ಸರ್ಕಾರಿ - ಖಾಸಗಿ ಸಂಸ್ಥೆಗಳ ಶೇ.50 ರಷ್ಟು ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್ ಕಡ್ಡಾಯ
ನವದೆಹಲಿ: ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಮಳೆ ಅಥವಾ ಪ್ರಕೃತಿ ವಿಕೋಪ ಎದುರಾಗುವ ಸಂದರ್ಭಗಳಲ್ಲಿ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್ (ಮನೆಯಿಂದಲೇ ಕೆಲಸ) ಮಾಡುವುದಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ಇದೀಗ ಬೆಂಗಳೂರು ಹಾಗೂ ದೆಹಲಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಾಯುಮಾಲಿನ್ಯ ಹೆಚ್ಚಳ ಹಾಗೂ ಚಳಿ ಹೆಚ್ಚಳದಿಂದ ಕೆಲವೊಂದು ಪ್ರಮುಖ ಬದಲಾವಣೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ವರ್ಕ್ ಫ್ರಂ ಹೋಮ್ ಸಹ ಒಂದಾಗಿದೆ.
ಇದೀಗ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರಗೊಂಡಿದ್ದು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ಶೇ50ರಷ್ಟು ಸಿಬ್ಬಂದಿಗೆ ವರ್ಕ್ ಫ್ರಂ ಹೋಮ್ ಕಡ್ಡಾಯಗೊಳಿಸಿ ದೆಹಲಿ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೇ ಈ ನಿರ್ದೇಶನಗಳನ್ನು ಉಲ್ಲೇಘಿಸಿದರೆ ದಂಡ ವಿಧಿಸಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ.

ಈ ವರ್ಷದ ಚಳಿಗಾಲದಲ್ಲಿ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ಅಪಾಯಕಾರಿ ಮಟ್ಟಕ್ಕೆ ಏರಿದ್ದು, ಡಿಸೆಂಬರ್ 15ರಂದು ವಾಯು ಗುಣಮಟ್ಟ ಸೂಚ್ಯಂಕವು(ಎಕ್ಯೂಐ) 498ಕ್ಕೆ ತಲುಪಿತ್ತು.
ಇದು ಇತ್ತೀಚಿನ ವರ್ಷಗಳಲ್ಲೇ ಹೆಚ್ಚು ದಾಖಲಾಗಿರುವ ಕಳಪೆ ವಾಯು ಗುಣಮಟ್ಟದ ಸೂಚ್ಯಂಕವಾಗಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ(ಸಿಪಿಸಿಬಿ) ದತ್ತಾಂಶದ ಪ್ರಕಾರ, ದೆಹಲಿಯ ಗಾಳಿಯ ಗುಣಮಟ್ಟ ಮೊದಲು ಕಳಪೆ ಮಟ್ಟದಲ್ಲಿತ್ತು. ಇದೀಗ ತೀವ್ರ ಕಳಪೆ ಮಟ್ಟಕ್ಕೆ ಏರಿದ್ದು, ಎಕ್ಯೂಐ ಕ್ಷೀಣಿಸುತ್ತಿದೆ. ಈ ಬಿಕ್ಕಟ್ಟಿನ ಪರಿಣಾಮವಾಗಿ ವಾಯು ಗುಣಮಟ್ಟ ನಿರ್ವಹಣಾ ಆಯೋಗ (ಸಿಎಕ್ಯೂಎಂ) ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ದೆಹಲಿಯಾದ್ಯಂತ ವಾಯುಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೆಲವೊಂದು ಕಟ್ಟುನಿಟ್ಟಾದ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ.
ವಾಯಮಾಲಿನ್ಯದಿಂದ ಹಲವು ಸಮಸ್ಯೆ
ದೆಹಲಿಯಲ್ಲಿ ವಾಯುಮಾಲಿನ್ಯದಿಂದ ಹಲವು ಸಮಸ್ಯೆಗಳು ಎದುರಾಗಿವೆ. ಕಳೆದ ವಾರಂತ್ಯದಲ್ಲಿ ವಾಯುಮಾಲಿನ್ಯದಿಂದಾಗಿ ಹಲವು ಅವಘಡಗಳು ಸಂಭವಿಸಿದ್ದವು. ಕಳೆದ ಶನಿವಾರ ಮತ್ತು ಸೋಮವಾರದ ನಡುವೆ ರಾಜಧಾನಿಯಲ್ಲಿ ವಾಯುಮಾಲಿನ್ಯದಿಂದ ದಟ್ಟ ಹೊಗೆ ಆವರಿಸಿತ್ತು. ಅಲ್ಲದೇ ದೆಹಲಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಕಡೆಗಳಲ್ಲಿ ರಸ್ತೆ ಅಪಘಾತಗಳು, ಭಾರೀ ಟ್ರಾಫಿಕ್ ಜಾಮ್ ಸಮಸ್ಯೆ ಹಾಗೂ ವಿಮಾನ ಸಂಚಾರ ರದ್ದು ಹಾಗೂ ವಿಮಾನ ಹಾರಾಟದಲ್ಲಿ ವ್ಯತ್ಯಾಸವಾಗಿತ್ತು. ಭಾರೀ ವಾಯುಮಾಲಿನ್ಯದಿಂದಾಗಿ ಗೋಚರತೆ ಗಮನಾರ್ಹವಾಗಿ ಕಡಿಮೆಯಾಗಿದ್ದು, ದೆಹಲಿ ವಿಮಾನ ನಿಲ್ದಾಣದ ಆಡಳಿತ ಮಂಡಳಿಯು ಎಲ್ಲ ವಿಮಾನಯಾನ ಸಂಸ್ಥೆಗಳಿಗೆ ಕೆಲವೊಂದು ಪ್ರಮುಖ ಮಾರ್ಗಸೂಚಿ ಪ್ರಕಟಿಸಿತ್ತು.
ಬೆಂಗಳೂರಿನಲ್ಲೂ ವಾಯು ಮಾಲಿನ್ಯ
ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗುತ್ತಿರುವುದರ ನಡುವೆ ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದ ಪ್ರಮುಖ ನಗರಗಳು ಹಾಗೂ ವಾಯು ಗುಣಮಟ್ಟವು ಕುಸಿಯಲು ಪ್ರಾರಂಭವಾಗಿದೆ. ಬೆಂಗಳೂರಿನಲ್ಲಿ ಎಕ್ಯೂಐ 180 ದಾಖಲಾಗಿದೆ. ಬೆಂಗಳೂರಿನಲ್ಲಿ ಗಾಳಿ ಗುಣಮಟ್ಟವು ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ಅಲ್ಲದೇ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿವಿಧ ಇಲಾಖೆಗಳ ಬೃಹತ್ ಕಾಮಗಾರಿಗಳು ನಡೆಯುತ್ತಿವೆ. ಕಾಮಗಾರಿಗಳು ನಡೆಯುವ ಸಂದರ್ಭದಲ್ಲಿ ಸೃಷ್ಟಿಯಾಗುತ್ತಿರುವ ಧೂಳಿನಿಂದಲೂ ಗಾಳಿಯ ಗುಣಮಟ್ಟ ಕುಸಿಯುವುದಕ್ಕೆ ಪ್ರಾರಂಭವಾಗಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications