ಮೇಘಾಲಯದಲ್ಲಿ ಗಣಿ ಅವಘಡ; ಆರು ಕಾರ್ಮಿಕರ ಸಾವು
ಶಿಲ್ಲಾಂಗ್, ಜನವರಿ 22: ಗಣಿಗಾರಿಕೆ ಸಂಬಂಧಿ ಅವಘಡದಲ್ಲಿ ಆರು ಗಣಿ ಕಾರ್ಮಿಕರು ಪ್ರಾಣ ಕಳೆದುಕೊಂಡಿರುವ ಘಟನೆ ಕಲ್ಲಿದ್ದಲು ಸಮೃದ್ಧ ಮೇಘಾಲಯದ ಪೂರ್ವ ಜೈಂತಿಯಾ ಪ್ರದೇಶದಲ್ಲಿ ನಡೆದಿದೆ.
ಗುರುವಾರ ರಾತ್ರಿ ವೇಳೆ ದೈಂಶಾಲಾಲು, ಸರ್ಕಾರಿ, ರಿಂಬಿಯಾ ಗ್ರಾಮದ ಸಮೀಪದ ಗಣಿಗಾರಿಕಾ ಪ್ರದೇಶದಲ್ಲಿ ಅವಘಡ ಸಂಭವಿಸಿರುವುದಾಗಿ ಉಪ ಆಯುಕ್ತ ಕರ್ಮಲ್ಕಿ ತಿಳಿಸಿದ್ದಾರೆ. ಗಣಿ ಪ್ರದೇಶದಲ್ಲಿ ಹಳ್ಳ ತೋಡುತ್ತಿದ್ದು, ಈ ಸಂದರ್ಭ ಯಂತ್ರ ಕಳಚಿ ಎಲ್ಲರೂ ಕೆಳಗೆ ಬಿದ್ದು ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಸತ್ತ ಆರು ಮಂದಿಯಲ್ಲಿ ಐವರ ಗುರುತು ಪತ್ತೆಯಾಗಿದ್ದು, ಅವರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ. ಸತ್ತವರೆಲ್ಲರೂ ನೆರೆಯ ಅಸ್ಸಾಂನಿಂದ ಗಣಿ ಕೆಲಸಕ್ಕೆ ಇಲ್ಲಿಗೆ ಬಂದಿದ್ದರು ಎನ್ನಲಾಗಿದೆ.

ಇವರು ಕಲ್ಲಿದ್ದಲು ಗಣಿಗಾರಿಕೆಯಲ್ಲಿ ತೊಡಗಿಕೊಂಡಿದ್ದರೇ ಅಥವಾ ಕಲ್ಲು ಗಣಿಗಾರಿಕೆ ಮಾಡುತ್ತಿದ್ದರೇ ಎಂಬುದರ ಬಗ್ಗೆ ಸ್ಪಷ್ಟನೆ ದೊರೆತಿಲ್ಲ. ಅವರು ಹಳ್ಳ ತೋಡುತ್ತಿದ್ದ ಜಾಗದಲ್ಲಿ ಕಲ್ಲಿದ್ದಲು ಇರಲಿಲ್ಲ ಎಂದು ಕರ್ಮಲ್ಕಿ ತಿಳಿಸಿದ್ದಾರೆ.
2018ರ ಡಿಸೆಂಬರ್ ನಲ್ಲಿಯೂ ಇದೇ ಸ್ಥಳದಲ್ಲಿ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ತೊಡಗಿಕೊಂಡಿದ್ದಾಗ ನೀರು ನುಗ್ಗಿ ಹದಿನೈದು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications