ನಿಲ್ಲಿಸಿದ್ದ ಕಾರಿನಲ್ಲಿ ಸಿಕ್ಕ 52 ಕೆ.ಜಿ ಚಿನ್ನ, ₹11 ಕೋಟಿ ಹಣದ ಹಿಂದಿದೆ ಕರಾಳ ಸತ್ಯ
ಮಧ್ಯಪ್ರದೇಶದ ಭೋಪಾಲ್ನ ಹೊರವಲಯದಲ್ಲಿ ಇತ್ತೀಚೆಗೆ ಅನಾಥವಾಗಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ ಮತ್ತು ಬರೋಬ್ಬರಿ 11 ಕೋಟಿ ರೂಪಾಯಿ ಹಣ ಪತ್ತೆಯಾಗಿತ್ತು. ಈ ಘಟನೆ ಇಡೀ ದೇಶದ ಗಮನ ಸೆಳೆದಿತ್ತು, ಅಷ್ಟೊಂದು ಹಣ, ಚಿನ್ನವನ್ನು ಕಾರಿನಲ್ಲಿ ಯಾಕೆ, ಯಾರು ಬಿಟ್ಟು ಹೋದರು, ಎನ್ನುವ ಪ್ರಶ್ನೆ ಸಹಜವಾಗಿತ್ತು. ಈ ಪ್ರಕರಣವನ್ನು ಕೆದಕುತ್ತಾ ಹೋದಂತೆ ಅನೇಕ ಕರಾಳ ಸಂಗತಿಗಳು ಬಯಲಾಗಿವೆ.
ಜಾರಿ ನಿರ್ದೇಶನಾಲಯ (ಇಡಿ), ಆದಾಯ ತೆರಿಗೆ ಇಲಾಖೆ (ಐಟಿ), ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಮತ್ತು ಲೋಕಾಯುಕ್ತ ಪೊಲೀಸರು ಈ ಪ್ರಕರಣವನ್ನು ತನಿಖೆ ಮಾಡುತ್ತಿದ್ದು ಎಲ್ಲರ ತನಿಖೆಗಳು ಇದೀಗ ಮಧ್ಯಪ್ರದೇಶ ಸಾರಿಗೆ ಇಲಾಖೆಯಲ್ಲಿ ಮಾಜಿ ಕಾನ್ಸ್ಟೆಬಲ್ ಆಗಿದ್ದ ಸೌರಭ್ ಶರ್ಮಾರತ್ತ ಬೊಟ್ಟು ಮಾಡುತ್ತಿವೆ.

ಎನ್ಡಿಟಿವಿ ವರದಿ ಪ್ರಕಾರ, ಸೌರಭ್ ಶರ್ಮಾ ಮಹಾ ಭ್ರಷ್ಟಾಚಾರಿ ಡಿಸೆಂಬರ್ 2024 ರಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದ ಸಂದರ್ಭದಲ್ಲಿ ಸೌರಭ್ ಶರ್ಮಾ ಬಳಿ ನಗದು, ಆಭರಣಗಳು ಮತ್ತು ಆಸ್ತಿ ದಾಖಲೆಗಳು ಸೇರಿದಂತೆ ಸುಮಾರು ₹8 ಕೋಟಿ ಮೌಲ್ಯದ ಆಸ್ತಿ ಇರುವುದು ಪತ್ತೆಯಾಗಿತ್ತು. ಬಳಿಕ ಭೋಪಾಲ್ ಬಳಿಯ ಮೆಂಡೋರಿ ಕಾಡಿನಲ್ಲಿ ಅನಾಥವಾಗಿ ನಿಂತಿದ್ದ ಟೊಯೋಟಾ ಕಾರಿನಲ್ಲಿ 52 ಕೆ.ಜಿ ಚಿನ್ನ ಮತ್ತು 11 ಕೋಟಿ ರೂಪಾಯಿ ಹಣ ಸಿಕ್ಕಿತ್ತು.
ಈ ಪ್ರಕರಣದ ಜಾಡು ಹಿಡಿದ ಅಧಿಕಾರಿಗಳು ಇದೀಗ ಇಡೀ ಮಧ್ಯಪ್ರದೇಶದ ಹಿರಿಯ ಸರ್ಕಾರಿ ಅಧಿಕಾರಿಗಳು ಮತ್ತು ರಿಯಲ್ ಎಸ್ಟೇಟ್ ವ್ಯವಹಾರಗಳ ವ್ಯಾಪಕ ಭ್ರಷ್ಟಾಚಾರ ಜಾಲವನ್ನು ಪತ್ತೆಹಚ್ಚಿದ್ದಾರೆ.
ಸೌರಭ್ ಶರ್ಮಾರಿಂದ ವಶಪಡಿಸಿಕೊಂಡಿರುವ ಆಸ್ತಿ ಮೌಲ್ಯದಲ್ಲಿ ನ್ಯಾಯಾಲಯದ ದಾಖಲೆಗಳು ಲೋಕಾಯುಕ್ತ ವಶಪಡಿಸಿಕೊಂಡ ಆಸ್ತಿಗಳ ವರದಿಯಲ್ಲಿ ವ್ಯತ್ಯಾಸಗಳಿರುವುದು ಕಂಡು ಬಂದಿದೆ. ಆರಂಭದಲ್ಲಿ 7.98 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿತ್ತು, ಆದರೆ ಡಿಎಸ್ಪಿ ಹಂತದ ಅಧಿಕಾರಿಯೊಬ್ಬರು ಆಭರಣ ಮತ್ತು ಬೆಳ್ಳಿಯೊಂದಿಗೆ ₹55 ಲಕ್ಷ ಮಾತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಇದು ಭ್ರಷ್ಟಾಚಾರ ನಿಗ್ರಹ ಸಂಸ್ಥೆಯ ತನಿಖೆಯಲ್ಲಿ ನಿರ್ಲಕ್ಷ್ಯವೋ ಅಥವಾ ಬೇಕಂತಲೇ ಮಾಡಿರುವ ತಪ್ಪು ವರದಿಯೋ ಎನ್ನುವ ಪ್ರಶ್ನೆಗೆ ಕಾರಣವಾಗಿದೆ. ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಅನೇಕ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ ಇದೀಗ ತನಿಖೆ ನಡೆಸಲು ನಿರ್ಧರಿಸಿದೆ.
ಕಾರಿನ ಮಾಲೀಕ ಯಾರು?
ಹಲವು ಸಂಸ್ಥೆಗಳು ತನಿಖೆ ನಡೆಸುತ್ತಿದ್ದು, ಕಾಡಿನಲ್ಲಿ ಅನಾಥವಾಗಿ ಸಿಕ್ಕಿರುವ ಕಾರಿನಲ್ಲಿದ್ದ ಚಿನ್ನ ಮತ್ತು ಹಣವನ್ನು ಪಡೆಯಲು ಈವರೆಗೂ ಯಾರೂ ಕೂಡ ಮುಂದೆ ಬಂದಿಲ್ಲ. ಆದರೆ ಪತ್ತೆಯಾಗಿರುವ ಕಾರು ಸೌರಭ್ ಶರ್ಮಾ ಆಪ್ತನಾದ ಚೇತನ್ ಸಿಂಗ್ ಗೌರ್ ಎನ್ನುವವರ ಹೆಸರಿನಲ್ಲಿ ನೊಂದಾಯಿಸಲಾಗಿದೆ. ಆದರೆ ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಶರ್ಮಾ ಆರೋಪವನ್ನು ನಿರಾಕರಿಸಿದ್ದಾರೆ. ಚಾಲಕನಿಗೆ ವಾಹನವನ್ನು ಕೊಟ್ಟಿದ್ದೆ ಎಂದು ಹೇಳಿದ್ದಾರೆ.
ಲೋಕಾಯುಕ್ತ ದಾಳಿ ನಡೆದ ರಾತ್ರಿ ಶರ್ಮಾ ಅವರ ಮನೆಯ ಬಳಿಕ ಕಾರು ಇರುವುದನ್ನು ಸಿಸಿಟಿವಿ ದೃಶ್ಯಗಳು ದೃಢಪಡಿಸಿವೆ. ಆದರೆ ಲೋಕಾಯುಕ್ತರು ಈ ವಾಹನವನ್ನು ತಡೆಯಲು ವಿಫಲವಾದರು, ಲೋಕಾಯುಕ್ತ ದಾಳಿ ವೇಳೆಯೇ ಕಾರು ಮನೆಯಿಂದ ಹೊರಹೋಗಿದೆ ಎನ್ನಲಾಗಿದೆ.
ತನಿಖೆ ಈಗ ಮಧ್ಯಪ್ರದೇಶವನ್ನು ಮೀರಿ ವ್ಯಾಪಿಸಿದೆ. ಅಕ್ರಮ ಚಿನ್ನದ ಕಳ್ಳಸಾಗಾಣೆ ಜಾಲದ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ. ದುಬೈ, ಸ್ವಿಟ್ಜರ್ಲೆಂಡ್ ಮತ್ತು ಆಸ್ಟ್ರೇಲಿಯಾ ಜೊತೆಗೈ ಶರ್ಮಾರ ಹಣಕಾಸಿನ ವ್ಯವಹಾರಗಳನ್ನು ಹೊಂದಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. 52 ಜಿಲ್ಲೆಗಳ ಸಾರಿಗೆ ಅಧಿಕಾರಿಗಳು ಒಟ್ಟು 100 ಕೋಟಿ ರೂಪಾಯಿ ಮೌಲ್ಯದ ವಹಿವಾಟು ನಡೆಸಿರುವುದು ಬೆಳಕಿಗೆ ಬಂದಿದೆ.
ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರು ಮಧ್ಯಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಬಗ್ಗೆ ಪತ್ರ ಬರೆದಿದ್ದು, ಇಡಿ ಮತ್ತು ಐಟಿ ಇಲಾಖೆ ವಿಶೇಷವಾಗಿ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
-
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications