'ಭಾರತ ಬಿಟ್ಟು ತೊಲಗಿ ಆಂದೋಲನ'ಕ್ಕೆ 75 ವರ್ಷ: ಸಂಸತ್ ವಿಶೇಷ ಅಧಿವೇಶನ
ನವದೆಹಲಿ, ಆಗಸ್ಟ್ 9: ಭಾರತ ಸ್ವಾತಂತ್ರ್ಯಗೊಳ್ಳುವುದಕ್ಕೂ 5 ವರ್ಷಮೊದಲು, ಅಂದರೆ 1942 ರ ಆಗಸ್ಟ್ ನಲ್ಲಿ ರಾಷ್ಟ್ರ ಪಿತ ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ "ಬ್ರಿಟೀಶರೇ ಭಾರತ ಬಿಟ್ಟು ತೊಲಗಿ"(ಕ್ವಿಟ್ ಇಂಡಿಯಾ) ಎಂಬ ಚಳವಳಿಯನ್ನು ಆರಂಭಿಸಲಾಗಿತ್ತು. ಆಗಸ್ಟ್ 9 ರಂದು ನಡೆದಿದ್ದ ಈ ಚಳವಳಿಗೆ ಇದೀಗ 75 ವರ್ಷ ಸಂದಿದೆ. ಈ ಸವಿನೆನಪಿಗಾಗಿ ಇಂದು(ಆಗಸ್ಟ್ 9) ಸಂಸತ್ತಿನ ವಿಶೇಷ ಅಧಿವೇಶನ ನಡೆಯಲಿದೆ.
ಕ್ವಿಟ್ ಇಂಡಿಯಾ ಚಳವಳಿಯ ಸ್ಮರಣೆಗಾಗಿ ಈ ವರ್ಷ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಈ ಬಾರಿಯ ಘೋಷ ವಾಕ್ಯ "ಸಂಕಲ್ಪ್ ಸೆ ಸಿದ್ಧಿ" ಎಂಬುದು. ಸಂಕಲ್ಪಗಳನ್ನು ಸಾಧಿಸೋಣ ಎಂಬ ಧ್ಯೇಯ ವಾಕ್ಯದೊಂದಿಗೆ ಕ್ವಿಟ್ ಇಂಡಿಯಾ ಚಳವಳಿಯ ವಜ್ರಮಹೋತ್ಸವ ಆಚರಿಸಲಾಗುತ್ತಿದೆ.

ಅಧಿವೇಶನದಲ್ಲಿ ಪ್ರಶ್ನೋತ್ತರ ವೇಳೆ ಮತ್ತು ಶೂನ್ಯವೇಳೆಗಳನ್ನು ರದ್ದುಗೊಳಿಸಲಾಗಿತ್ತು, ಅಧಿವೇಶನ ಸರಾಗವಾಗಿ ನಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದ ಕ್ವಿಟ್ ಇಂಡಿಯಾ ಚಳವಳಿಗೆ ಸಂಬಂಧಿಸಿದಂತೆ ಎಲ್ಲ ಪಕ್ಷದ ಧುರೀಣರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಅವಕಾಶ ನೀಡಲಾಗಿದೆ. ಅಷ್ಟೇ ಅಲ್ಲ, ದೇಶಕ್ಕಾಗಿ ಅವರು ಏನೆಲ್ಲ ಸಂಕಲ್ಪ ಕೈಗೊಳ್ಳಲಿದ್ದಾರೆ ಎಂಬ ಬಗ್ಗೆಯೂ ಮಾತನಾಡುವುದಕ್ಕೆ ಅವಕಾಶವಿದೆ.
ಈ ಕುರಿತು ತಮ್ಮ ಮನ್ ಕಿ ಬಾತ್ ನಲ್ಲಿಯೂ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ದೇಶದ ಯುವಕರು, ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗಾಗಿ ಹೊಸ ಹೊಸ ಕ್ರಿಯಾಶೀಲ ಯೋಜನೆಗಳನ್ನು ನೀಡುವಂತೆಯೂ, ಈ ಕುರಿತು ಈ ದಿನ ಚಿಂತಿಸುವಂತೆಯೂ ಕೇಳಿಕೊಂಡಿದ್ದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications