ಛತ್ತೀಸ್ಗಢ: 51 ಮಕ್ಕಳು ಸೇರಿ ನೂರು ಮಂದಿ ಏಕಾಏಕಿ ಆಸ್ಪತ್ರೆಗೆ ದಾಖಲು
ಭೋಪಾಲ್, ಅಕ್ಟೋಬರ್ 07: ಛತ್ತೀಸ್ಗಢದ ಅನ್ಸುಲಾ ಗ್ರಾಮದಲ್ಲಿ ಬುಧವಾರ 51 ಮಕ್ಕಳು ಸೇರಿ ನೂರು ಮಂದಿ ದಿಡೀರ್ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ವಿಷಾಹಾರ ಸೇವನೆಯ ಶಂಕೆ ಉಂಟಾಗಿದೆ.
ಸ್ಥಳೀಯ ಶಾಲೆಯೊಂದರ ಮುಖ್ಯ ಪ್ರಾಧ್ಯಾಪಕರ ನಿವಾಸದಲ್ಲಿದ್ದ ಕಾರ್ಯಕ್ರಮವೊಂದಲ್ಲಿ ಈ ಜನರು ಭಾಗಿಯಾಗಿದ್ದರು. ಅಲ್ಲಿ ಸೇವನೆ ಮಾಡಿದ ಆಹಾರದಿಂದ ಈ ಅನಾರೋಗ್ಯ ಕಾಣಿಸಿಕೊಂಡಿದೆ ಎಂದು ಅನುಮಾನ ವ್ಯಕ್ತವಾಗಿದೆ.
ಭೇದಿ ಹಾಗೂ ವಾಂತಿ ಅತಿಯಾಗಿ ಸುಮಾರು ನೂರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ಇನ್ನು ಆರೋಗ್ಯ ಕೇಂದ್ರದಲ್ಲಿಯೂ ಹಲವಾರು ಜನರು ದಾಖಲಾಗಿದ್ದಾರೆ ಎಂದು ಹೇಳಲಾಗಿದ್ದು ಅತಿಯಾದ ನಿಶಕ್ತಿ ಉಂಟಾದವರಿಗೆ ಡ್ರಿಪ್ಸ್ ಅನ್ನು ಹಾಕಲಾಗಿದೆ.

ಪಿತೋರಿಯಾದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಲೆಕ್ಟರ್ ದೋಮನ್ ಸಿಂಗ್ ಭೇಟಿ ನೀಡಿದ್ದು, ರೋಗಿಗಳನ್ನು ಮಾತನಾಡಿಸಿದ್ದಾರೆ. ರೋಗಿಗಳ ಆರೋಗ್ಯವು ಸದ್ಯಕ್ಕೆ ಸುಧಾರಿಸಿದೆ ಎಂದು ಹೇಳಲಾಗಿದೆ.
ಇನ್ನು ಈ ಬಗ್ಗೆ ಎನ್ಡಿ ಟಿವಿಗೆ ಪ್ರತಿಕ್ರಿಯೆ ನೀಡಿರುವ ಕಲೆಕ್ಟರ್ ದೋಮನ್ ಸಿಂಗ್, "ನಾವು ಆಸ್ಪತ್ರೆಗೆ ತೆರಳಿ ಎಲ್ಲಾ ವಾರ್ಡ್ನಲ್ಲಿ ದಾಖಲಾಗಿರುವ ರೋಗಿಗಳ ಪರಿಶೀಲನೆ ನಡೆಸಿದೆವು. ಸಾಂಕ್ರಾ ಆರೋಗ್ಯ ಕೇಂದ್ರಕ್ಕೆ ದಾಖಲಾದ ರೋಗಿಗಳ ಪೈಕಿ ಹಲವಾರು ಮಂದಿ ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಹಲವರನ್ನು ಆಸ್ಪತ್ರೆಯಿಂದ ಬಿಡುಗಡೆಯೂ ಮಾಡಲಾಗಿದೆ. ಯಾವ ಕಾರಣದಿಂದಾಗಿ ಗ್ರಾಮದ ಹಲವರಿಗೆ ಈ ರೀತಿ ಆರೋಗ್ಯ ಸಮಸ್ಯೆ ಉಂಟಾಗಿದೆ ಎಂಬುವುದನ್ನು ಪರಿಶೀಲನೆ ನಡೆಸಲಾಗುವುದು," ಎಂದು ತಿಳಿಸಿದ್ದಾರೆ.
ಈ ವಿಚಾರದಲ್ಲಿ ಸಮಗ್ರವಾದ ತನಿಖೆ ನಡೆಸುವಂತೆ ಹಾಗೂ ವರದಿಯನ್ನು ಶೀಘ್ರದಲ್ಲೇ ನೀಡುವಂತೆ ಜಿಲ್ಲೆಯ ಅಧಿಕಾರಿಗಳಿಗೆ ಕಲೆಕ್ಟರ್ ಸೂಚನೆ ನೀಡಿದ್ದಾರೆ.
ಇನ್ನು ಈ ಹಿಂದೆ ಛತ್ತೀಸ್ಗಢದ ರಾಯಪುರದಲ್ಲಿ ಈ ರೀತಿಯ ಘಟನೆಯು ಜುಲೈ ತಿಂಗಳಿನಲ್ಲಿ ವರದಿ ಆಗಿತ್ತು. ರಾಯಪುರ ಜಿಲ್ಲೆಯ ತಿಲ್ದಾ ಸಗುಣ ಗ್ರಾಮದಲ್ಲಿ ಸುಮಾರು 208 ಜನರು ವಿಷಾಪೂರಿತ ಆಹಾರ ಸೇವನೆ ಮಾಡಿ ಏಕಾಏಕಿ ತೀವ್ರ ಅಸ್ವಸ್ತರಾಗಿದ್ದರು. ಇಷ್ಟು ದೊಡ್ಡ ಸಂಖ್ಯೆಯ ಜನರು ಅನಾರೋಗ್ಯಕ್ಕೆ ತುತ್ತಾದ ಕಾರಣ ಗ್ರಾಮದಲ್ಲಿ ಭಾರೀ ಸಂಚಲನ ಉಂಟಾಗಿತ್ತು.
ಈ ಪೈಕಿ 62 ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯ ಇಲಾಖೆ ತಂಡವು ಗ್ರಾಮದಲ್ಲಿ ವೈದ್ಯಕೀಯ ಶಿಬಿರವನ್ನು ಆಯೋಜಿಸಿತ್ತು. ಜಿಲ್ಲಾಧಿಕಾರಿ ಸೌರಭ್ ಕುಮಾರ್ ಸಂತ್ರಸ್ತರ ಯೋಗಕ್ಷೇಮದ ಬಗ್ಗೆ ವಿಚಾರಿಸಿದ್ದರು. ಎಲ್ಲಾ ರೋಗಿಗಳು ಚೇತರಿಸಿಕೊಂಡಿದ್ದರು.
(ಒನ್ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications