ಮಗಳ ಆಕ್ಷೇಪಾರ್ಹ ವಿಡಿಯೋ ವೈರಲ್ ಮಾಡಿದ್ದನ್ನು ಪ್ರಶ್ನಿಸಿದ್ದ ಯೋಧನ ಹತ್ಯೆ, ಏಳು ಮಂದಿ ಬಂಧನ
ಅಹಮದಾಬಾದ್, ಡಿ. 27: ಗುಜರಾತ್ನ ನಾಡಿಯಾಡ್ನಲ್ಲಿ ತನ್ನ ಮಗಳ ಆಕ್ಷೇಪಾರ್ಹ ವಿಡಿಯೋವನ್ನು ವೈರಲ್ ಮಾಡಿದ್ದನ್ನು ವಿರೋಧಿಸಿದ್ದ ಗಡಿ ಭದ್ರತಾ ಸಿಬ್ಬಂದಿಯನ್ನು (ಬಿಎಸ್ಎಫ್) ಹೊಡೆದು ಕೊಂದಿದ್ದ ಆರೋಪದ ಮೇಲೆ ಏಳು ಜನರನ್ನು ಬಂಧಿಸಲಾಗಿದೆ.
ಮೃತ ಯೋಧನನ್ನು ಬಿಎಸ್ಎಫ್ ಸಿಬ್ಬಂದಿ ಮೆಲ್ಜಿಭಾಯ್ ವಘೇಲಾ (45) ಎಂದು ಗುರುತಿಸಲಾಗಿದೆ. ಅವರು ತಮ್ಮ ಅಪ್ರಾಪ್ತ ಮಗಳ ವಿಡಿಯೋವನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಿ ವೈರಲ್ ಮಾಡಿದ್ದ 15 ವರ್ಷದ ಯುವಕನ ಮನೆಗೆ ಭೇಟಿ ನೀಡಿ ಪ್ರಶ್ನಿಸಿದ್ದರು. ಈ ವೇಳೆ ಬಾಲಕನ ಕುಟುಂಬ ಸದಸ್ಯರು ಯೋಧನ ಮೇಲೆ ಹರಿತವಾದ ಆಯುಧಗಳು ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ.
ಆರೋಪಿ ಬಾಲಕ ಮತ್ತು ಬಿಎಸ್ಎಫ್ ಯೋಧನ ಮಗಳು ಶಾಲಾ ಸಹಪಾಠಿಯಾಗಿದ್ದು, ಇಬ್ಬರೂ ಸಂಬಂಧದಲ್ಲಿದ್ದರು ಎಂದು ಮೂಲಕಗಳು ತಿಳಿಸಿವೆ.

ನಾಡಿಯಾಡ್ನ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ವಿಆರ್ ಬಾಜ್ಪೈ ಅವರು ಏಲು ಮಂದಿಯುನ್ನು ಬಂಧಿಸಿರುವುದನ್ನು ದೃಢಪಡಿಸಿದ್ದಾರೆ.
ಮೃತ ಮೆಲ್ಜಿಭಾಯ್ ವಘೇಲಾ, ಅವರ ಮಗ ಮತ್ತು ಸಂಬಂಧಿಕರು ಆರೋಪಿಗಳಲ್ಲಿ ಒಬ್ಬರಾದ ಶೈಲೇಶ್ ಯಾದವ್ ಅವರ ಮನೆಗೆ ಈ ವಿಡಿಯೋ ವೈರಲ್ ಮಾಡಿರುವ ಬಗ್ಗೆ ಮಾತನಾಡಲು ತೆರಳಿದ್ದರು. ಇದಾದ ನಂತರ ಎರಡು ಕಡೆಯವರ ನಡುವೆ ಮಾರಾಮಾರಿ ನಡೆದಿದ್ದು, ಶೈಲೇಶ್ ಅವರ ತಂದೆ ದಿನೇಶ್ ಯಾದವ್, ಚಿಕ್ಕಪ್ಪ ಅರವಿಂದ್ ಯಾದವ್ ಮತ್ತು ಇತರ ಕುಟುಂಬ ಸದಸ್ಯರು ಬಿಎಸ್ಎಫ್ ಯೋಧನ ಮೇಲೆ ಹಲ್ಲೆ ನಡೆಸಿದ್ದಾರೆ. ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೊಲೆ ಮತ್ತು ಗಲಭೆ ಆರೋಪದ ಮೇಲೆ ಬಂಧಿಸಲಾಗಿರುವ ಏಳು ಕುಟುಂಬದ ಸದಸ್ಯರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.

ಪ್ರಥಮ ಮಾಹಿತಿ ವರದಿ (ಎಫ್ಐಆರ್) ಪ್ರಕಾರ, ನಾಡಿಯಾಡ್ ತಹಸಿಲ್ನ ವಾಣಿಪುರ ಗ್ರಾಮದ ಶೈಲೇಶ್ ಅಕಾ ಸುನೀಲ್ ಯಾದವ್, ಮೆಲ್ಜಿಭಾಯ್ ವಘೇಲಾ ಅವರ ಮಗಳ ವಿಡಿಯೋವನ್ನು ತೆಗೆದಿದ್ದಾರೆ. ಕೆಲವು ದಿನಗಳ ಹಿಂದೆ ಅದನ್ನು ಇಂಟರ್ನೆಟ್ನಲ್ಲಿ ಅಪ್ಲೋಡ್ ಮಾಡಿದ್ದು, ಅದು ವೈರಲ್ ಆಗಿದೆ.
ಡಿಸೆಂಬರ್ 24 ರಂದು ಹತ್ಯೆ ನಡೆದಾಗ ಬಾಲಕ ಸ್ಥಳದಲ್ಲಿ ಇರಲಿಲ್ಲ. ಘಟನೆಯಲ್ಲಿ ಯೋಧರ ಪುತ್ರ ನವದೀಪ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಪ್ರಸ್ತುತ ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತ ಬಿಎಸ್ಎಫ್ ಜವಾನನ ಪತ್ನಿ ಮಂಜುಳಾಬೆನ್ ಚಕ್ಲಾಸಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಮತ್ತು ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೆಲ್ಜಿಭಾಯ್ ವಘೇಲಾ ಬಿಎಸ್ಎಫ್ 56 ಬೆಟಾಲಿಯನ್ನಲ್ಲಿ ಕಾನ್ಸ್ಟೆಬಲ್ ಆಗಿದ್ದರು.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications