ಐದು ವರ್ಷದಲ್ಲಿ ಭಾರತದ ಪೌರತ್ವ ತೊರೆದವರ ಸಂಖ್ಯೆ 6.76 ಲಕ್ಷ
ನವದೆಹಲಿ, ಫೆಬ್ರವರಿ 10: ಭಾರತದಲ್ಲಿ 2015 ರಿಂದ 2019ರ ಅವಧಿಯಲ್ಲಿ 6.76 ಲಕ್ಷ ಭಾರತೀಯರು ತಮ್ಮ ಪೌರತ್ವ ತ್ಯಜಿಸಿದ್ದಾರೆ. ಐದು ವರ್ಷದಲ್ಲಿ ಒಟ್ಟು 6,76,074 ಲಕ್ಷ ಜನರು ಭಾರತದ ಪೌರತ್ವ ತೊರೆದಿರುವುದಾಗಿ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ತಮಿಳುನಾಡಿನ ಶಿವಗಂಗಾ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರು ಕೇಳಿದ ಪ್ರಶ್ನೆಗೆ ಗೃಹ ಸಚಿವಾಲಯ ಲಿಖಿತ ಉತ್ತರ ನೀಡಿದೆ. 2015ರಲ್ಲಿ 1,41,656 ಜನರು, 2016ರಲ್ಲಿ 1,44942, 2017ರಲ್ಲಿ 1,27,905, 2018ರಲ್ಲಿ 1,25,130 ಮತ್ತು 2019ರಲ್ಲಿ 1,36,441 ಜನರು ಭಾರತದ ನಾಗರಿಕ ಸೌಲಭ್ಯವನ್ನು ತ್ಯಜಿಸಿದ್ದಾರೆ.
ವಿದೇಶಗಳಲ್ಲಿ ಒಟ್ಟು 1,24,99,395 ಭಾರತೀಯರು ನೆಲೆಸಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ಹಾಗೆಯೇ ದ್ವಿಪೌರತ್ವ ನೀಡುವ ಯಾವುದೇ ಪ್ರಸ್ತಾಪವನ್ನು ಸರ್ಕಾರ ಪ್ರಸ್ತುತ ಪರಿಗಣಿಸುತ್ತಿಲ್ಲ ಎಂದು ಅದು ಲಿಖಿತ ಪ್ರತಿಕ್ರಿಯೆಯಲ್ಲಿ ತಿಳಿಸಿದೆ.

ಓವರ್ಸೀಸ್ ಸಿಟಿಜನ್ ಆಫ್ ಇಂಡಿಯಾ (ಒಸಿಐ) ಕಾರ್ಡ್ಗಳಿಗೆ ಅರ್ಜಿ ಸಲ್ಲಿಸಿರುವ ಜನರ ಸಂಖ್ಯೆಯ ಕುರಿತಾದ ಪ್ರಶ್ನೆಗೆ, 2020ರಲ್ಲಿ ಒಟ್ಟು 1,91,609 ಮಂದಿ ವಿದೇಶಿಗರು ಒಸಿಐ ಕಾರ್ಡುದಾರರಾಗಿ ನೋಂದಣಿ ಮಾಡಿಸಿಕೊಂಡಿರುವುದಾಗಿ ಸಚಿವಾಲಯ ಹೇಳಿದೆ.
ಕಳೆದ ಐದು ವರ್ಷಗಳಲ್ಲಿ ಬೇರೊಂದು ದೇಶಕ್ಕಾಗಿ ಭಾರತದ ಪೌರತ್ವ ತ್ಯಜಿಸಿದ ಮತ್ತು ಪ್ರಸ್ತುತ ವಿದೇಶಗಳಲ್ಲಿ ನೆಲೆಸಿರುವ ಭಾರತೀಯರ ಸಂಖ್ಯೆಗಳನ್ನು ನೀಡುವಂತೆ ಕಾರ್ತಿ ಚಿದಂಬರಂ ಕೋರಿದ್ದರು. ಇದಕ್ಕೆ ಗೃಹಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಬಳಿ ಲಭ್ಯವಿರುವ ಮಾಹಿತಿಗೆ ಅನುಗುಣವಾಗಿ ಲಿಖಿತ ಉತ್ತರ ನೀಡಿದ್ದಾರೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications