ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

70ನೇ ಗಣರಾಜ್ಯೋತ್ಸವ : ರಾಷ್ಟ್ರಪತಿ ಭಾಷಣದ ಮುಖ್ಯಾಂಶಗಳು

|
Google Oneindia Kannada News

ನವದೆಹಲಿ, ಜನವರಿ 25 : 'ಮಹಾತ್ಮ ಗಾಂಧೀಜಿ ಅವರ 150ನೇ ವರ್ಷಾಚರಣೆ ಹಿನ್ನಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ವಿಶೇಷವಾಗಿದ್ದು, ಗಾಂಧೀಜಿ ಅವರನ್ನು ವಿಶ್ವವೇ ಕೊಂಡಾಡುತ್ತದೆ' ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದರು.

70ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದರು. ದೇಶದ ಜನರಿಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದರು.

ವೀರ ಯೋಧ, ಹುತಾತ್ಮ ನಜೀರ್ ವನಿಗೆ ಮರಣೋತ್ತರ ಅಶೋಕ್ ಚಕ್ರವೀರ ಯೋಧ, ಹುತಾತ್ಮ ನಜೀರ್ ವನಿಗೆ ಮರಣೋತ್ತರ ಅಶೋಕ್ ಚಕ್ರ

70th Republic Day : President Ram Nath Kovind address nation

'ಬಡತನ ನಿರ್ಮೂಲನೆಯತ್ತ ಭಾರತ ದಿಟ್ಟ ಹೆಜ್ಜೆ ಇಡುತ್ತಿದೆ. ಆರೋಗ್ಯ ಕ್ಷೇತ್ರದಲ್ಲಿ ಹಲವು ಸುಧಾರಣೆಗಳು ಆಗುತ್ತಿವೆ. ಗ್ರಾಮೀಣ ಭಾಗದ ರಸ್ತೆಗಳು ಅಭಿವೃದ್ಧಿಯಾಗುತ್ತಿವೆ' ಎಂದು ರಾಮನಾಥ್ ಕೋವಿಂದ್ ಹೇಳಿದರು.

ಗಣರಾಜ್ಯೋತ್ಸವ ರಜೆ : ಕೆಎಸ್ಆರ್‌ಟಿಸಿಯಿಂದ 200 ವಿಶೇಷ ಬಸ್ಗಣರಾಜ್ಯೋತ್ಸವ ರಜೆ : ಕೆಎಸ್ಆರ್‌ಟಿಸಿಯಿಂದ 200 ವಿಶೇಷ ಬಸ್

ರಾಷ್ಟ್ರಪತಿಗಳ ಭಾಷಣದ ಮುಖ್ಯಾಂಶಗಳು

* ಈ ವರ್ಷ ದೇಶದ ಜನರಿಗೆ ಮಹತ್ವದ ಜವಾಬ್ದಾರಿ ಇದೆ. ನಾವೆಲ್ಲರೂ 17ನೇ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಬೇಕಿದೆ. ಈ ಚುನಾವಣೆ 21ನೇ ಶತಮಾನದ ಯುವಕರಿಗೆ ವಿಶೇಷವಾದದ್ದು, ಮೊದಲ ಬಾರಿಗೆ ಅವರು ಮತದಾನ ಮಾಡಲಿದ್ದಾರೆ.

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಬೆಳಗಾವಿ ಕಾಂಗ್ರೆಸ್‌ ಅಧಿವೇಶನದ ನೆನಪುಗಣರಾಜ್ಯೋತ್ಸವ ಪರೇಡ್‌ನಲ್ಲಿ ಬೆಳಗಾವಿ ಕಾಂಗ್ರೆಸ್‌ ಅಧಿವೇಶನದ ನೆನಪು

* ಶಿಕ್ಷಣ, ಕಲೆ, ಆರೋಗ್ಯ, ಕ್ರೀಡಾ ಕ್ಷೇತ್ರಗಳಲ್ಲಿ ನಮ್ಮ ದೇಶದ ಹೆಣ್ಣು ಮಕ್ಕಳು ಉತ್ತಮ ಸಾಧನೆ ಮಾಡುತ್ತಿದ್ದಾರೆ. ಈಗ ಅವರು ಸೇನಾಪಡೆಯಲ್ಲಿಯೂ ತಮ್ಮ ಶಕ್ತಿ ಪ್ರದರ್ಶಿಸುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಿನ ಪದಕಗಳನ್ನು ಪಡೆಯುತ್ತಿದ್ದಾರೆ.

* ಈ ಬಾರಿಯ ಸ್ವತಂತ್ರ್ಯ ದಿನಾಚರಣೆ ವಿಶೇಷವಾಗಿದ್ದು. ಅಕ್ಟೋಬರ್ 2ರಂದು ನಾವು ಮಹಾತ್ಮ ಗಾಂಧೀಜಿ ಅವರ 150ನೇ ಜನ್ಮದಿನಾಚರಣೆ ಆಚರಣೆ ಮಾಡುತ್ತಿದ್ದೇವೆ. ಭಾರತದಲ್ಲಿ ಮಾತ್ರ ಆಚರಣೆ ಮಾಡುತ್ತಿಲ್ಲ. ಇಡೀ ವಿಶ್ವವೇ ಅವರ ತತ್ವಗಳನ್ನು ಅಳವಡಿಸಿಕೊಳ್ಳಲು ಅವಕಾಶವಿದೆ.

English summary
President of India Ram Nath Kovind addressed the nation on January 25, 2019 in an eve of 70th Republic Day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X