ಎಣ್ಣೆ ಮಾರಾಟ, ಎಣ್ಣೆ ಖರೀದಿ; ಏನೇ ಮಾಡಿದರೂ 51000 ರೂಪಾಯಿ ದಂಡ!
ರಾಯಪುರ್, ಆಗಸ್ಟ್ 9: ಮದ್ಯವನ್ನು ಮಾರಾಟ ಮಾಡಿದರೆ ಅಥವಾ ಮದ್ಯವನ್ನು ಖರೀದಿ ಮಾಡುವವರಿಗೆ ಈ ಗ್ರಾಮದಲ್ಲಿ ದುಬಾರಿ ದಂಡ ಬೀಳುತ್ತದೆ. ಒಂದು ಬಾರಿ ಎಣ್ಣೆ ಹೊಡೆದು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದರೆ 71,000 ರೂಪಾಯ ದಂಡ ಪಾವತಿಸಬೇಕಾಗುತ್ತದೆ.
ಸಾರ್ವಜನಿಕ ಪ್ರದೇಶಗಳಲ್ಲಿ ದುರ್ವರ್ತನೆ ಹಾಗೂ ಮದ್ಯಪಾನಕ್ಕೆ ನಿಯಂತ್ರಣ ಹೇರುವ ಉದ್ದೇಶದಿಂದ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಸ್ಥಳೀಯ ಆಡಳಿತ ಮಂಡಳಿ ನಿಯಮಗಳನ್ನು ಉಲ್ಲಂಘಿಸಿದವರು ಭಾರೀ ದಂಡ ಪಾವತಿಗೆ ಸಿದ್ಧರಾಗಬೇಕಾಗುತ್ತದೆ.
ಛತ್ತೀಸ್ಗಢದ ಬಲೋದ್ ಜಿಲ್ಲೆಯ ರಾಯ್ಪುರದಿಂದ ಸುಮಾರು 120 ಕಿಮೀ ದೂರದಲ್ಲಿರುವ ಘುಮ್ಕಾ ಗ್ರಾಮದಲ್ಲಿ ಇಂಥದೊಂದು ಕಟ್ಟುನಿಟ್ಟಿನ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಅಸಲಿಗೆ ಮದ್ಯ ಮಾರಾಟ ಮತ್ತು ಖರೀದಿಗೆ ನಿರ್ಬಂಧ ವಿಧಿಸಿದ್ದು ಏಕೆ?, ಆಡಳಿತ ಮಂಡಳಿಯ ನಿರ್ಬಂಧಕ್ಕೆ ಗ್ರಾಮಸ್ಥರ ರಿಯಾಕ್ಷನ್ ಹೇಗಿದೆ? ಸಾರ್ವಜನಿಕ ಪ್ರದೇಶದಲ್ಲಿ ಅವಾಚ್ಯ ಶಬ್ಧ ಬಳಸಿದರೆ ಎಷ್ಟು ದಂಡ ವಿಧಿಸಲಾಗುತ್ತದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಮದ್ಯ ಮಾರಾಟ ಮತ್ತು ಖರೀದಿಗೆ ದುಬಾರಿ ದಂಡ?
ಬಲೋದ್ ಜಿಲ್ಲೆಯ ಘುಮ್ಕಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೌಟುಂಬಿಕ ಹಿಂಸೆ ಹಾಗೂ ಅಪರಾಧ ಕೃತ್ಯಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಮದ್ಯಪಾನ ಮಾರಾಟ ಮತ್ತು ಖರೀದಿಗೆ ನಿರ್ಬಂಧ ವಿಧಿಸಲಾಗಿದೆ. ಆ ಮೂಲಕ ಮದ್ಯಮುಕ್ತ ಗ್ರಾಮ ನಿರ್ಮಾಣಕ್ಕೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಲೋದ್ ಜಿಲ್ಲಾ ಕೇಂದ್ರದಿಂದ ಕೇವಲ 10 ಕಿಲೋಮೀಟರ್ ದೂರದಲ್ಲಿರುವ ಗ್ರಾಮದಲ್ಲಿ ಈ ನಿಯಮಗಳನ್ನು ಕಾರ್ಯಗತಗೊಳಿಸಲು ಗ್ರಾಮ ಪಂಚಾಯತ್ನಿಂದ ಸರ್ವಾನುಮತದಿಂದ ಒಪ್ಪಿಗೆ ತೆಗೆದುಕೊಳ್ಳಲಾಗಿತ್ತು.

250 ಕುಟುಂಬಗಳನ್ನು ಹೊಂದಿರುವ ಗ್ರಾಮ
ಮದ್ಯ ಮಾರಾಟ ಮತ್ತು ಖರೀದಿಗೆ ನಿರ್ಬಂಧ ವಿಧಿಸಿರುವ ಗ್ರಾಮದಲ್ಲಿ ಜನಸಂಖ್ಯೆ ಎಷ್ಟು ಎಂಬುದನ್ನು ತಿಳಿದುಕೊಳ್ಳುವ ಕುತೂಹಲಕ್ಕೂ ಇಲ್ಲಿ ಉತ್ತರವಿದೆ. ಛತ್ತೀಸ್ ಗಢದ ಬುಲೋದ್ ಜಿಲ್ಲೆಯ ಘುಮ್ಕಾ ಗ್ರಾಮದಲ್ಲಿ 250 ಕುಟುಂಬಗಳು ವಾಸವಾಗಿದ್ದಾರೆ. ಈ ಗ್ರಾಮದ ಒಟ್ಟು ಜನಸಂಖ್ಯೆ 1500 ಎಂದು ತಿಳಿದು ಬಂದಿದೆ.

ಮದ್ಯ ಸಂಗ್ರಹಣೆ ಅಥವಾ ಮಾರಾಟಕ್ಕೆ 51000 ರೂ ದಂಡ
ಛತ್ತೀಸ್ ಗಢದ ಘುಮ್ಕಾ ಗ್ರಾಮದಲ್ಲಿ ಮದ್ಯ ಮಾರಾಟ ಅಥವಾ ಸಂಗ್ರಹಣೆಯಲ್ಲಿ ತೊಡಗಿರುವವರು 51,000 ರೂಪಾಯಿ ದಂಡವನ್ನು ವಿಧಿಸಲಾಗುತ್ತಿದೆ. ಅದೇ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಆಕ್ಷೇಪಾರ್ಹ ಭಾಷೆಯಲ್ಲಿ ಮಾತನಾಡಿದರೆ 20,000 ರೂಪಾಯಿ ದಂಡ ವಿಧಿಸಲಾಗುತ್ತದೆ.
ಮುಂದಿನ ವಾರದೊಳಗೆ ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೆ, ಒಂದು ಬಾರಿ ಬಳಸುವ ಪ್ಲಾಸ್ಟಿಕ್ಗಳ ಮಾರಾಟ ಮತ್ತು ಖರೀದಿಯನ್ನು ಪಂಚಾಯತ್ ನಿಷೇಧಿಸಿದೆ. ಈಗಾಗಲೇ ನಿಯಮ ಉಲ್ಲಂಘಿಸಿದ 12 ಜನರಿಗೆ ದಂಡ ವಿಧಿಸಲಾಗಿದೆ.
ಈ ನಿಯಮ ಜಾರಿಗೊಳಿಸಿದ ಮೊದಲ ದಿನವೇ 45,000 ರೂಪಾಯಿಗಳನ್ನು ದಂಡವಾಗಿ ಸಂಗ್ರಹಿಸಲಾಗಿದೆ. "ಗ್ರಾಮ ವಿಕಾಸ ಸಮಿತಿಗೆ ದಂಡ ವಿಧಿಸಲು ಅಧಿಕಾರ ನೀಡಲಾಗಿದೆ, ಅದನ್ನು ಗ್ರಾಮದ ಅಭಿವೃದ್ಧಿಗೆ ಬಳಸಲಾಗುವುದು. ಹೆಚ್ಚಿನ ಮದ್ಯ ಸೇವನೆಯು ಆಕ್ರಮಣಕಾರಿ ನಡವಳಿಕೆಯನ್ನು ಹೆಚ್ಚಿಸುತ್ತದೆ "ಎಂದು ಪಂಚಾಯತ್ ಕಾರ್ಯದರ್ಶಿ ಗೋದಾವರಿ ಪಿಸ್ಡಾ ಹೇಳಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ದುರ್ನಡತೆಗೆ ಮದ್ಯಪಾನವೇ ಕಾರಣ
"ಗ್ರಾಮಸ್ಥರು ಸರಳವಾದ ಸಾಂಪ್ರದಾಯಿಕ ಜೀವನಶೈಲಿಯನ್ನು ನಡೆಸುತ್ತಾರೆ. ಆದರೆ ನಮ್ಮ ಗ್ರಾಮದಲ್ಲಿ ಸಮಾಜ ವಿರೋಧಿ ಚಟುವಟಿಕೆಗಳು ಹೆಚ್ಚಳವಾಗಿದ್ದವು. ಗ್ರಾಮದ ಅನೇಕ ನಿವಾಸಿಗಳು, ಹೆಚ್ಚಾಗಿ ಹಿರಿಯ ನಾಗರಿಕರು ಮತ್ತು ಮಕ್ಕಳು, ಸಾರ್ವಜನಿಕ ಸ್ಥಳಗಳಲ್ಲಿ ರೌಡಿ ವರ್ತನೆ ತೋರುವುದನ್ನು ಸಹಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಹೀಗೆ ಅವಾಚ್ಯ ಶಬ್ದ ಬಳಕೆ ಹಾಗೂ ದುರ್ನಡತೆಗೆ ಮದ್ಯಪಾನವೇ ಮುಖ್ಯ ಕಾರಣ,"ಎಂಬುದನ್ನು ಕಂಡುಕೊಳ್ಳಲಾಗಿದೆ ಎಂದು ಗ್ರಾಮದ ಸರಪಂಚ್ ಸುನಿತಾ ಬಕ್ಷಿ ತಿಳಿಸಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications