ಬೇನಾಮಿ ವ್ಯವಹಾರ ಕಂಡುಬಂದರೆ 7 ವರ್ಷದವರೆಗೆ ಜೈಲು
ನವದೆಹಲಿ, ನವೆಂಬರ್ 21: ಲೆಕ್ಕ ನೀಡದ ಹಣವನ್ನು ಬೇರೆಯವರ ಬ್ಯಾಂಕ್ ಖಾತೆಯಲ್ಲಿ ಜಮೆ ಮಾಡಿದವರಿಗೆ ಚಾಟಿ ಬೀಸಲು ಆದಾಯ ತೆರಿಗೆ ಇಲಾಖೆ ಮುಂದಾಗಿದೆ. ಬೇನಾಮಿ ವ್ಯವಹಾರ ಕಾಯ್ದೆ ಅಡಿ ದಂಡ ವಿಧಿಸಲು ಹಾಗೂ ಪ್ರಕರಣ ದಾಖಲಿಸಲು ಮುಂದಾಗಿದೆ. ತಪ್ಪು ರುಜುವಾತು ಆದಲ್ಲಿ ಗರಿಷ್ಠ ಏಳು ವರ್ಷಗಳ ಜೈಲು ಶಿಕ್ಷೆ ಆಗುತ್ತದೆ.
ಆದಾಯ ತೆರಿಗೆ ಇಲಾಖೆ ಮಾಹಿತಿ ಪ್ರಕಾರ ಲೆಕ್ಕಕ್ಕೆ ನೀಡದ ಆದಾಯ ಇನ್ನೂರು ಕೋಟಿ ರುಪಾಯಿ ಪತ್ತೆಯಾಗಿದೆ. ಹಳೇ 500, 1000 ನೋಟು ರದ್ದು ಆದ ನಂತರ ವಿವಿಧೆಡೆ ದಾಳಿ ನಡೆಸಿ ಐವತ್ತು ಕೋಟಿ ರುಪಾಯಿಗೂ ಹೆಚ್ಚು ಹಣವನ್ನು ವಿವಿಧ ರಾಜ್ಯಗಳಲ್ಲಿ ಇಲಾಖೆಯು ವಶಪಡಿಸಿಕೊಂಡಿದೆ.[ಬೆಂಗಳೂರು, ಮಂಗಳೂರು, ಗೋವಾದಲ್ಲಿ ಐಟಿ ದಾಳಿ]

ಈ ರೀತಿ ಅನುಮಾನಾಸ್ಪದವಾದ ವ್ಯವಹಾರಗಳಲ್ಲಿ ತಪ್ಪು ಸಾಬೀತಾದಲ್ಲಿ ಬೇನಾಮಿ ವ್ಯವಹಾರ ಕಾಯ್ದೆ 1988ರ ಅನ್ವಯ ಶಿಕ್ಷೆ ಆಗುತ್ತದೆ. ಇದು ಸ್ಥಿರಾಸ್ತಿ-ಚರಾಸ್ತಿ ಎರಡಕ್ಕೂ ಅನ್ವಯಿಸುತ್ತದೆ. ಈ ಕಾಯ್ದೆ ಈ ವರ್ಷದ ನವೆಂಬರ್ 1ರಿಂದ ಅಳವಡಿಸಿಕೊಳ್ಳಲಾಗಿದೆ. ಈ ಪ್ರಕಾರ ಹಣವನ್ನು ಜಮೆ ಮಾಡಿದವರು ಹಾಗೂ ಯಾರಿಗೆ ಹಣ ಸೇರಿರುತ್ತದೋ ಇಬ್ಬರೂ ಶಿಕ್ಷೆಗೆ ಒಳಗಾಗುತ್ತಾರೆ.[ತೆರಿಗೆ ತಪ್ಪಿಸಿದ್ದಲ್ಲಿ ಸರಿಪಡಿಸಿಕೊಳ್ಳಲು ಇಲ್ಲಿದೆ ದಾರಿ]
ಯಾವುದೇ ವ್ಯಕ್ತಿ 500, 1000 ರುಪಾಯಿ ನೋಟನ್ನು ಬೇರೆಯವರ ಖಾತೆಗೆ ಜಮೆ ಮಾಡಿ, ಅ ನಂತರ ಹಣವನ್ನು ವಾಪಸ್ ಪಡೆದರೆ, ಇಂಥದ್ದನ್ನು ಬೇನಾಮಿ ವ್ಯವಹಾರ ಅಂತ ಪರಿಗಣಿಸಲಾಗುತ್ತದೆ. ಯಾರು ತಮ್ಮ ಹಣವನ್ನು ಬ್ಯಾಂಕ್ ಗೆ ಹಾಕಲು ನೀಡುತ್ತಾರೋ ಅಂಥವರನ್ನು ಅನುಕೂಲ ಪಡೆದ ಮಾಲೀಕ ಅಂತಲೂ ಅದನ್ನು ತನ್ನ ಖಾತೆಗೆ ಹಾಕಿಕೊಳ್ಳುವ ವ್ಯಕ್ತಿಯನ್ನು ಬೇನಾಮಿ ಅಂತ ಗುರುತಿಸುತ್ತೇವೆ' ಎಮ್ದು ಅಧಿಕಾರಿಗಳು ವಿವರಿಸಿದ್ದಾರೆ.
ಅನುಕೂಲ ಪಡೆಯುವ ವ್ಯಕ್ತಿ, ಬೇನಾಮಿ ವ್ಯಕ್ತಿ ಹಾಗೂ ಈ ಕೃತ್ಯಕ್ಕೆ ಪ್ರಚೋದನೆ ನೀಡಿದವರಿಗೆ ಒಂದರಿಂದ ಏಳು ವರ್ಷಗಳ ಕಾಲ ಜೈಲು ಶಿಕ್ಷೆಯಾಗುವ ಸಾಧ್ಯತೆ ಇರುತ್ತದೆ. ನೋಟು ರದ್ದು ನಂತರ ಬ್ಯಾಂಕ್ ನಲ್ಲಿ ಜಮೆ ಮಾಡುವ ಬೇನಾಮಿ ಹಣವನ್ನು ವಶಕ್ಕೆ ಪಡೆದು, ಆರೋಪಿಗಳಿಗೆ ಆ ಬೇನಾಮಿ ಆಸ್ತಿ ಮೊತ್ತದ ಶೇ 25ರಷ್ಟನ್ನು ದಂಡವಾಗಿ ವಿಧಿಸಲಾಗುವುದು.[ಕೋಟಿಗಟ್ಟಲೆ ಹಣ ಬ್ಯಾಂಕ್ ಗೆ ಕಟ್ಟಿ, ತೆರಿಗೆ ಪಾವತಿಸಿ ಸಾಕು!]
ಆದಾಯ ತೆರಿಗೆ ಇಲಾಖೆಯು ಕಪ್ಪುಹಣ ವ್ಯವಹಾರದ ಮೇಲೆ ಹದ್ದಿನ ಕಣ್ಣಿಟ್ಟಿದೆ. ದತ್ತಿ ಹಾಗೂ ಧಾರ್ಮಿಕ ಸಂಸ್ಥೆಗಳ ಬ್ಯಾಂಕ್ ಖಾತೆಗಳಲ್ಲಿರುವ ಹಣ, ಜಮೆ ಮಾಡಿರುವ ನಗದು ವಿವರಗಳನ್ನು ಸಲ್ಲಿಸುವಂತೆ ಈಗಾಗಲೇ ನೋಟಿಸ್ ಕೂಡ ಜಾರಿ ಮಾಡಲಾಗಿದೆ
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications