ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಭೀತಿಯಲ್ಲಿ ಮನೆಗೆ ಹೊರಟವರು ಸೇರಿದ್ದು ಮಸಣ

|
Google Oneindia Kannada News

ನವದೆಹಲಿ, ಮೇ.19: ನೊವೆಲ್ ಕೊರೊನಾ ವೈರಸ್ ಭೀತಿ ಹಾಗೂ ಭಾರತ ಲಾಕ್ ಡೌನ್ ಸೃಷ್ಟಿಸಿದ ಸಂದಿಗ್ಘತೆಯಿಂದ ತಮ್ಮೂರಿನತ್ತ ಮುಖ ಮಾಡಿದ ನಾಲ್ವರು ವಲಸೆ ಕಾರ್ಮಿಕರು ನಡುರಸ್ತೆಯಲ್ಲೇ ಪ್ರಾಣ ಬಿಟ್ಟಿದ್ದಾರೆ. ಬೆಳ್ಳಂಬೆಳಗ್ಗೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ ಏಳು ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದು, 27 ಮಂದಿ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದ ಜಾನ್ಸಿ-ಮಿರ್ಜಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿಕೊಂಡು ಹೊರಟಿದ್ದ ಡಿಸಿಎಂ ವಾಹನ(ದೆಹಲಿ ಕ್ಲಾತ್ ಆಂಡ್ ಜನರಲ್ ಮಿಲ್) ಉರುಳಿ ಬಿದ್ದಿದೆ. 17 ಪ್ರಯಾಣಿಕರನ್ನು ತುಂಬಿಕೊಂಡಿದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

Two Separate Accident: 7 Migrate Workers Death, 27 Are injured

ತುತ್ತಿನ ಚೀಲ ತುಂಬಿಸಿಕೊಳ್ಳಲು ವಲಸೆ ಹೋದ ಕಾರ್ಮಿಕರಿಗೆಂಥಾ ಶಿಕ್ಷೆ?ತುತ್ತಿನ ಚೀಲ ತುಂಬಿಸಿಕೊಳ್ಳಲು ವಲಸೆ ಹೋದ ಕಾರ್ಮಿಕರಿಗೆಂಥಾ ಶಿಕ್ಷೆ?

ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ವಲಸೆ ಕಾರ್ಮಿಕರು ಮೃತಪಟ್ಟಿದ್ದರೆ, 12 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಬಸ್ ಟ್ರಕ್ ನಡುವೆ ಡಿಕ್ಕಿ ನಾಲ್ವರು ಸಾವು:

ಮಹಾರಾಷ್ಟ್ರದ ಸೊಲ್ಲಾಪುರ್ ನಿಂದ ಜಾರ್ಖಂಡ್ ಗೆ ಹೊರಟಿದ್ದ ಬಸ್ ಮತ್ತು ಟ್ರಕ್ ನಡುವೆ ಯವತ್ಮಲ್ ಬಳಿ ಅಪಘಾತ ಸಂಭವಿಸಿದೆ. ಬೆಳ್ಳಂಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಬಸ್ ನಲ್ಲಿದ್ದ ನಾಲ್ವರು ವಲಸೆ ಕಾರ್ಮಿಕರು ಪ್ರಾಣ ಬಿಟ್ಟಿದ್ದರೆ, 15 ಮಂದಿ ಗಾಯಗೊಂಡಿದ್ದಾರೆ.

English summary
Two Separate Accident: 7 Migrate Workers Death, 27 Are injured.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X