Snakebite: ಪ್ರತಿ ವರ್ಷ ಹಾವು ಕಡಿತದಿಂದ ದೇಶದಲ್ಲಿ 50,000 ಮಂದಿ ಸಾವು
ನವದೆಹಲಿ, ಜುಲೈ. 29: ದೇಶದಲ್ಲಿ ಹಾವು ಕಡಿತದಿಂದ ಪ್ರತಿ ವರ್ಷ ಸುಮಾರು 50,000 ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಇದು ವಿಶ್ವದಲ್ಲೇ ಅತಿ ಹೆಚ್ಚು ಎಂದು ಬಿಜೆಪಿ ಸಂಸದ ರಾಜೀವ್ ಪ್ರತಾಪ್ ರೂಡಿ ಸೋಮವಾರ ಹೇಳಿದ್ದಾರೆ.
ಪ್ರತಿ ವರ್ಷ, ಭಾರತದಾದ್ಯಂತ 30 ರಿಂದ 40 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಾರೆ ಎಂದು ಸಂಸದ ರಾಜೀವ್ ಪ್ರತಾಪ್ ರೂಡಿ ಲೋಕಸಭೆಯಲ್ಲಿ ಮಹತ್ವದ ವಿಷಯಗಳ ಚರ್ಚೆಯ ಸಂದರ್ಭದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಹೀಗಾಗಿ ಹಾವು ಕಡಿತದ ಬಗ್ಗೆ ಜನ ಜಾಗೃತರಾಗುವ ಅವಶ್ಯಕತೆಯಿದೆ.

"ಬಿಹಾರ ಅತ್ಯಂತ ಬಡ ರಾಜ್ಯವಾಗಿದೆ, ಬಡತನ ಮತ್ತು ನೈಸರ್ಗಿಕ ವಿಕೋಪಗಳನ್ನು ಸಹಿಸಿಕೊಳ್ಳುತ್ತದೆ. ಭಾರತದಾದ್ಯಂತ, 30 ರಿಂದ 40 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಾರೆ. ಇದರಲ್ಲಿ ಬರೋಬ್ಬರಿ 50,000 ಜನರು ಸಾವನ್ನಪ್ಪುತ್ತಾರೆ. ಇದು ವಿಶ್ವದಲ್ಲೇ ಅತಿ ಹೆಚ್ಚು" ಎಂದು ಸಂಸದ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
28 ಡಿಗ್ರಿ ಸೆಲ್ಸಿಯಸ್ಗಿಂತ ಹೆಚ್ಚಿನ ತಾಪಮಾನದ ಪರಿಸರದಲ್ಲಿ ಹಾವು ಕಡಿತದ ಘಟನೆಗಳ ಮೇಲೆ ಹವಾಮಾನ ಬದಲಾವಣೆಯ ಪ್ರಭಾವದ ಮೂಲಕ ಅನೇಕ ಸಾವುಗಳನ್ನು ತಡೆಯಬಹುದು ಎಂದು ರಾಜೀವ್ ಪ್ರತಾಪ್ ರೂಡಿ ಒತ್ತಿ ಹೇಳಿದ್ದಾರೆ. ಇದೇ ವೇಳೆ ಹಲವು ಪ್ರಮುಖ ವಿಷಗಳನ್ನು ಚರ್ಚಿಸಲಾಗಿದೆ.
ವೆಲ್ಲೂರು ಸಂಸದ ಎಂ.ಕತಿರ್ ಆನಂದ್ ಅವರು ಬೀಡಿ ಕಾರ್ಮಿಕರ ದುಃಸ್ಥಿತಿ ಬಗ್ಗೆ ಮಾತನಾಡಿದ್ದಾರೆ. ಬೀಡಿ ಕಾರ್ಮಿಕರಲ್ಲಿ ಹೆಚ್ಚಿನವರು ಮಹಿಳೆಯರು ಎಂದಿರುವ ಅವರು ಕೇಂದ್ರದ ಅಸಮರ್ಪಕ ಅನುದಾನವನ್ನು ಉಲ್ಲೇಖಿಸಿ ಅವರು ಅವರ ವೇತನವನ್ನು ಹೆಚ್ಚಿಸುವಂತೆ ಒತ್ತಾಯಿಸಿದ್ದಾರೆ. 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಪಿಂಚಣಿ ನೀಡುವಂತೆ ಆಗ್ರಹಿಸಿದ್ದಾರೆ.

ಪಂಜಾಬ್ನಲ್ಲಿ ಸಮಗ್ರ ಮಕ್ಕಳ ಅಭಿವೃದ್ಧಿ ಯೋಜನೆ (ಐಸಿಡಿಎಸ್) ಪೂರಕ ಪೌಷ್ಟಿಕಾಂಶ ಕಾರ್ಯಕ್ರಮದಲ್ಲಿ ಭ್ರಷ್ಟಾಚಾರದ ಬಗ್ಗೆ ಬಟಿಂಡಾ ಸಂಸದೆ ಹರ್ಸಿಮ್ರತ್ ಕೌರ್ ಕಳವಳ ವ್ಯಕ್ತಪಡಿಸಿದ್ದಾರೆ. ನಕಲಿ ಫಲಾನುಭವಿಗಳು ಖಾಸಗಿ ಸಂಸ್ಥೆಗಳ ಮೂಲಕ ನೆರವು ಪಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಪಂಜಾಬ್ನಲ್ಲಿ ಐಸಿಡಿಎಸ್ ಪೂರಕ ಪೌಷ್ಟಿಕಾಂಶ ಕಾರ್ಯಕ್ರಮದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಖಾಸಗಿ ಸಂಸ್ಥೆಗಳ ಮೂಲಕ ನಕಲಿ ಫಲಾನುಭವಿಗಳಿಗೆ ನೆರವು ನೀಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಗಮನಕ್ಕೆ ತರಲು ನಾನು ಬಯಸುತ್ತೇನೆ ಎಂದಿದ್ದಾರೆ. 28 ಲಕ್ಷ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ಕೇವಲ 2,200 ರೂಪಾಯಿ ವೇತನ ನೀಡಲಾಗುತ್ತಿದ್ದು, ಇದನ್ನು ಗುಣಮಟ್ಟಕ್ಕಿಂತ ಕೆಳಮಟ್ಟದ್ದು ಎಂದು ಕರೆದಿದ್ದಾರೆ. ಜೊತೆಗೆ ತಾಯಂದಿರು ಮತ್ತು ಮಕ್ಕಳಿಗೆ ನ್ಯಾಯ ಒದಗಿಸುವಂತೆ ಹರ್ಸಿಮ್ರತ್ ಕೌರ್ ಒತ್ತಾಯಿಸಿದ್ದಾರೆ.
ತಮಿಳುನಾಡಿನ ಕರೂರ್ ಸಂಸದೆ ಎಸ್ ಜೋತಿಮಣಿ ಅವರು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಪ್ರಶ್ನೆ ಪತ್ರಿಕೆಯನ್ನು ಖರೀದಿಸಲು 25 ಲಕ್ಷ ವೆಚ್ಚವಾಗುವುದರಿಂದ ಅದನ್ನು ನಿಭಾಯಿಸಬಲ್ಲವರು ಮಾತ್ರ ನೀಟ್ ಪರೀಕ್ಷೆ ಪಾಸಾಗಬಹುದು ಎಂದು ಆರೋಪಿಸಿದ್ದಾರೆ.
ನೀಟ್ ಪರೀಕ್ಷೆಯಿಂದ ಉಂಟಾದ ಸಾಮಾಜಿಕ ಆರ್ಥಿಕ ಅಸಮಾನತೆಯನ್ನು ಒತ್ತಿ ಹೇಳಿದ ಅವರು, ತಮಿಳುನಾಡಿನಲ್ಲಿ ಕನಿಷ್ಠ 18 ವಿದ್ಯಾರ್ಥಿಗಳು ನೀಟ್ನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀಟ್ ಪರಿಚಯಿಸಿದ ನಂತರ ಗ್ರಾಮೀಣ ಪ್ರದೇಶದ ಕಡಿಮೆ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ ಮತ್ತು ಅದನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications