ಭಾರತದಲ್ಲಿ 58,097 ಹೊಸ ಕೊರೊನಾ ಕೇಸ್: 534 ಜನ ಬಲಿ
ನವದೆಹಲಿ ಜನವರಿ 5: ಭಾರತದಲ್ಲಿ ದಿನ ಕಳೆದಂತೆ ಕೊರೊನಾ ಮೂರನೇ ಅಲೆಯ ಆತಂಕ ಹೆಚ್ಚಾಗುತ್ತಿದೆ. ದೇಶದಲ್ಲಿ ಪ್ರತಿದಿನ ಕೊರೊನಾದೊಂದಿಗೆ ಓಮಿಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ದೇಶದಲ್ಲಿ ಅಧಿಕ ಕೊರೊನಾ ಹಾಗೂ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಇರುವ ರಾಜ್ಯಗಳಲ್ಲಿ ನೈಟ್ ಕರ್ಫ್ಯೂ ಜೊತೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರಲಾಗಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 58,097 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ಇದರಲ್ಲಿ 15,389 ಜನ ಗುಣಮುಖರಾಗಿದ್ದಾರೆ. ಜೊತೆಗೆ 534 ಜನ ಮಹಾಮಾರಿ ಕೊರೊನಾಕ್ಕೆ ಬಲಿಯಾಗಿದ್ದಾರೆ.
ಭಾರತದಲ್ಲಿ ಒಟ್ಟು ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 2,14,004 ರಷ್ಟಿದ್ದು, ಒಟ್ಟು ಈವರೆಗೆ 3,43,21,803 ಜನ ಚೇತರಿಸಿಕೊಂಡಿದ್ದಾರೆ. ಇನ್ನೂ ಸಾವಿನ ಸಂಖ್ಯೆ 4,82,551ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 147.72 ಕೋಟಿ ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 58,097 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ನಿನ್ನೆಯ 37,379 ಪ್ರಕರಣಗಳಿಗಿಂತ 55 ಪ್ರತಿಶತ ಹೆಚ್ಚಾಗಿದೆ.
ದೇಶವು ಡಿಸೆಂಬರ್ 28 ರಂದು ಸುಮಾರು 9,000 ಪ್ರಕರಣಗಳನ್ನು ವರದಿ ಮಾಡಿದೆ. ಆದ್ದರಿಂದ ಕೇವಲ ಒಂಬತ್ತು ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಈಗ ಆರು ಪಟ್ಟು ಹೆಚ್ಚಾಗಿದೆ. ಭಾರತದಲ್ಲಿ 2,135 ಓಮಿಕ್ರಾನ್ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 653 ಪ್ರಕರಣಗಳು ದಾಖಲಾಗಿದ್ದು, ದೆಹಲಿಯಲ್ಲಿ 464 ಪ್ರಕರಣಗಳಿವೆ. ಹೀಗಾಗಿ ಸೋಂಕು ಹರಡುವುದನ್ನು ತಡೆಗಟ್ಟಲು 15-18 ವರ್ಷದೊಳಗಿನವರಿಗೆ ಲಸಿಕೆ ಹಾಕಲಾಗುತ್ತಿದೆ. ಭಾರತದಲ್ಲಿ 147 ಕೋಟಿಗೂ ಹೆಚ್ಚು ಲಸಿಕೆ ಡೋಸ್ಗಳನ್ನು ನೀಡಲಾಗಿದ್ದು, ಇದು ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮಹತ್ವದ ಮೈಲಿಗಲ್ಲಾಗಿದೆ.

ಆರೋಗ್ಯ ಸಚಿವಾಲಯದ ಇತ್ತೀಚಿನ ಅಂಕಿಅಂಶಗಳ ಡೇಟಾವನ್ನು ಸಂಗ್ರಹಿಸಿದ ಅವಧಿಯಲ್ಲಿ ಸುಮಾರು 534 ಜನರು ಕೋವಿಡ್ನಿಂದ ಸಾವನ್ನಪ್ಪಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಕೇರಳದಲ್ಲಿ 432 ಸಾವುಗಳು ಸಂಭವಿಸಿವೆ. ಕೋವಿಡ್ ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ ಹಲವಾರು ರಾಜ್ಯಗಳು ರಾತ್ರಿ ಕರ್ಫ್ಯೂನಂತಹ ನಿರ್ಬಂಧಗಳನ್ನು ಘೋಷಿಸಿವೆ.
ಪ್ರಪಂಚದಾದ್ಯಂತ ಹೆಚ್ಚುತ್ತಿರುವ ಓಮಿಕ್ರಾನ್ ಪ್ರಕರಣಗಳು ಹೊಸ ಮತ್ತು ಹೆಚ್ಚು ಅಪಾಯಕಾರಿ ರೂಪಾಂತರಗಳನ್ನು ಹೊರಹೊಮ್ಮಿಸುವ ಅಪಾಯವನ್ನು ಹೆಚ್ಚಿಸಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ಅಥವಾ WHO ನಿನ್ನೆ ಹೇಳಿದೆ. ಈ ರೂಪಾಂತರವು ಪ್ರಪಂಚದಾದ್ಯಂತ ಕಾಡ್ಗಿಚ್ಚಿನಂತೆ ಹರಡುತ್ತಿದೆ. ಇದು ಸೌಮ್ಯ ಲಕ್ಷಣಗಳನ್ನು ಹೊಂದಿದೆ. ಹೀಗಾಗಿ ಸಾಂಕ್ರಾಮಿಕ ರೋಗವನ್ನು ನಿವಾರಿಸಬಹುದು ಮತ್ತು ಜನ ಜೀವನವು ಹೆಚ್ಚು ಸಾಮಾನ್ಯ ಸ್ಥಿತಿಗೆ ಮರಳಬಹುದು ಎಂಬ ಭರವಸೆಯನ್ನು ಮೂಡಿಸಿದೆ ಎಂದು WHO ಹೇಳಿದೆ. ಆದರೆ WHO ಹಿರಿಯ ತುರ್ತು ಅಧಿಕಾರಿ ಕ್ಯಾಥರೀನ್ ಸ್ಮಾಲ್ವುಡ್ ಓಮಿಕ್ರಾನ್ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಇದು ಹೆಚ್ಚುತ್ತಿರುವ ಸೋಂಕಿನ ಪ್ರಮಾಣಗಳ ವಿರುದ್ಧ ಪರಿಣಾಮವನ್ನು ಬೀರಬಹುದು ಎಂದು ಸುದ್ದಿ ಸಂಸ್ಥೆ AFPಗೆ ತಿಳಿಸಿದ್ದಾರೆ.

ಹೀಗಾಗಿ ಓಮಿಕ್ರಾನ್ ವೇಗವಾಗಿ ಹರಡುತ್ತಿರುವುದು ಆತಂಕವನ್ನು ಹೆಚ್ಚಿಸುತ್ತಿದೆ. ಇದರೊಂದಿಗೆ ಕೊರೊನಾ ಸೋಂಕಿತರ ಸಂಖ್ಯೆ ಕೂಡ ಅಧಿಕಗೊಳ್ಳುತ್ತಿದ್ದು ದೇಶದಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುನ್ನುಡಿ ಬರೆದಿದೆ.
Recommended Video
-
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ?












Click it and Unblock the Notifications