ಉತ್ತರಾಖಂಡ, ಹಿಮಾಚಲದಲ್ಲಿ ಮಳೆಯ ಆರ್ಭಟಕ್ಕೆ 54 ಸಾವು: ಸ್ವಾತಂತ್ರ್ಯೋತ್ಸವಕ್ಕೆ ವರುಣನ ಅಡ್ಡಿ!
ಹಿಮಾಚಲ ಪ್ರದೇಶ ಮತ್ತು ನೆರೆಯ ಉತ್ತರಾಖಂಡದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕನಿಷ್ಠ 54 ಜನರು ಸಾವನ್ನಪ್ಪಿರುವುದು ವರದಿಯಾಗಿದೆ. ಬಿಟ್ಟು ಬಿಡದೆ ನಿರಂತವಾಗಿ ಸುರಿಯುತ್ತಿರುವ ಮಳೆಗೆ ಭೂಕುಸಿತ ಸಂಭವಿಸಿದ್ದು ಪ್ರಮುಖ ರಸ್ತೆ ಮತ್ತು ಹೆದ್ದಾರಿಗಳನ್ನು ನಿರ್ಬಂಧಿಸಿಸಲಾಗಿದೆ.
ಇದರಿಂದ ಅನೇಕ ಮನೆಗಳಿಗೆ ಹಾನಿಯಾಗಿದೆ. ಮಾತ್ರವಲ್ಲದೆ ಅನೇಕ ನದಿಗಳು ಉಕ್ಕಿ ಹರಿಯುತ್ತಿದ್ದರಿಂದ ಹಲವಾರು ಪ್ರದೇಶಗಳನ್ನು ಮುಳುಗಿಸಿವೆ. 54 ಜನರಲ್ಲಿ 51 ಮಂದಿ ಹಿಮಾಚಲ ಪ್ರದೇಶವೊಂದರಲ್ಲೇ ಮಳೆ ಸಂಬಂಧಿತ ಘಟನೆಗಳಲ್ಲಿ ಸಾವನ್ನಪ್ಪಿದ್ದಾರೆ.

ಹಿಮಾಚಲ ಪ್ರದೇಶ
ಹಿಮಾಚಲ ಪ್ರದೇಶ ವರುಣನ ಅರ್ಭಟಕ್ಕೆ ತತ್ತರಿಸಿ ಹೋಗಿದೆ. ಭೂಕುಸಿತಗಳಿಂದಾಗಿ ಅಪಾರ ಆಸ್ತಿ ಹಾಗೂ ಜೀವ ಹಾನಿ ಸಂಭವಿಸಿದೆ. ರಾಜಧಾನಿ ಶಿಮ್ಲಾದಲ್ಲಿ ಎರಡು ಭೂಕುಸಿತದ ಸ್ಥಳಗಳಿಂದ 14 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯದ ಅವಶೇಷಗಳ ಅಡಿಯಲ್ಲಿ ಇನ್ನೂ ಹೆಚ್ಚಿನ ಜನರು ಸಿಲುಕಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ದೇಗುಲವು ಭಕ್ತರಿಂದ ಕಿಕ್ಕಿರಿದು ತುಂಬಿತ್ತು, ಪವಿತ್ರ ತಿಂಗಳ ಸಾವನ್ನ ಪ್ರಮುಖ ದಿನದಂದು ಪ್ರಾರ್ಥನೆ ಸಲ್ಲಿಸಿದರು. ಮಂಡಿ ಜಿಲ್ಲೆಯಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಅರಿಂದಮ್ ಚೌಧರಿ ಪಿಟಿಐಗೆ ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಮತ್ತೊಂದು ಕೆಟ್ಟ ಪೀಡಿತ ಜಿಲ್ಲೆ ಸೋಲನ್. ಇಲ್ಲಿ ಒಂದು ಕುಟುಂಬದ ಏಳು ಸದಸ್ಯರು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಕುಲು, ಕಿನ್ನೌರ್ ಮತ್ತು ಲಾಹೌಲ್ ಮತ್ತು ಸ್ಪಿತಿ ಹೊರತುಪಡಿಸಿ ರಾಜ್ಯದ 12 ಜಿಲ್ಲೆಗಳ ಪೈಕಿ ಒಂಬತ್ತು ಜಿಲ್ಲೆಗಳಲ್ಲಿ ಸೋಮವಾರ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಇಂದೂ ಕೂಡ ಅಧಿಕ ಮಳೆಯ ಸೂಚನೆಯನ್ನು ಐಎಂಡಿ ನೀಡಿದೆ.

