ದಾಖಲೆ ಪ್ರಮಾಣದಲ್ಲಿ ತುಟ್ಟಿಭತ್ಯೆ ಹೆಚ್ಚಳಕ್ಕೆ ಮುಂದಾದ ಮೋದಿ ಸರ್ಕಾರ
ನವದೆಹಲಿ, ಜುಲೈ 01: ಮೋದಿ ಸರ್ಕಾರ್ 2.0 ಸ್ಥಾಪನೆಯಾದ ಬಳಿಕ ಚೊಚ್ಚಲ ಬಜೆಟ್ ಮಂಡನೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಜ್ಜಾಗಿದ್ದಾರೆ. ಈ ನಡುವೆ ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನೀಡಲು ಮೋದಿ ಸರ್ಕಾರ ಮುಂದಾಗಿದೆ.
7ನೇ ವೇತನ ಆಯೋಗ ಸ್ಥಾಪನೆಗೊಂಡಾಗಿನಿಂದ ಇಲ್ಲಿ ತನಕ ನೀಡದಷ್ಟು ದೊಡ್ಡ ಪ್ರಮಾಣದಲ್ಲಿ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಘೋಷಣೆ ಸಾಧ್ಯತೆ ಕಂಡು ಬಂದಿದೆ.
ತುಟ್ಟಿಭತ್ಯೆ ಪ್ರಮಾಣ ಕೂಡಾ ಶೇ3ರ ಬದಲಿಗೆ ಶೇ 4ಕ್ಕಿಂತ ಅಧಿಕವಾಗುವ ನಿರೀಕ್ಷೆಯಿದೆ ಎಂದು ಅಖಿಲ ಭಾರತ ಅಕೌಂಟ್ಸ್ ಹಾಗೂ ಆಡಿಟ್ ಸಂಸ್ಥೆಯ ಸಹಾಯಕ ಕಾರ್ಯದರ್ಶಿ ಹರಿಶಂಕರ್ ತಿವಾರಿ ಹೇಳಿದ್ದರು. ಆದರೆ, ಶೇ 5ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಜುಲೈ ತಿಂಗಳಿನಲ್ಲೇ ಸರ್ಕಾರ ಘೋಷಿಸಲು ಸಜ್ಜಾಗಿದೆ.

ಲಭ್ಯ ಮಾಹಿತಿಯಂತೆ ಶೇ12 ರಿಂದ ಶೇ 17ಕ್ಕೆ ಡಿಎ ಏರಿಕೆಯಾಗಲಿದೆ. ಗ್ರಾಹಕ ದರ ಸೂಚ್ಯಂಕ, ಸಗಟು ಹಣದುಬ್ಬರ ಗಮನಿಸಿ, ಅಖಿಲ ಭಾರತ ಗ್ರಾಹಕ ದರ ಸೂಚ್ಯಂಕ(ಎಐಸಿಪಿಐ) ಏಪ್ರಿಲ್ ನಲ್ಲಿ ಏರಿಕೆಯಾಗಿದೆ.
ಈ ಹಿಂದಿನ ಅಪ್ಡೇಟ್ಸ್ : ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಜುಲೈ 01,2018ರಿಂದ ಅನ್ವಯವಾಗುವಂತೆ ಶೇ.2ರಷ್ಟು ಹೆಚ್ಚಳ ಮಾಡಲಾಗಿತ್ತು. ಶೇ 13.39ರಿಂದ ಶೇ 15.49ಕ್ಕೇರಿಯಾಗಿತ್ತು.
ಇದರಿಂದ ಸುಮಾರು 1.1 ಕೋಟಿ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ನೆರವಾಗಲಿದ್ದು, ಕೇಂದ್ರ ಸರ್ಕಾರದ ಮೇಲೆ ವಾರ್ಷಿಕವಾಗಿ 6,112.20 ಕೋಟಿ ರೂ. ಹೆಚ್ಚಿನ ಹೊರೆ ಬೀಳಲಿದೆ. 2013-14ರಲ್ಲಿ 63,000 ಕೋಟಿ ಇದ್ದ ಇಲಾಖೆಯ ಬಹೆಟ್ ಈಗ 2018-19ರಲ್ಲಿ 110 ಲಕ್ಷ ಕೋಟಿಗೆ ಏರಿಕೆಯಾಗಿದೆ.
2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆ ಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ. ಆದರೆ, ನಿವೃತ್ತಿ ವಯಸ್ಸು ಏರಿಕೆ, ಕನಿಷ್ಠ ವೇತನದಲ್ಲಿ ಬದಲಾವಣೆ ಬಗ್ಗೆ ಸುಳಿವು ಸಿಕ್ಕಿಲ್ಲ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications