ಅಪನಗದೀಕರಣದ ನಡುವೆಯೂ ಶೇ. 7ರ ಗಡಿ ತಲುಪಿದ ಜಿಡಿಪಿ
ನೋಟ್ ಬ್ಯಾನ್ ದೇಶದ ಆರ್ಥಿಕತೆಯ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ ಎಂಬ ಭಯದ ನಡುವೆಯೇ 2016-17ನೇ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದಲ್ಲಿ ನಿವ್ವಳ ದೇಶೀಯ ಉತ್ಪನ್ನ ದರ ಶೇಕಡಾ 7 ತಲುಪಿದೆ.
ನವದೆಹಲಿ, ಮಾರ್ಚ್ 1: ಅಪನಗದೀಕರಣ ಭೀತಿಯ ನಡುವೆಯೂ 2016-17ನೇ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದಲ್ಲಿ ನಿವ್ವಳ ದೇಶೀಯ ಉತ್ಪನ್ನ ದರ ಶೇಕಡಾ 7 ತಲುಪಿದೆ.
ನೋಟ್ ಬ್ಯಾನ್ ದೇಶದ ಆರ್ಥಿಕತೆಯ ಮೇಲೆ ಋಣಾತ್ಮಕ ಪರಿಣಾಮ ಬೀರಲಿದೆ ಎಂಬ ಭಯದ ನಡುವೆಯೇ ಈ ಸುದ್ದಿ ಹೊರಬಿದ್ದಿದೆ. ಜತೆಗೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಜಿಡಿಪಿ ದರ ಶೇಕಡಾ 7.1 ತಲುಪಲಿದೆ ಎಂದು ಕೇಂದ್ರ ಸಾಂಖ್ಯಿಕ ಇಲಾಖೆ ಅಂದಾಜು ಮಾಡಿದೆ.
ಇನ್ನು ಮೊದಲ ಮತ್ತು ಎರಡನೇ ತ್ರೈಮಾಸಿಕದ ಜಿಡಿಪಿ ವರದಿಯನ್ನು ಶೇಕಡಾ 7.2 ಹಾಗೂ 7.4 ಎಂದು ಪರಿಷ್ಕರಣೆ ಮಾಡಲಾಗಿದೆ.[ಜುಲೈ 1ರಿಂದ ದೇಶಾದ್ಯಂತ ಏಕಸ್ವರೂಪ ತೆರಿಗೆ ಜಾರಿ: ಕೇಂದ್ರ]

ಈ ಹಿಂದೆ 2016-17ರಲ್ಲಿ ವಾರ್ಷಿಕ ಜಿಡಿಪಿ ಶೇಕಡಾ 7 ಇರಲಿದೆ ಎಂದು ಅಂದಾಜಿಸಲಾಗಿತ್ತು. ಇದಕ್ಕೆ ಸರಿಯಾಗಿ ವಿಶ್ವಬ್ಯಾಂಕ್, ಆರ್ಬಿಐ ಹಾಗೂ ಇತರ ಹಣಕಾಸು ಸಂಸ್ಥೆಗಳು ಭಾರತದ ಜಿಡಿಪಿ ಕುಸಿತವಾಗಲಿದೆ ಎಂದಿತ್ತು. ಆದರೆ ನಿರೀಕ್ಷೆಗೂ ಮೀರಿ ಜಿಡಿಪಿ ಏರಿಕೆಯಾಗಿದೆ.
ಕಾರಣವೇನು?
ಪ್ರಧಾನಮಂತ್ರಿ ಗ್ರಾಮ ಸಡಕ್, ಹೆದ್ದಾರಿ ನಿರ್ಮಾಣ, ಗ್ರಾಮೀಣ ವಿದ್ಯುದೀಕರಣ ಮುಂತಾದ ಯೋಜನೆಗಳಲ್ಲಿ ಸರಕಾರ ಬರೋಬ್ಬರಿ ಬಂಡವಾಳ ಹೂಡಿದೆ. ಜತೆಗೆ ವಿದೇಶಿ ನೇರ ಬಂಡವಾಳವೂ ಹರಿದು ಬಂದಿದ್ದು ಸಾರ್ವಜನಿಕ ಉದ್ದಿಮೆಗಳಲ್ಲಿ ಹೂಡಿಕೆ ಪ್ರಮಾಣ ಹೆಚ್ಚಾಗಿದೆ. ಈ ಕಾರಣಗಳಿಂದ ಜಿಡಿಪಿಯಲ್ಲಿ ಏರಿಕೆಯಾಗಿದೆ.[ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಏಕೆ, ಸಿಬ್ಬಂದಿಗಳ ಬೇಡಿಕೆಗಳೇನು?]
7 ಲಕ್ಷ ಬೇನಾಮಿ ಕಂಪನಿಗಳು ಬಂದ್
ಕಪ್ಪು ಹಣದ ವಿರುದ್ಧ ಸಮರ ಸಾರಿರುವ ಕೇಂದ್ರ ಸರಕಾರ 7 ಲಕ್ಷ ಬೇನಾಮಿ ಕಂಪನಿಗಳಿಗೆ ಬೀಗ ಜಡಿಯಲು ಸಿದ್ದತೆ ಮಾಡಿಕೊಂಡಿದೆ. ನಿಷ್ಕ್ರಿಯವಾಗಿರುವ ಹಾಗೂ ಸಂಶಯಾಸ್ಪದ ಕಂಪನಿಗಳನ್ನು ಮುಚ್ಚುವಂತೆ ನಿರ್ದೇಶನ ನೀಡಿದೆ. ಈ ಕಂಪೆನಿಗಳ ಮೂಲಕ ಕಪ್ಪು ಹಣವನ್ನು ಬಿಳಿ ಮಾಡುವ ದಂಧೆ ಚಾಲ್ತಿಯಲ್ಲಿರುವುದರಿಂದ ಈ ನಿರ್ಧಾರಕ್ಕೆ ಮುಂದಾಗಿದೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications