ಮಗಳ ಆಕ್ಷೇಪಾರ್ಹ ವಿಡಿಯೋ ವೈರಲ್ ಮಾಡಿದ್ದನ್ನು ಪ್ರಶ್ನಿಸಿದ್ದ ಯೋಧನ ಹತ್ಯೆ, ಏಳು ಮಂದಿ ಬಂಧನ
ಅಹಮದಾಬಾದ್, ಡಿ. 27: ಗುಜರಾತ್ನ ನಾಡಿಯಾಡ್ನಲ್ಲಿ ತನ್ನ ಮಗಳ ಆಕ್ಷೇಪಾರ್ಹ ವಿಡಿಯೋವನ್ನು ವೈರಲ್ ಮಾಡಿದ್ದನ್ನು ವಿರೋಧಿಸಿದ್ದ ಗಡಿ ಭದ್ರತಾ ಸಿಬ್ಬಂದಿಯನ್ನು (ಬಿಎಸ್ಎಫ್) ಹೊಡೆದು ಕೊಂದಿದ್ದ ಆರೋಪದ ಮೇಲೆ ಏಳು ಜನರನ್ನು ಬಂಧಿಸಲಾಗಿದೆ.
ಮೃತ ಯೋಧನನ್ನು ಬಿಎಸ್ಎಫ್ ಸಿಬ್ಬಂದಿ ಮೆಲ್ಜಿಭಾಯ್ ವಘೇಲಾ (45) ಎಂದು ಗುರುತಿಸಲಾಗಿದೆ. ಅವರು ತಮ್ಮ ಅಪ್ರಾಪ್ತ ಮಗಳ ವಿಡಿಯೋವನ್ನು ಆನ್ಲೈನ್ನಲ್ಲಿ ಅಪ್ಲೋಡ್ ಮಾಡಿ ವೈರಲ್ ಮಾಡಿದ್ದ 15 ವರ್ಷದ ಯುವಕನ ಮನೆಗೆ ಭೇಟಿ ನೀಡಿ ಪ್ರಶ್ನಿಸಿದ್ದರು. ಈ ವೇಳೆ ಬಾಲಕನ ಕುಟುಂಬ ಸದಸ್ಯರು ಯೋಧನ ಮೇಲೆ ಹರಿತವಾದ ಆಯುಧಗಳು ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದಾರೆ.
ಆರೋಪಿ ಬಾಲಕ ಮತ್ತು ಬಿಎಸ್ಎಫ್ ಯೋಧನ ಮಗಳು ಶಾಲಾ ಸಹಪಾಠಿಯಾಗಿದ್ದು, ಇಬ್ಬರೂ ಸಂಬಂಧದಲ್ಲಿದ್ದರು ಎಂದು ಮೂಲಕಗಳು ತಿಳಿಸಿವೆ.

ನಾಡಿಯಾಡ್ನ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ವಿಆರ್ ಬಾಜ್ಪೈ ಅವರು ಏಲು ಮಂದಿಯುನ್ನು ಬಂಧಿಸಿರುವುದನ್ನು ದೃಢಪಡಿಸಿದ್ದಾರೆ.
ಮೃತ ಮೆಲ್ಜಿಭಾಯ್ ವಘೇಲಾ, ಅವರ ಮಗ ಮತ್ತು ಸಂಬಂಧಿಕರು ಆರೋಪಿಗಳಲ್ಲಿ ಒಬ್ಬರಾದ ಶೈಲೇಶ್ ಯಾದವ್ ಅವರ ಮನೆಗೆ ಈ ವಿಡಿಯೋ ವೈರಲ್ ಮಾಡಿರುವ ಬಗ್ಗೆ ಮಾತನಾಡಲು ತೆರಳಿದ್ದರು. ಇದಾದ ನಂತರ ಎರಡು ಕಡೆಯವರ ನಡುವೆ ಮಾರಾಮಾರಿ ನಡೆದಿದ್ದು, ಶೈಲೇಶ್ ಅವರ ತಂದೆ ದಿನೇಶ್ ಯಾದವ್, ಚಿಕ್ಕಪ್ಪ ಅರವಿಂದ್ ಯಾದವ್ ಮತ್ತು ಇತರ ಕುಟುಂಬ ಸದಸ್ಯರು ಬಿಎಸ್ಎಫ್ ಯೋಧನ ಮೇಲೆ ಹಲ್ಲೆ ನಡೆಸಿದ್ದಾರೆ. ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕೊಲೆ ಮತ್ತು ಗಲಭೆ ಆರೋಪದ ಮೇಲೆ ಬಂಧಿಸಲಾಗಿರುವ ಏಳು ಕುಟುಂಬದ ಸದಸ್ಯರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಎಎನ್ಐ ವರದಿ ಮಾಡಿದೆ.

ಪ್ರಥಮ ಮಾಹಿತಿ ವರದಿ (ಎಫ್ಐಆರ್) ಪ್ರಕಾರ, ನಾಡಿಯಾಡ್ ತಹಸಿಲ್ನ ವಾಣಿಪುರ ಗ್ರಾಮದ ಶೈಲೇಶ್ ಅಕಾ ಸುನೀಲ್ ಯಾದವ್, ಮೆಲ್ಜಿಭಾಯ್ ವಘೇಲಾ ಅವರ ಮಗಳ ವಿಡಿಯೋವನ್ನು ತೆಗೆದಿದ್ದಾರೆ. ಕೆಲವು ದಿನಗಳ ಹಿಂದೆ ಅದನ್ನು ಇಂಟರ್ನೆಟ್ನಲ್ಲಿ ಅಪ್ಲೋಡ್ ಮಾಡಿದ್ದು, ಅದು ವೈರಲ್ ಆಗಿದೆ.
ಡಿಸೆಂಬರ್ 24 ರಂದು ಹತ್ಯೆ ನಡೆದಾಗ ಬಾಲಕ ಸ್ಥಳದಲ್ಲಿ ಇರಲಿಲ್ಲ. ಘಟನೆಯಲ್ಲಿ ಯೋಧರ ಪುತ್ರ ನವದೀಪ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಪ್ರಸ್ತುತ ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತ ಬಿಎಸ್ಎಫ್ ಜವಾನನ ಪತ್ನಿ ಮಂಜುಳಾಬೆನ್ ಚಕ್ಲಾಸಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ ಮತ್ತು ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೆಲ್ಜಿಭಾಯ್ ವಘೇಲಾ ಬಿಎಸ್ಎಫ್ 56 ಬೆಟಾಲಿಯನ್ನಲ್ಲಿ ಕಾನ್ಸ್ಟೆಬಲ್ ಆಗಿದ್ದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications