ಸುಮಾರು 50%ರಷ್ಟು 2000 ರೂ. ನೋಟು ವಾಪಸ್ ಬಂದಿದೆ: ಆರ್ಬಿಐ ಗವರ್ನರ್
ನವದೆಹಲಿ, ಜೂನ್ 8: ಕಳೆದ ತಿಂಗಳು ಆರ್ಬಿಐ 2,000 ಮುಖಬೆಲೆಯ ಕರೆನ್ಸಿ ನೋಟುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ನಂತರ ಚಲಾವಣೆಯಲ್ಲಿದ್ದ ನೋಟುಗಳು ಶೇಕಡಾ 50ರಷ್ಟು ವಾಪಸ್ ಬಂದಿದೆ ಎಂದು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಗುರುವಾರ ಹೇಳಿದ್ದಾರೆ.
ದ್ವೈಮಾಸಿಕ ಹಣಕಾಸು ನೀತಿಯನ್ನು ಇಲ್ಲಿ ಬಿಡುಗಡೆ ಮಾಡಿದ ನಂತರ ಮಾಧ್ಯಮಗಳೊಂದಿಗೆ ಸಂವಾದದಲ್ಲಿ ಮಾತನಾಡಿದ ಅವರು, ಮಾರ್ಚ್ 31, 2023ರಂತೆ 3.62 ಲಕ್ಷ ಕೋಟಿ ರೂಪಾಯಿ ಮೌಲ್ಯದ 2,000 ರೂಪಾಯಿ ನೋಟುಗಳು ಚಲಾವಣೆಯಲ್ಲಿವೆ. ಇದುವರೆಗೆ ಘೋಷಣೆಯ ನಂತರ 1.80 ಲಕ್ಷ ಕೋಟಿ ರೂಪಾಯಿ ವಾಪಸ್ ಬಂದಿದೆ. ಶೇ. 85ರಷ್ಟು 2000 ರೂಪಾಯಿ ನೋಟುಗಳು ಬ್ಯಾಂಕ್ ಖಾತೆಗಳಲ್ಲಿ ಠೇವಣಿಯಾಗಿ ಬರುತ್ತಿದ್ದು, ಇದು ನಿರೀಕ್ಷೆಗೆ ತಕ್ಕಂತೆ ಇದೆ ಎಂದರು.

ಮೇ 19 ರಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಕರೆನ್ಸಿ ನಿರ್ವಹಣೆಯ ಭಾಗವಾಗಿ ರೂ 2,000 ಮುಖಬೆಲೆಯ ನೋಟುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತ್ತು. ಮೇ 23ರಿಂದ 2,000 ರೂಪಾಯಿ ನೋಟುಗಳನ್ನು (ಒಂದೇ ಬಾರಿ ರೂ 20,000 ವರೆಗೆ) ವಿನಿಮಯ ಮಾಡಿಕೊಳ್ಳಲು ಅನುಮತಿ ನೀಡಿತು. ವಿನಿಮಯ ಅಥವಾ ಠೇವಣಿ ವಿಂಡೋ ಸೆಪ್ಟೆಂಬರ್ 30, 2023 ರವರೆಗೆ ಲಭ್ಯವಿದೆ.
2,000 ನೋಟುಗಳ ವಿನಿಮಯ ಅಥವಾ ಠೇವಣಿಗಾಗಿ ಸಾರ್ವಜನಿಕರು ಭಯಪಡಬೇಡಿ. ಆದರೆ ಕೊನೆಯ ಕ್ಷಣದ ದಾವಂತ ಮಾಡಿಕೊಳ್ಳುವುದುನ್ನು ತಪ್ಪಿಸಬೇಕು ಎಂದು ಅವರು ಒತ್ತಾಯಿಸಿದರು. 500 ರೂಪಾಯಿ ನೋಟುಗಳನ್ನು ಹಿಂಪಡೆಯಲು ಅಥವಾ 1,000 ರೂಪಾಯಿ ಮುಖಬೆಲೆಯ ನೋಟುಗಳನ್ನು ಮರು ಚಲಾವಣೆ ಮಾಡುವ ಬಗ್ಗೆ ಆರ್ಬಿಐ ಯೋಚಿಸುತ್ತಿಲ್ಲ ಮತ್ತು ಈ ಬಗ್ಗೆ ಊಹಾಪೋಹ ಮಾಡಬೇಡಿ ಎಂದು ಸಾರ್ವಜನಿಕರಲ್ಲಿ ವಿನಂತಿಸಿದ್ದಾರೆ.

ಕಳೆದ ತಿಂಗಳು ಆರ್ಬಿಐ ಗವರ್ನರ್ ಅವರು ಹಿಂಪಡೆಯಲಾದ 2,000 ರೂಪಾಯಿ ಕರೆನ್ಸಿ ನೋಟುಗಳನ್ನು ಸೆಪ್ಟೆಂಬರ್ 30 ರ ಗಡುವಿನೊಳಗೆ ಬ್ಯಾಂಕಿಂಗ್ ವ್ಯವಸ್ಥೆಗೆ ಹಿಂತಿರುಗಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದರು.
-
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications