Get Updates
Get notified of breaking news, exclusive insights, and must-see stories!

Republic Day Parade 2024 Live:ದೆಹಲಿಯ ಕರ್ತವ್ಯ ಪಥದಲ್ಲಿ ಪರೇಡ್: ಸಂಭ್ರಮವೋ.. ಸಂಭ್ರಮ

ಈ ವರ್ಷ ದೇಶವು 75ನೇ ವರ್ಷದ ಗಣರಾಜ್ಯೋತ್ಸವದ ಸಂಭ್ರಮದಲ್ಲಿದೆ. ಈ ಬಾರಿ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ದೇಶಾದ್ಯಂತ ಸಕಲ ಸಿದ್ಧತೆಗಳು ನಡೆಯುತ್ತಿವೆ. ಗಣರಾಜ್ಯೋತ್ಸವದ ಪರೇಡ್ ಪೂರ್ವಾಭ್ಯಾಸಗಳನ್ನ ಈಗಾಗಲೇ ಎಲ್ಲಾ ಭಾರತೀಯ ರಾಜ್ಯಗಳ ರಾಜಧಾನಿಗಳಲ್ಲಿ ಅಭ್ಯಾಸ ಕೈಗೊಂಡಿದೆ. ಗಣತಂತ್ರ ದಿನವನ್ನ ಆಚರಿಸಲು ಖಂಡಿತ ಪ್ರತಿಯೊಬ್ಬ ಭಾರತೀಯರಿಗೆ ಹೆಮ್ಮೆಯಿಂದ ಕಾಯುತ್ತಿದ್ದಾನೆ.

ಗಣರಾಜ್ಯೋತ್ಸವ 2024ರ ಪರೇಡ್ ಥೀಮ್ 'ವಿಕ್ಷಿತ್ ಭಾರತ್' ಮತ್ತು 'ಭಾರತ್ - ಲೋಕತಂತ್ರ ಕಿ ಮಾತೃಕಾ', ಇದು ಪ್ರಜಾಪ್ರಭುತ್ವದ ಪೋಷಕರಾಗಿ ಭಾರತದ ಪಾತ್ರವನ್ನು ಒತ್ತಿಹೇಳುತ್ತದೆ. ಜನವರಿ 26 ರಂದು ಶುಕ್ರವಾರ ಬೆಳಿಗ್ಗೆ 10:30 ಕ್ಕೆ ನವದೆಹಲಿಯ ಕರ್ತವ್ಯ ಪಥ್‌ನಲ್ಲಿ ಪ್ರಾರಂಭವಾಗಲಿದೆ. ಮೆರವಣಿಗೆಯಲ್ಲಿ 95 ಸದಸ್ಯ ಮೆರವಣಿಗೆಯ ತುಕಡಿ ಮತ್ತು 33-ಸದಸ್ಯ ಬ್ಯಾಂಡ್ ತುಕಡಿ ಕೂಡ ಇರುತ್ತದೆ. ಅಲ್ಲದೇ ಪ್ರತಿ ವರ್ಷ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷ ಇಮಾನ್ಯುವಲ್​ ಮ್ಯಾಕ್ರನ್​ ಆಗಮಿಸುತ್ತಿದ್ದಾರೆ.

75th Republic Day Parade 2024 Live Updates on Flag Hoisting, Celebrations, Theme, Speech Highlights

Jan 26, 2024, 12:34 pm IST

ಆಗಸದಲ್ಲಿ ಲೋಹದ ಹಕ್ಕಿಗಳ ಪ್ರದರ್ಶನ

ಆಗಸದಲ್ಲಿ ಲೋಹದ ಹಕ್ಕಿಗಳ ಪ್ರದರ್ಶನ
Jan 26, 2024, 12:30 pm IST

ಕರ್ತವ್ಯ ಪಥದಲ್ಲಿ ನಾರಿ ಶಕ್ತಿ ಪ್ರದರ್ಶನ

ಕರ್ತವ್ಯ ಪಥದಲ್ಲಿ ನಾರಿ ಶಕ್ತಿ ಪ್ರದರ್ಶನ
Jan 26, 2024, 12:25 pm IST

25 ಸ್ತಬ್ಧಚಿತ್ರಗಳ ಪ್ರದರ್ಶನ; ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶವಿಲ್ಲ

ಗಣರಾಜ್ಯೋತ್ಸವದಲ್ಲಿ 16 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳು, 9 ಸಚಿವಾಲಯಗಳು, ವಿವಿಧ ಸಂಸ್ಥೆಗಳ 25 ಸ್ತಬ್ಧಚಿತ್ರಗಳ ಪ್ರದರ್ಶನ ಮಾಡಲಾಯಿತು. ಆಂಧ್ರ, ಅರುಣಾಚಲ ಪ್ರದೇಶ, ಛತ್ತೀಸ್​ಗಢ, ಗುಜರಾತ್, ಹರಿಯಾಣ, ಜಾರ್ಖಂಡ್, ಲಡಾಖ್, ಮೇಘಾಲಯ, ಒಡಿಶಾ, ಮಣಿಪುರ, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಯುಪಿ ಸ್ತಬ್ಧಚಿತ್ರಗಳು ಭಾಗಿಯಾಗಿದ್ದವು. ಈ ಬಾರಿ ಗಣರಾಜ್ಯೋತ್ಸವದಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ಇರಲಿಲ್ಲ.
Jan 26, 2024, 11:30 am IST

ಜೆಡಿಎಸ್ ಕಚೇರಿಯಲ್ಲಿ ಗಣರಾಜ್ಯೋತ್ಸವ

75th-republic-day-parade-2024-live
ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ 75ನೇ ಗಣರಾಜ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಕ್ಷದ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಅವರು ಧ್ವಜಾರೋಹಣ ನೆರವೇರಿಸಿದರು.
Jan 26, 2024, 11:05 am IST

ಫ್ರೆಂಚ್‌ ವಿದೇಶಿ ಪಡೆ ಪಥಸಂಚಲನ

ಫ್ರಾನ್ಸ್ ಸೇನಾ ತುಕಡಿ, ಯುದ್ಧವಿಮಾನಗಳು ಪಥಸಂಚನದಲ್ಲಿ ಭಾಗಿಯಾಗಿವೆ. ಯೂರೋಪ್, ಆಫ್ರಿಕಾ, ಮಧ್ಯಪ್ರಾಚ್ಯದಲ್ಲಿ ನಿಯೋಜನೆಗೊಂಡ ‘ಫ್ರೆಂಚ್‌ ವಿದೇಶಿ ಪಡೆ’ 75ನೇ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಭಾಗಿಯಾಗಿದೆ.
Jan 26, 2024, 10:54 am IST

ಕರ್ತವ್ಯ ಪಥದಲ್ಲಿ ಪರಮವೀರ ಚಕ್ರ, ಅಶೋಕ ಚಕ್ರ ಸೇರಿದಂತೆ ಅತ್ಯುನ್ನತ ಶೌರ್ಯ ಪ್ರಶಸ್ತಿಗಳನ್ನು ಗೆದ್ದವರು.
Jan 26, 2024, 10:49 am IST

ಕರ್ತವ್ಯ ಪಥದಲ್ಲಿ ಮೆರವಣಿಗೆಯಲ್ಲಿ ನಾರಿ ಶಕ್ತಿ

ಮೊದಲ ಬಾರಿಗೆ, 100 ಕ್ಕೂ ಹೆಚ್ಚು ಮಹಿಳಾ ಕಲಾವಿದರು ಭಾರತೀಯ ಸಂಗೀತ ವಾದ್ಯಗಳನ್ನು ನುಡಿಸುವ ಮೂಲಕ ಮೆರವಣಿಗೆಯಲ್ಲಿ ಭಾಗಿಯಾಗಿದ್ದಾರೆ. ಈ ಕಲಾವಿದರು ನುಡಿಸುವ ಸಂಖ್, ನಾದಸ್ವರ, ನಗದ ಇತ್ಯಾದಿ ಸಂಗೀತದೊಂದಿಗೆ ಮೆರವಣಿಗೆ ಆರಂಭವಾಗಿದೆ.
Jan 26, 2024, 10:34 am IST

ರಾಷ್ಟ್ರಪತಿ ಮುರ್ಮು, ಫ್ರಾನ್ಸ್ ಅಧ್ಯಕ್ಷರಿಗೆ ಸೇನಾ ಗೌರವ
Jan 26, 2024, 10:31 am IST

Republic Day Rangoli: ಗಣರಾಜ್ಯೋತ್ಸವಕ್ಕೆ ಮನೆ ಅಂಗಳದ ಅಂದ ಹೆಚ್ಚಿಸುವ ರಂಗು ರಂಗಿನ ರಂಗೋಲಿ

ಗಣರಾಜ್ಯೋತ್ಸವಕ್ಕೆ ಯಾವ ರಂಗೋಲಿ ಹಾಕುವುದು ಎಂದು ಯೋಚಿಸುವಿರಾ? ಈ ವಿನ್ಯಾಸಗಳನ್ನು ಒಮ್ಮೆ ನೋಡಿ. ಇನ್ನಷ್ಟು ತಿಳಿಯಿರಿ.
Jan 26, 2024, 10:23 am IST

ದೆಹಲಿಯ ರಾಷ್ಟ್ರೀಯ ಸಮರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ

ದೆಹಲಿಯ ರಾಷ್ಟ್ರೀಯ ಸಮರ ಸ್ಮಾರಕಕ್ಕೆ ಪ್ರಧಾನಿ ಮೋದಿ ನಮನ
Jan 26, 2024, 10:10 am IST

ಚಿಂತಾಮಣಿ ನಗರದಲ್ಲಿ 2200 ಅಡಿಗಳ ರಾಷ್ಟ್ರಧ್ವಜ ಮೆರವಣಿಗೆ

ಚಿಂತಾಮಣಿ ನಗರದಲ್ಲಿ 2200 ಅಡಿಗಳ ರಾಷ್ಟ್ರಧ್ವಜ ಮೆರವಣಿಗೆ ಮಾಡಲಾಗುತ್ತಿದೆ. ಚಿಂತಾಮಣಿಯ ಆರ್ಯ ವೈಶ್ಯೆ ಮಂಡಳಿ ವಿನೂತನವಾಗಿ ಗಣರಾಜ್ಯೋತ್ಸವ ಆಚರಿಸಿತು.
Jan 26, 2024, 9:56 am IST

SC, ST ನಿರುದ್ಯೋಗಿಗಳಿಗೆ ಸ್ವಾವಲಂಬಿ ಸಾರಥಿ ಯೋಜನೆ ಜಾರಿ: ರಾಜ್ಯಪಾಲ ಗೆಹ್ಲೋಟ್

ಎಲ್ಲಾ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಬೋಧನೆ, ಭಾರತ ಸಂವಿಧಾನ ಪೀಠಿಕೆ ಫೋಟೋ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಪ. ಜಾತಿಯ 69,190 ವಿದ್ಯಾರ್ಥಿಗಳಿಗೆ 133.82 ಕೋಟಿ ರೂ. ಪ್ರೋತ್ಸಾಹ ಧನ ನೀಡಲಾಗಿದೆ. SC, ST ನಿರುದ್ಯೋಗಿಗಳಿಗೆ ಸ್ವಾವಲಂಬಿ ಸಾರಥಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ರಾಜ್ಯಪಾಲ ಗೆಹ್ಲೋಟ್ ತಿಳಿಸಿದರು.
Jan 26, 2024, 9:44 am IST

ಭಾರತಕ್ಕೆ ಐತಿಹಾಸಿಕ ದಿನವಾಗಿದೆ : ರಾಜ್ಯಪಾಲ ಗೆಹ್ಲೋಟ್

ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಶುಭಾಶಯಗಳು. ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ, ಸ್ವಾತಂತ್ರ್ಯ, ಹಾಗೂ ಸಮಾನತೆಯ ಅವಕಾಶವನ್ನ ಒದಗಿಸಿದೆ. ಸಮಗ್ರತೆ, ಏಕತೆಯನ್ನ ಕಾಪಾಡುವ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧ್ಯೇಯವನ್ನ ಹೊಂದಿದೆ. ಸರ್ಕಾರವು 5 ಗ್ಯಾರೆಂಟಿಗಳನ್ನ ಜಾರಿಗೊಳಿಸುವ ಭರವಸೆ ನೀಡಿತ್ತು. ಅದರಂತೆ ಎಲ್ಲ ಐದು ಗ್ಯಾರೆಂಟಿಗಳನ್ನ ಅನುಷ್ಠಾನಗೊಳಿಸಲಾಗಿದೆ
Jan 26, 2024, 9:34 am IST

75th-republic-day-parade-2024-live
75 ನೇ ಗಣರಾಜ್ಯೋತ್ಸವ ನಿಮಿತ್ತ ಕೆಪಿಸಿಸಿ ಕಚೇರಿ ಆವರಣದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Jan 26, 2024, 9:25 am IST

ಬೆಳೆ ಪರಿಹಾರದ ಮೊದಲ ಕಂತು ಬಿಡುಗಡೆ: ಸಿಎಂ

ರಾಜ್ಯ ಸರ್ಕಾರವೇ ಬರದಿಂದ ಬಾಧಿತರಾದವರಿಗೆ ಬೆಳೆ ಪರಿಹಾರವಾಗಿ 2000 ರೂ.ಗಳ ವರೆಗಿನ ತಾತ್ಕಾಲಿಕ ಪರಿಹಾರದ ಘೋಷಣೆಯನ್ನು ಮಾಡಿದ್ದು, ಈವರೆಗೆ 550 ಕೋಟಿ ರೂ.ಗಳನ್ನು ರೈತರ ಖಾತೆಗೆ ಜಮೆ ಮಾಡಲಾಗಿದೆ. ವಾರದೊಳಗೆ ಮೊದಲ ಕಂತಿನ ಪರಿಹಾರ ರೈತರಿಗೆ ತಲುಪಿಸಲಾಗುವ ವ್ಯವಸ್ಥೆಯಾಗುತ್ತಿದೆ.
Jan 26, 2024, 9:10 am IST

ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ರಿಂದ ಧ್ವಜಾರೋಹಣ

75ನೇ ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ಮಾಣಿಕ್‌ ಷಾ ಪರೇಡ್‌ ಮೈದಾನ ಮದುವಣಗಿತಿಯಂತೆ ಸಂಗಾರಗೊಂಡಿದ್ದು, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಧ್ವಜಾರೋಹಣ ನೇರವೇರಿಸಿದರು. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Jan 26, 2024, 9:00 am IST

ಧ್ವಜಾರೋಹಣ ನೆರವೇರಿಸಿ ಏಕನಾಥ್ ಶಿಂಧೆ

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಅವರು ಮುಂಬೈನ ತಮ್ಮ ಅಧಿಕೃತ ನಿವಾಸ ವರ್ಷಾ ಬಂಗಲೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.
Jan 26, 2024, 8:51 am IST

ನಾಡಿನ ಜನತೆಗೆ ಹೆಚ್.ಡಿ. ದೇವೇಗೌಡ್ರು ಶುಭಾಶಯ

‘ದೇಶದ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಜಗತ್ತಿಗೆ ಮಾದರಿಯಾದ ಭಾರತೀಯ ಸಂವಿಧಾನ ಜಾರಿಗೆ ಬಂದ ಈ ಪವಿತ್ರ ದಿನದಂದು ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹಾಗೂ ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸುತ್ತಾ, ಸದೃಢ ದೇಶ ನಿರ್ಮಾಣಕ್ಕೆ ನಾವೆಲ್ಲರೂ ಕೈಜೋಡಿಸೋಣ ಎಂದು ಮಾಜಿ ಹೆಚ್‌ ಡಿ ದೇವೇಗೌಡ್ರು ಹೇಳಿದ್ದಾರೆ.
Jan 26, 2024, 8:35 am IST

75th-republic-day-parade-2024-live
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗಣರಾಜ್ಯೋತ್ಸವ ಅಂಗವಾಗಿ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ಮಹಾತ್ಮಾ ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಗೌರವ ನಮನ ಸಲ್ಲಿಸಿದರು.
Jan 26, 2024, 8:28 am IST

ಮಾಣೆಕ್ ಷಾ ಪರೇಡ್ ಮೈದಾನದ ಸುತ್ತ ಬಿಗಿ ಬಂದೋಬಸ್ತ್

ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮ ಹಿನ್ನೆಲೆ ಮೈದಾನದ ಸುತ್ತ ಪೊಲೀಸರಿಂದ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಬರುವ ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ. ಪಾಸ್ ಇದ್ದವರಿಗೆ ಮಾತ್ರ ಮೈದಾನದ ಒಳಗಡೆ ಪ್ರವೇಶ ನೀಡಲಾಗಿದೆ. ಭದ್ರತೆಗೆ 9 ಡಿಸಿಪಿ, 16 ಎಸಿಪಿ, 46 ಇನ್ಸ್​ಪೆಕ್ಟರ್​​​, 109 PSI, 77 ASI ಸೇರಿ 1000ಕ್ಕೂ ಹೆಚ್ಚು ಸಿಬ್ಬಂದಿ, ಸಂಚಾರ ನಿರ್ವಹಣೆಗೆ ಒಟ್ಟು 575 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 10 KSRP, ಸಿಎಆರ್ ತುಕಡಿ, 2 ಅಗ್ನಿಶಾಮಕ ವಾಹನ, ಎರಡು ಆ್ಯಂಬುಲೆನ್ಸ್​, ಕ್ಷಿಪ್ರ ಕಾರ್ಯಪಡೆ ನಿಯೋಜನೆ ಮಾಡಲಾಗಿದೆ.
Jan 26, 2024, 8:10 am IST

ಗಣರಾಜ್ಯೋತ್ಸವ ಶುಭಕೋರಿದ ಪ್ರಧಾನಿ ಮೋದಿ
Jan 26, 2024, 8:09 am IST

ನಾಡಿನ ಜನತೆಗೆ ಹೆಚ್.ಡಿ.ಕುಮಾರಸ್ವಾಮಿ ಶುಭಾಶಯ

ಎಲ್ಲರಿಗೂ ಗಣರಾಜ್ಯೋತ್ಸವ ದಿನದ ಶುಭಾಶಯಗಳು. ಈ ಸಂದರ್ಭದಲ್ಲಿ ರಾಷ್ಟ್ರದ ಅಭ್ಯುದಯಕ್ಕಾಗಿ ದುಡಿದ ಎಲ್ಲಾ ಮಹನೀಯರನ್ನು ಸ್ಮರಿಸೋಣ. ಅನೇಕರ ತ್ಯಾಗ ಬಲಿದಾನಗಳಿಂದ ಪಡೆದುಕೊಂಡ ಸ್ವಾತಂತ್ರ್ಯವನ್ನು ಸಾರ್ಥಕಗೊಳಿಸಿಕೊಳ್ಳುವುದರ ಜತೆಗೆ, ಭಾರತವು ಮಹಾನ್ ಜಾಗತಿಕ ಶಕ್ತಿಯಾಗಿ ಅವಿರ್ಭವಿಸುವ ನಿಟ್ಟಿನಲ್ಲಿ ಒಟ್ಟಾಗಿ ದುಡಿಯೋಣ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿಯವರು ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ.
Jan 26, 2024, 7:56 am IST

ನವದೆಹಲಿಯಲ್ಲಿ 75ನೇ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ 16 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸ್ತಬ್ಧಚಿತ್ರಗಳನ್ನು ಪ್ರದರ್ಶಿಸಲಾಗುವುದು. ಉತ್ತರ ಪ್ರದೇಶ, ಅರುಣಾಚಲ ಪ್ರದೇಶ, ಹರಿಯಾಣ, ಮಣಿಪುರ, ಮಧ್ಯಪ್ರದೇಶ, ಒಡಿಶಾ, ಛತ್ತೀಸ್‌ಗಢ, ರಾಜಸ್ಥಾನ, ಮಹಾರಾಷ್ಟ್ರ, ಆಂಧ್ರಪ್ರದೇಶ, ಲಡಾಖ್, ತಮಿಳುನಾಡು, ಗುಜರಾತ್, ಮೇಘಾಲಯ, ಜಾರ್ಖಂಡ್ ಮತ್ತು ತೆಲಂಗಾಣ. ಅಲ್ಲದೆ ಕೇಂದ್ರ ಸರ್ಕಾರದ 9 ಸಚಿವಾಲಯಗಳ ಸ್ತಬ್ಧಚಿತ್ರಗಳು ಸಹ ಕರ್ತವ್ಯದ ಪಥದಲ್ಲಿ ಸಾಗಲಿವೆ.
Jan 26, 2024, 7:30 am IST

ಸರ್ವರಿಗೂ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ತಿಳಿಸಿದ ಬಿಜೆಪಿ
Jan 26, 2024, 7:16 am IST

ನವದೆಹಲಿಯಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ 9:30ಕ್ಕೆ ಆರಂಭವಾಗಲಿದ್ದು, 10:30ಕ್ಕೆ ಪರೇಡ್‌ ನಡೆಸಲಾಗುತ್ತದೆ. ಈ ಬಾರಿ ವಿಕ್ಷಿತ್ ಭಾರತ್ ಮತ್ತು ಭಾರತ್ - ಲೋಕತಂತ್ರ ಕಿ ಮಾತೃಕಾ ಥೀಮ್‌ನಲ್ಲಿ ಪರೇಡ್ ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ಮಾಡಿದ ಬಳಿಕ ಪಥಸಂಚಲನ ಶುರು ಆಗಲಿದೆ.
Jan 26, 2024, 7:06 am IST

ದೇಶದೆಲ್ಲೆಡೆ 75ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಹಾಗೆಯೇ ಕರ್ನಾಟಕದಲ್ಲೂ ಕೂಡ ಸಂಭ್ರಮಾಚರಣೆಗೆ ಭರ್ಜರಿ ಸಿದ್ಧತೆಗಳು ನಡೆದಿವೆ. ಬೆಂಗಳೂರಿನ ಮಾಣೆಕ್ ಷಾ ಪೆರೇಡ್ ಮೈದಾನದಲ್ಲಿ ಬೆಳಗ್ಗೆ 9ಕ್ಕೆ ರಾಜ್ಯಪಾಲ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಉಪಸ್ಥಿತಿ ಇರಲಿದ್ದಾರೆ. ಇನ್ನು ಕೇರಳ ಪೊಲೀಸ್​ ಪಡೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌​ಸಿಸಿ, ಸೇವಾದಳ, ವಿವಿಧ ಶಾಲಾ ತಂಡಗಳು ಸೇರಿದಂತೆ 38 ತುಕಡಿಗಳಲ್ಲಿ ಒಟ್ಟು 1,150 ಜನರು ಭಾಗವಹಿಸಲಿದ್ದಾರೆ.
Jan 26, 2024, 6:46 am IST

75th-republic-day-parade-2024-live
ನವದೆಹಲಿಯಲ್ಲಿ ನಡೆಯುವ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರನ್‌ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
Jan 26, 2024, 6:38 am IST

75ನೇ ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆ, ಬೆಂಗಳೂರಿನ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಬೆಳಗ್ಗೆ 9.30ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕಾರ ಮಾಡಲಿದ್ದು, ಈ ವೇಳೆ ರಾಜ್ಯದ ಜನತೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದಬಂದಿದೆ.
Jan 26, 2024, 6:26 am IST

75ನೇ ಗಣರಾಜ್ಯೋತ್ಸವ ಹಿನ್ನೆಲೆ ಕೇಂದ್ರ ಸರ್ಕಾರ ಪದ್ಮ ಪ್ರಶಸ್ತಿಗಳ ಪಟ್ಟಿಯನ್ನು ಪ್ರಕಟಿಸಿದ್ದು, 34 ಪ್ರಶಸ್ತಿ ಪುರಸ್ಕೃತರ ಪೈಕಿ ಕರ್ನಾಟಕದ ಇಬ್ಬರು ಸೋಮಣ್ಣ ಹಾಗೂ ಪ್ರೇಮ ಧನರಾಜ್‌ ಅವರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಆಯಾಗಿರುವುರುದು ವಿಶೇಷ.
Jan 26, 2024, 6:22 am IST

ಇಂದು 75ನೇ ಗಣರಾಜ್ಯೋತ್ಸವವನ್ನು ದೇಶದೆಲ್ಲೆಡೆ ಆಚರಿಸಲಾಗುತ್ತದೆ. ಇನ್ನು ಈ ವೇಳೆ ಕರ್ನಾಟಕದಲ್ಲಿ ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಡಾ.ಬಿಆರ್ ಅಂಬೇಡ್ಕರ್ ಪೋಟೋ ಇಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
READ MORE

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+