ದೆಹಲಿಯಿಂದ ಐರ್ಲೆಂಡ್ಗೆ ತೆರಳಲಿದ್ದಾರೆ ಕೇರಳದ 55 ನರ್ಸ್ಗಳು
ನವದೆಹಲಿ, ಜೂನ್ 01 : ವಂದೇ ಭಾರತ್ ಮಿಷನ್ ಅಡಿ ದೆಹಲಿಯಿಂದ ಐರ್ಲೆಂಡ್ಗೆ ಏರ್ ಇಂಡಿಯಾ ವಿಮಾನ ಇಂದು ಸಂಚಾರ ನಡೆಸಲಿದೆ. ಕೇರಳದ 55 ನರ್ಸ್ಗಳು ಈ ವಿಮಾನದಲ್ಲಿ ಐರ್ಲೆಂಡ್ಗೆ ತೆರಳಲಿದ್ದಾರೆ.
ಐರ್ಲೆಂಡ್ನಲ್ಲಿ ಕೆಲಸ ಮಾಡುತ್ತಿದ್ದ ಕೆಲವು ನರ್ಸ್ಗಳು ರಜೆ ಮೇಲೆ ಕೇರಳಕ್ಕೆ ಬಂದಿದ್ದರು. ಇನ್ನೂ ಕೆಲವರು ಈಗ ಕೆಲಸಕ್ಕೆ ಸೇರಿದ್ದು, ಮೊದಲ ಬಾರಿಗೆ ಅಲ್ಲಿಗೆ ತೆರಳುತ್ತಿದ್ದಾರೆ. ಏಪ್ರಿಲ್ 10ರಂದು ತೆರಳಬೇಕಿದ್ದ ಎಲ್ಲರೂ ಲಾಕ್ ಡೌನ್ ಪರಿಣಾಮ ತಡವಾಗಿ ಹೊರಡುತ್ತಿದ್ದಾರೆ.
ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ್ದರಿಂದ ಅಂತರಾಷ್ಟ್ರೀಯ ವಿಮಾನ ಸಂಚಾರ ಸ್ಥಗಿತವಾಯಿತು. ಆದ್ದರಿಂದ, ನರ್ಸ್ಗಳ ಪ್ರಯಾಣ ವಿಳಂಬವಾಗಿತ್ತು. ಈಗ ವಿಶೇಷ ಏರ್ ಇಂಡಿಯಾ ವಿಮಾನದಲ್ಲಿ ಸಂಚರಿಸಲಿದ್ದಾರೆ.

ದುಬೈ, ಬೆಂಗಳೂರಿನಲ್ಲಿ ನರ್ಸ್ ಆಗಿ ಕೆಲಸ ಮಾಡಿದ್ದ ಟೀನಾ ಮ್ಯಾಥ್ಯೂ ಐರ್ಲೆಂಡ್ಗೆ ಹೋಗುತ್ತಿದ್ದಾರೆ. 4 ವರ್ಷದ ಮಗನನ್ನು ಕೇರಳದಲ್ಲಿಯೇ ಬಿಟ್ಟು ಹೋಗುತ್ತಿದ್ದು, ಆಕೆಯ ಪೋಷಕರು ಮಗುವನ್ನು ನೋಡಿಕೊಳ್ಳಲಿದ್ದಾರೆ.
ಸೌಮ್ಯಾ ಮ್ಯಾಥ್ಯೂ ಎಂಬ ನರ್ಸ್ ಸಹ ಐರ್ಲೆಂಡ್ಗೆ ವಾಪಸ್ ಆಗುತ್ತಿದ್ದಾರೆ. ಕಳೆದ 12 ವರ್ಷಗಳಿಂದ ಅವರು ಅಲ್ಲಿ ಕೆಲಸ ಮಾಡುತ್ತಿದ್ದಾರೆ. 55 ಜನರು ಸಹ ಏಪ್ರಿಲ್ 10ರಂದು ಐರ್ಲೆಂಡ್ಗೆ ಹೋಗಬೇಕಿತ್ತು. ಆದರೆ, ಲಾಕ್ ಡೌನ್ ಪರಿಣಾಮ ಜೂನ್ 1ರಂದು ಹೊರಡಲಿದ್ದಾರೆ.
ವಂದೇ ಭಾರತ್ ಮಿಷನ್ ಅಡಿ ಏರ್ ಇಂಡಿಯಾದ ವಿಶೇಷ ವಿಮಾನದಲ್ಲಿ 55 ಜನರು ಪ್ರಯಾಣ ಮಾಡಲಿದ್ದಾರೆ. ಐರ್ಲೆಂಡ್ ತಲುಪುತ್ತಿದ್ದಂತೆ 14 ದಿನಗಳ ಕಾಲ ಎಲ್ಲರೂ ಕ್ವಾರಂಟೈನ್ನಲ್ಲಿರಬೇಕು. ಬಳಿಕ ಎಲ್ಲರೂ ಕೆಲಸ ಆರಂಭಿಸಲಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ ವಿದೇಶಗಳಲ್ಲಿ ಭಾರತದ ಅದರಲ್ಲೂ ಕೇರಳದ ನರ್ಸ್ಗಳು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಯುಕೆಯಲ್ಲಿ ಶೇ 30, ಯುಸ್ನಲ್ಲಿ ಶೇ 15 ಮತ್ತು ಆಸ್ಟ್ರೇಲಿಯಾದಲ್ಲಿ ಶೇ 12ರಷ್ಟು ಕೇರಳಿಗರು ನರ್ಸ್ಗಳಾಗಿ ದುಡಿಯುತ್ತಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications