New Criminal Laws: ಹೊಸ ಅಪರಾಧ ಕಾನೂನಡಿ ರಾಜ್ಯದಲ್ಲಿ 63 ಪ್ರಕರಣ ದಾಖಲು
ನವದೆಹಲಿ, ಜುಲೈ 02: ಕೇಂದ್ರ ಸರ್ಕಾರ ಬ್ರಿಟೀಷ್ ಕಾನೂನುಗಳಿಗೆ ಮುಕ್ತಿ ನೀಡಿ, ಭಾರತೀಯ ನ್ಯಾಯ ಸಂಹಿತೆ ಎಂಬ ಹೊಸ ಕಾನೂನು ವ್ಯವಸ್ಥೆ ಜಾರಿಗೆ ತಂದಿದೆ. ಇದರ ಬೆನ್ನಲ್ಲೆ ದೇಶದಲ್ಲಿ ಹಾಗೂ ಕರ್ನಾಟಕದಲ್ಲಿ ಮೊದಲ FIRಗಳು ದಾಖಲಾಗಿವೆ. ಕರ್ನಾಟಕದಲ್ಲಿ ಮೊದಲ ದಿನವೇ ಸುಮಾರು 63 ಪ್ರಕರಣ ದಾಖಲಾಗಿವೆ. ಅವು ಎಲ್ಲಿ, ಯಾವ ಪ್ರಕರಣ ಎಂದು ತಿಳಿಯಿರಿ.
ಭಾರತೀಯ ದಂಡ ಸಂಹಿತೆಯನ್ನು ಬದಲಿಸಿದ ಹೊಸ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಮೊದಲ ಎಫ್ಐಆರ್ ಮಧ್ಯಪ್ರದೇಶದ ಭೋಪಾಲ್ನ ಹನುಮಂಗಂಜ್ ಪೊಲೀಸ್ ಠಾಣೆಯಲ್ಲಿ ಸೋಮವಾರ ದಾಖಲಾಗಿದೆ. ನಿಂದಿಸಿದ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹೊಸ ಕಾನೂನಿನಡಿ ಎಫ್ಐಆರ್ ದಾಖಲಾಗಿದೆ.

ಇನ್ನು ರಾಷ್ಟ್ರ ರಾಜಧಾನಿಯಲ್ಲಿ ಬೀದಿಬದಿ ವ್ಯಾಪಾರಿಯೊಬ್ಬರ ವಿರುದ್ಧ BNS ಅಡಿಯಲ್ಲಿ ದಾಖಲಿಸಲಾದ ಮೊದಲ ಎಫ್ಐಆರ್ ಅನ್ನು ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನೂ ಪ್ರತ್ಯೇಕ ಘಟನೆಯಲ್ಲಿ ಪ್ರಫುಲ್ ಚೌಹಾಣ್ ಎಂಬುವರು ನೀಡಿದ ದೂರಿನ ಮೇರೆಗೆ ಹನುಮಂಗಂಜ್ನಲ್ಲಿ ದೇಶದ ಮೊದಲ ಪ್ರಕರಣವನ್ನು ಸೋಮವಾರ ಬೆಳಗ್ಗೆ (12:16 AM) ದಾಖಲಾಯಿತು ಎಂದು ವರದಿ ಆಗಿದೆ.
ಗ್ವಾಲಿಯರ್ನಲ್ಲೂ ಕೇಸ್ ದಾಖಲು
ಇದಲ್ಲದೇ BNS ಅಡಿಯಲ್ಲಿ ಮೊದಲ ಎಫ್ಐಆರ್ ಗ್ವಾಲಿಯರ್ನ ಹಜಿರಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಲ್ಲಿ 1.10 ಲಕ್ಷ ಮೌಲ್ಯದ ದ್ವಿಚಕ್ರ ವಾಹನ ಕಳ್ಳತನ ಆರೋಪದ ಮೇರೆಗೆ ಎಫ್ಐಆರ್ ದಾಖಲಾಗಿದೆ.
BNS ನ ಸೆಕ್ಷನ್ 296 ಪ್ರಕಾರ, ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಅಶ್ಲೀಲ ಕೃತ್ಯವನ್ನು ಮಾಡುವವರು ಅಥವಾ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಅಥವಾ ಸಮೀಪದಲ್ಲಿ ಯಾವುದೇ ಅಶ್ಲೀಲ ಹಾಡು, ಬೈಗುಳ, ಅಶ್ಲೀಲ ಪದ ಬಳಸಿ ನಿಂದಿಸುವವರು, ಅಶ್ಲೀಲವಾಗಿ ಮಾತನಾಡುವವರಿಗೆ ಶಿಕ್ಷೆ ವಿಧಿಸುವ ಅಧಿಕಾರ ಇದೆ. ಮೂರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ಎರಡನ್ನು ವಿಧಿಸಬಹುದು.

ಭಾರತೀ ನ್ಯಾಯ ಸಂಹಿತೆ ಸೇರಿದಂತೆ ಮೂರು ಹೊಸ ಕಾನೂನುಗಳು ಸೋಮವಾರ ಬೆಳಗ್ಗೆ ಅಂದರೆ ಭಾನುವಾರ ಮಧ್ಯರಾತ್ರಿ (12.01ರಿಂದ) ಕಾರ್ಯಾರಂಭಕ್ಕೆ ತರಲಾಗಿದೆ. ಮೂರು ವರ್ಷಗಳಲ್ಲಿ ದಾಖಲಾದ ಪ್ರಕರಣ ಹಾಗೂ ಹೊಸ ಕಾನೂನುಗಳಡಿ ದಾಖಲಾದ ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ಗೆ ತಲಪಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು.
ಕರ್ನಾಟಕದಲ್ಲಿ ಒಟ್ಟು 63 ಕೇಸು ದಾಖಲು
ಹೊಸ ಕಾನೂನು ಜಾರಿಯಾದ ಬೆನ್ನಲ್ಲೆ ಕರ್ನಾಟಕದಲ್ಲಿ ಮೊದಲ ದಿನವೇ (ಜುಲೈ 01) ಸೋಮವಾರ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 63 ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ವಿಮಾನ ನಿಲ್ದಾಣದಿಂದ ಹಾಸನದತ್ತ ಬರುತ್ತಿದ್ದ ಕಾರೊಂದು ಸೀಗೆಗೇಟ್ ಬಳಿಕ ಉರಳಿ ಬಿದ್ದಿದೆ. ಘಟನೆಯಲ್ಲಿ ಇಂದುಮತಿ ಎಂಬುವವರು ಮೃತಪಟ್ಟಿದ್ದಾರೆ.
ಮೃತ ಇಂದುಮತಿ ಪತಿ ಹಾಗೂ ಕಾರು ಚಾಲಕನಿಗೆ ಗಾಯಗಳಾಗಿವೆ. ಇವರು ವಿಮಾನ ನಿಲ್ದಾಣದಿಂದ ಹಳೇಬಿಡಿಗೆ ಬರುತ್ತಿರುವಾಗ ಘಟನೆ ನಡೆದಿದೆ. ಇದು ಹೊಸ ಕಾನೂನಿನಡಿ ದಾಖಲಾದ ಮೊದಲ ಪ್ರಕರಣ ಎನ್ನಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಮೊದಲ ದಿನ ರಾತ್ರಿ 8ಗಂಟೆವರೆಗೆ 63 ಕೇಸು ದಾಖಲಾಗಿವೆ. ಬೆಂಗಳೂರಿನ HSR ಬಡಾವಣೆಯ ಪೊಲೀಸ್ ಠಾಣೆಯಲ್ಲಿ ಮೊದಲ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹೊಸ ಕ್ರಿಮಿನಲ್ ಕಾನೂನುಗಳು ಕಾನೂನು ವ್ಯವಸ್ಥೆಯ ಸುಧಾರಣೆಗೆ ಹೊಸ ರೂಪ ನೀಡಲಿವೆ ಎಂದು ಗೃಹ ಸಚಿವ ಅಮಿತ್ ಶಾ ನಂಬಿದ್ದಾರೆ. ಹೊಸ ಕಾನೂನು ಮೂಲಕ ನೂರಾರು ವರ್ಷಗಳಿಂದ ಚಾಲ್ತಿಯಲ್ಲಿದ್ದ ಬ್ರಿಟಿಷ್ ಕಾನೂನುಗಳಿಗೆ ಕೇಂದ್ರ ಮುಕ್ತಿ ಕೊಟ್ಟಿದೆ
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ










Click it and Unblock the Notifications