿ ಮಾಡಲಾಗಿದೆ. ಎಟಿಎಫ್ ಬೆಲೆಗಳಲ್ಲಿ ಇಳಿಕೆಯೊಂದಿಗೆ ದೇಶೀಯ ವಿಮಾನಯಾನ ಕಂಪನಿಗಳು ವಿಮಾನ ದರದಲ್ಲಿ ಪ್ರಯಾಣಿಕರಿಗೆ ಸ್ವಲ್ಪ ಪರಿಹಾರವನ್ನು ನೀಡುತ್ತದೆ ಎಂದು ನಿರೀಕ್ಷಿಸಬಹುದು. ಇದರರ್ಥ ದೇಶದಲ್ಲಿ ವಿಮಾನ ಪ್ರಯಾಣವು ಅಗ್ಗವಾಗಬಹುದು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications