ಉತ್ತರಪ್ರದೇಶದಲ್ಲಿ ಕಳೆದ ಬಾರಿಗಿಂತ ಹೆಚ್ಚು ಮತದಾನ
ಉತ್ತರಪ್ರದೇಶದ 15 ಜಿಲ್ಲೆಗಳ 73 ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರದಂದು ಮೊದಲ ಹಂತದಲ್ಲಿ ಮತದಾನ ನಡೆಯಿತು. ಶೇ 64.2ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಲಕ್ನೋ, ಫೆಬ್ರವರಿ 11: ಉತ್ತರಪ್ರದೇಶದ 15 ಜಿಲ್ಲೆಗಳ 73 ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರದಂದು ಮೊದಲ ಹಂತದಲ್ಲಿ ಮತದಾನ ನಡೆಯಿತು. ಶೇ 64.2ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಒಟ್ಟಾರೆ 839 ಅಭ್ಯರ್ಥಿಗಳು ಕಣದಲ್ಲಿದ್ದು, 1.42 ಕೋಟಿ ಪುರುಷರು, 1.17 ಕೋಟಿ ಮಹಿಳೆಯರು ಮತ್ತು 1511 ತೃತೀಯ ಲಿಂಗಿಗಳು ಸೇರಿ 2.59 ಕೋಟಿ ಮತದಾರರು ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಈ ಹಿಂದಿನ ಫಲಿತಾಂಶ: 2012ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಈ 73 ಕ್ಷೇತ್ರಗಳಲ್ಲಿ ಎಸ್ಪಿ 24, ಬಿಎಸ್ಪಿ 23 ಬಿಜೆಪಿ 12, ಆರ್ಎಲ್ಡಿ 9 ಮತ್ತು ಕಾಂಗ್ರೆಸ್ 5 ಸ್ಥಾನಗಳಲ್ಲಿ ಜಯಗಳಿಸಿತ್ತು. 2014ರ ವಿಧಾನಸಭಾ ಚುನಾವಣೆಯಲ್ಲಿ ಈ ಪ್ರದೇಶದ ಎಲ್ಲಾ 12 ಲೋಕಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿತ್ತು.

ಪ್ರಮುಖ ಅಭ್ಯರ್ಥಿಗಳು: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಪುತ್ರ ಪಂಕಜ್ ಸಿಂಗ್(ನೋಯ್ಡಾ ಕ್ಷೇತ್ರ), ಬಿಜೆಪಿ ಸಂಸದ ಹುಕುಂ ಸಿಂಗ್ ಪುತ್ರಿ ಮೃಗಂಕಾ(ಕೈರಾನ ಕ್ಷೇತ್), ಬಿಜೆಪಿ ಶಾಸಕ ಸಂಗೀತ್ ಸೋಮ್ ಹಾಗೂ ಸುರೇಶ್ ರಾಣಾ ಶಾರ್ಧನ್ ಹಾಗೂ ಥಾಣಾ ಭವನ್ ಕ್ಷೇತ್ರ, ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಅಳಿಯ ರಾಹುಲ್ ಸಿಂಗ್(ಎಸ್ಪಿ) ಸಿಖಂದರಾಬಾದ್, ರಾಜಸ್ಥಾನ ಗವರ್ನರ್ ಕಲ್ಯಾಣ್ ಸಿಂಗ್ ಅವರ ಮೊಮ್ಮಗ ಸಂದೀಪ್ ಸಿಂಗ್ ಅತ್ರೌಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.
63% voter turnout (tentative) in first phase of Uttar Pradesh election: Election commission pic.twitter.com/J174QYgEFn
— ANI (@ANI_news) February 11, 2017
ಮುಖ್ಯಚುನಾವಣಾಧಿಕಾರಿ ಟಿ ವೆಂಕಟೇಶ್ ಸುದ್ದಿಗೋಷ್ಠಿ ಮುಖ್ಯಾಂಶಗಳು
* 3,888 ಡಿಜಿಟಲ್ ಹಾಗೂ ವಿಡಿಯೋ ಕೆಮೆರಾಗಳ ನೆರವಿನಿಂದ 2,857 ಸ್ಥಳಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗಿದೆ.
* 2,96,906 ತಂಟೆಕೋರರನ್ನು ಗುರುತಿಸಲಾಗಿದೆ ಹಾಗೂ ಇವರ ಮೇಲೆ ಸೂಕ್ತ ಕ್ರಮ ಜರುಗಿಸಲಾಗಿದೆ.
* 19.56 ಕೋಟಿ ನಗದು 4.44 ಲಕ್ಷ ಲೀಟರ್ ಅಕ್ರಮ ಮದ್ಯ(14 ಕೋಟಿ ಮೌಲ್ಯ) , 96.93 ಲಕ್ಷ ಮೌಲ್ಯದ ಮಾದಕ ವಸ್ತು, 14 ಕೋಟಿ ಮೌಲ್ಯದ ಬೆಳ್ಳಿಯನ್ನು ವಶಪಡಿಸಲಾಗಿದೆ.
* 2012ರಲ್ಲಿ ಶೇ61ರಷ್ಟು ಮತದಾನವಾಗಿತ್ತು, ಈ ಬಾರಿ ಶೇ 3ರಷ್ಟು ಹೆಚ್ಚು ಮತದಾನವಾಗಿದೆ.
* ಇಥಾ ಶೇ 73, ಮುಝಾಫರ್ ನಗರ್ ಶೇ 65, ಬುಲಂದ್ ಷರ್ ಶೇ64. ನೋಯ್ಡಾ ಶೇ 60, ಗಾಜಿಯಾಬಾದ್ ಶೇ 57ರಷ್ಟು ಮತದಾನ ಕಂಡಿದೆ.
* ಮೀರತ್ ನಲ್ಲಿ ಬಿಜೆಪಿ ಮುಖಂಡ ಸಂಗೀತ್ ಸೋಮ್ ಅವರ ಸೋದರ ಗಗನ್ ಸೋಮ್ ಅವರು ಬೂತ್ ನೊಳಗೆ ಪಿಸ್ತೂಲ್ ಜತೆಗೆ ಬಂದಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications