7 ಹುರಿಯತ್ ನಾಯಕರಿಗೆ 10 ದಿನಗಳ ಪೊಲೀಸ್ ಕಸ್ಟಡಿ
ನವದೆಹಲಿ, ಜುಲೈ 25: ಸೋಮವಾರ ಬಂಧಿತರಾಗಿದ್ದ 7 ಜನ ಹುರಿಯತ್ ನಾಯಕರನ್ನು 10 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಎನ್ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿರುವ ಆರೋಪದ ಮೇಲೆ ಹುರಿಯತ್ ನಾಯಕ ಸಯ್ಯದ್ ಅಲಿ ಶಾ ಗಿಲಾನಿ ಅಳಿಯ ಸೇರಿ 7 ಜನರನ್ನು ಸೋಮವಾರ ಬಂಧಿಸಲಾಗಿತ್ತು. ವಿಚಾರಣೆ ವೇಳೆ ಹಲವು ಮಹತ್ವದ ಸಂಗತಿಗಳನ್ನು ಬಂಧಿತರು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ.

ರಾಷ್ಟ್ರೀಯ ತನಿಖಾ ದಳ ಎನ್ಐಎ ಮೇ 30ರಂದು ಕಾಶ್ಮೀರದಲ್ಲಿ ಸಂಘರ್ಷ ಉಂಟು ಮಾಡಲು ಆರ್ಥಿಕ ನೆರವು ನೀಡಿದ ಅನುಮಾನದ ಮೇಲೆ ಹುರಿಯತ್ ನಾಯಕರ ಮೇಲೆ ಪ್ರಕರಣಗಳನ್ನು ದಾಖಲಿಸಿತ್ತು. ಬೇನಾಮಿ ಖಾತೆಗಳಿಂದ ಈ ನಾಯಕರು ಹಣ ಪಡೆದಿದ್ದಾರೆ ಎಂಬ ಆರೋಪದ ಮೇಲೆ ಲೇವಾದೇವಿ ಕಾಯ್ದೆಯಡಿ ಇವರ ಮೇಲೆ ದೂರು ದಾಲಿಸಿಕೊಳ್ಳಲಾಗಿತ್ತು.












Click it and Unblock the Notifications