ಶಿಮ್ಲಾ: ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿ
ಭಾರೀ ಮಳೆಯು ಶಿಮ್ಲಾದಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತಗಳು ಮತ್ತು ಬೇರುಸಹಿತ ಮರಗಳು ವಿದ್ಯುತ್ ತಂತಿಗಳನ್ನು ಹಾನಿಗೊಳಿಸಿದ್ದರಿಂದ ಭಾನುವಾರ ರಾತ್ರಿಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಶಿಮ್ಲಾದ ಸಮ್ಮರ್ ಹಿಲ್ ಪ್ರದೇಶದ ಶಿವ ದೇವಾಲಯದಿಂದ ಒಂಬತ್ತು ದೇಹಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ. ಇತರ ಸೈಟ್ನಲ್ಲಿ ಹಲವಾರು ಮನೆಗಳು ಮಣ್ಣು ಮತ್ತು ಕೆಸರಿನ ಅಡಿಯಲ್ಲಿ ಹೂತುಹೋಗಿವೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ.
ಶಾಲಾ-ಕಾಲೇಜುಗಳಿಗೆ ರಜೆ
ಹಿಮಾಚಲವನ್ನು ಮಳೆ ಹಿಂಡಿ ಹಿಪ್ಪೆಯಾಗಿಸಿದೆ. ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಸೋಮವಾರ ರಜೆ ನೀಡಲಾಗಿದೆ. ಸೋಲನ್ ಜಿಲ್ಲೆಯ ಜಾಡೋನ್ ಗ್ರಾಮದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಮೇಘಸ್ಫೋಟದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿದ್ದಾರೆ. ಮೇಘಸ್ಫೋಟಕ್ಕೆ ಜಿಲ್ಲೆಯ ಎರಡು ಮನೆಗಳು ಕೊಚ್ಚಿ ಹೋಗಿವೆ. ಆರು ಜನರನ್ನು ರಕ್ಷಿಸಲಾಗಿದ್ದರೆ, ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಂಡಗಳು ಗುಡ್ಡಗಾಡು ರಾಜ್ಯದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಯುನೆಸ್ಕೋ ವಿಶ್ವ ಪರಂಪರೆಯ ಶಿಮ್ಲಾ-ಕಲ್ಕಾ ರೈಲು ಮಾರ್ಗವು ಶಿಮ್ಲಾದ ಸಮ್ಮರ್ ಹಿಲ್ ಬಳಿ 50 ಮೀಟರ್ ಸೇತುವೆಯನ್ನು ಭೂಕುಸಿತದ ನಂತರ ಹಾನಿಗೊಳಗಾಗಿದೆ. ಇದರಿಂದ ಹಳಿಗಳ ಒಂದು ಭಾಗ ಗಾಳಿಯಲ್ಲಿ ನೇತಾಡುತ್ತಿದೆ.
ಸೇನೆಯ ಜೊತೆಗೆ ಎಸ್ಡಿಆರ್ಎಫ್, ಎನ್ಡಿಆರ್ಎಫ್, ಐಟಿಬಿಪಿ ಮತ್ತು ರಾಜ್ಯ ಪೊಲೀಸ್ ಸಿಬ್ಬಂದಿಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಆಗಸ್ಟ್ 18 ರವರೆಗೆ ರಾಜ್ಯದಲ್ಲಿ ಆರ್ದ್ರ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7,171 ಕೋಟಿ ರೂಪಾಯಿ ನಷ್ಟ
ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಜೂನ್ 24 ರಂದು ಮುಂಗಾರು ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ರಾಜ್ಯವು 7,171 ಕೋಟಿ ರೂಪಾಯಿಗಳಷ್ಟು ನಷ್ಟವನ್ನು ಅನುಭವಿಸಿದೆ. ಈ ಮಳೆಗಾಲದಲ್ಲಿ ರಾಜ್ಯದಲ್ಲಿ ಒಟ್ಟು 170 ಮೇಘಸ್ಫೋಟ ಮತ್ತು ಭೂಕುಸಿತದ ಘಟನೆಗಳು ವರದಿಯಾಗಿವೆ ಮತ್ತು ಸುಮಾರು 9,600 ಮನೆಗಳು ಭಾಗಶಃ ಅಥವಾ ಸಂಪೂರ್ಣವಾಗಿ ಹಾನಿಗೊಳಗಾಗಿವೆ.
ಸ್ವಾತಂತ್ರ್ಯ ದಿನದ ಆಚರಣೆಗೆ ಅಡ್ಡಿಯಾದ ಮಳೆ
ಹಿಮಾಚಲ ಪ್ರದೇಶದಲ್ಲಿ ಮಳೆಯ ಆರ್ಭಟದಿಂದಾಗಿ, ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳಿಲ್ಲದೆ ರಾಜ್ಯದಾದ್ಯಂತ ಸ್ವಾತಂತ್ರ್ಯೋತ್ಸವ ಆಚರಣೆಗಳನ್ನು ಮಾಡಲಾಗುತ್ತಿಲ್ಲ. ಮನಾಲಿಯಲ್ಲಿ ನಡೆಯಬೇಕಿದ್ದ ರಾಜ್ಯ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಶಿಮ್ಲಾಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಶಿಮ್ಲಾದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಮತ್ತು ಮನಾಲಿ ಈಗ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಧ್ವಜಾರೋಹಣ, ಮೆರವಣಿಗೆ ಮತ್ತು ಮುಖ್ಯ ಅತಿಥಿ ಭಾಷಣ ಮಾತ್ರ ಗುಡ್ಡಗಾಡು ರಾಜ್ಯದ ವಿವಿಧ ಸ್ಥಳಗಳಲ್ಲಿ ಆಚರಣೆಗಳನ್ನು ಗುರುತಿಸುತ್ತದೆ ಎಂದು ಸರ್ಕಾರ ಹೇಳಿದೆ. ಸ್ಥಳೀಯ ಪೊಲೀಸರು ಮತ್ತು ಎಸ್ಡಿಆರ್ಎಫ್ ಸಿಬ್ಬಂದಿ ಈ ಕಾರ್ಯದಲ್ಲಿ ಭಾಗವಹಿಸುವುದಿಲ್ಲ ಏಕೆಂದರೆ ಅವರು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅದು ಹೇಳಿದೆ.
ಉತ್ತರಾಖಂಡದಲ್ಲಿ ಮಳೆಯ ಅರ್ಭಟ
ನೆರೆಯ ಉತ್ತರಾಖಂಡದಲ್ಲಿ, ಧಾರಾಕಾರ ಮಳೆಯಿಂದಾಗಿ ಸೋಮವಾರ ಮೂರು ಜನರು ಸಾವನ್ನಪ್ಪಿದ್ದಾರೆ. ಇತರ 10 ಮಂದಿ ನಾಪತ್ತೆಯಾಗಿದ್ದಾರೆ. ಕಟ್ಟಡಗಳು ನೆಲಸಮವಾಗಿವೆ. ಭೂಕುಸಿತದಿಂದಾಗಿ ಹೆದ್ದಾರಿಗಳು ಬಂದ್ ಆಗಿದ್ದು ಬದರಿನಾಥ್, ಕೇದಾರನಾಥ ಮತ್ತು ಗಂಗೋತ್ರಿ ದೇಗುಲಗಳಿಗೆ ಪ್ರಯಾಣ ತಾತ್ಕಾಲಿಕ ರದ್ದುಗೊಳಿಸಲಾಗಿದೆ. ಇದರ ಬೆನ್ನಲ್ಲೇ ಚಾರ್ಧಾಮ್ ಯಾತ್ರೆಯನ್ನು ಎರಡು ದಿನಗಳ ಕಾಲ ಸ್ಥಗಿತಗೊಳಿಸಲಾಗಿತ್ತು.












Click it and Unblock the Notifications