ಉತ್ತರಪ್ರದೇಶದಲ್ಲಿ ಕಳೆದ ಬಾರಿಗಿಂತ ಹೆಚ್ಚು ಮತದಾನ
ಉತ್ತರಪ್ರದೇಶದ 15 ಜಿಲ್ಲೆಗಳ 73 ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರದಂದು ಮೊದಲ ಹಂತದಲ್ಲಿ ಮತದಾನ ನಡೆಯಿತು. ಶೇ 64.2ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಲಕ್ನೋ, ಫೆಬ್ರವರಿ 11: ಉತ್ತರಪ್ರದೇಶದ 15 ಜಿಲ್ಲೆಗಳ 73 ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರದಂದು ಮೊದಲ ಹಂತದಲ್ಲಿ ಮತದಾನ ನಡೆಯಿತು. ಶೇ 64.2ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಒಟ್ಟಾರೆ 839 ಅಭ್ಯರ್ಥಿಗಳು ಕಣದಲ್ಲಿದ್ದು, 1.42 ಕೋಟಿ ಪುರುಷರು, 1.17 ಕೋಟಿ ಮಹಿಳೆಯರು ಮತ್ತು 1511 ತೃತೀಯ ಲಿಂಗಿಗಳು ಸೇರಿ 2.59 ಕೋಟಿ ಮತದಾರರು ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಈ ಹಿಂದಿನ ಫಲಿತಾಂಶ: 2012ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಈ 73 ಕ್ಷೇತ್ರಗಳಲ್ಲಿ ಎಸ್ಪಿ 24, ಬಿಎಸ್ಪಿ 23 ಬಿಜೆಪಿ 12, ಆರ್ಎಲ್ಡಿ 9 ಮತ್ತು ಕಾಂಗ್ರೆಸ್ 5 ಸ್ಥಾನಗಳಲ್ಲಿ ಜಯಗಳಿಸಿತ್ತು. 2014ರ ವಿಧಾನಸಭಾ ಚುನಾವಣೆಯಲ್ಲಿ ಈ ಪ್ರದೇಶದ ಎಲ್ಲಾ 12 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿತ್ತು.

ಪ್ರಮುಖ ಅಭ್ಯರ್ಥಿಗಳು: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪುತ್ರ ಪಂಕಜ್ ಸಿಂಗ್(ನೋಯ್ಡಾ ಕ್ಷೇತ್ರ), ಬಿಜೆಪಿ ಸಂಸದ ಹುಕುಂ ಸಿಂಗ್ ಪುತ್ರಿ ಮೃಗಂಕಾ(ಕೈರಾನ ಕ್ಷೇತ್), ಬಿಜೆಪಿ ಶಾಸಕ ಸಂಗೀತ್ ಸೋಮ್ ಹಾಗೂ ಸುರೇಶ್ ರಾಣಾ ಶಾರ್ಧನ್ ಹಾಗೂ ಥಾಣಾ ಭವನ್ ಕ್ಷೇತ್ರ, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅಳಿಯ ರಾಹುಲ್ ಸಿಂಗ್(ಎಸ್ಪಿ) ಸಿಖಂದರಾಬಾದ್, ರಾಜಸ್ಥಾನ ಗವರ್ನರ್ ಕಲ್ಯಾಣ್ ಸಿಂಗ್ ಅವರ ಮೊಮ್ಮಗ ಸಂದೀಪ್ ಸಿಂಗ್ ಅತ್ರೌಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.
63% voter turnout (tentative) in first phase of Uttar Pradesh election: Election commission pic.twitter.com/J174QYgEFn
— ANI (@ANI_news) February 11, 2017
ಮುಖ್ಯಚುನಾವಣಾಧಿಕಾರಿ ಟಿ ವೆಂಕಟೇಶ್ ಸುದ್ದಿಗೋಷ್ಠಿ ಮುಖ್ಯಾಂಶಗಳು
* 3,888 ಡಿಜಿಟಲ್ ಹಾಗೂ ವಿಡಿಯೋ ಕೆಮೆರಾಗಳ ನೆರವಿನಿಂದ 2,857 ಸ್ಥಳಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗಿದೆ.
* 2,96,906 ತಂಟೆಕೋರರನ್ನು ಗುರುತಿಸಲಾಗಿದೆ ಹಾಗೂ ಇವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗಿದೆ.
* 19.56 ಕೋಟಿ ನಗದು 4.44 ಲಕ್ಷ ಲೀಟರ್ ಅಕ್ರಮ ಮದ್ಯ(14 ಕೋಟಿ ಮೌಲ್ಯ) , 96.93 ಲಕ್ಷ ಮೌಲ್ಯದ ಮಾದಕ ವಸ್ತು, 14 ಕೋಟಿ ಮೌಲ್ಯದ ಬೆಳ್ಳಿಯನ್ನು ವಶಪಡಿಸಲಾಗಿದೆ.
* 2012ರಲ್ಲಿ ಶೇ61ರಷ್ಟು ಮತದಾನವಾಗಿತ್ತು, ಈ ಬಾರಿ ಶೇ 3ರಷ್ಟು ಹೆಚ್ಚು ಮತದಾನವಾಗಿದೆ.
* ಇಥಾ ಶೇ 73, ಮುಝಾಫರ್ ನಗರ್ ಶೇ 65, ಬುಲಂದ್ ಷರ್ ಶೇ64. ನೋಯ್ಡಾ ಶೇ 60, ಗಾಜಿಯಾಬಾದ್ ಶೇ 57ರಷ್ಟು ಮತದಾನ ಕಂಡಿದೆ.
* ಮೀರತ್ ನಲ್ಲಿ ಬಿಜೆಪಿ ಮುಖಂಡ ಸಂಗೀತ್ ಸೋಮ್ ಅವರ ಸೋದರ ಗಗನ್ ಸೋಮ್ ಅವರು ಬೂತ್ ನೊಳಗೆ ಪಿಸ್ತೂಲ್ ಜತೆಗೆ ಬಂದಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications