ಭಾರತ; 24 ಗಂಟೆಯಲ್ಲಿ 78,524 ಹೊಸ ಕೋವಿಡ್ ಪ್ರಕರಣ
ನವದೆಹಲಿ, ಅಕ್ಟೋಬರ್ 08: ಭಾರತದಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 68,35,656ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ ದೇಶದಲ್ಲಿ 78,524 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಹೆಲ್ತ್ ಬುಲೆಟಿನ್ ಪ್ರಕಾರ ಕಳೆದ 24 ಗಂಟೆಯಲ್ಲಿ 971 ಜನರು ದೇಶದಲ್ಲಿ ಮೃತಪಟ್ಟಿದ್ದಾರೆ. ಇದುವರೆಗೂ ಮೃತಪಟ್ಟವರ ಸಂಖ್ಯೆ 1,05,526.
ಭಾರತದಲ್ಲಿನ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 9,02,425. ಇದುವರೆಗೂ 58,27,705 ಜನರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ 6.76 ಲಕ್ಷ ಸೋಂಕಿತರು ಇದ್ದು, ವಿಶ್ವದಲ್ಲಿ ಹೆಚ್ಚು ಸೋಂಕಿತರು ಇರುವ ದೇಶಗಳಲ್ಲಿ ಭಾರತ 2ನೇ ಸ್ಥಾನದಲ್ಲಿದೆ.

ಭಾರತದಲ್ಲಿ ಅಕ್ಟೋಬರ್ 7ರ ತನಕ 8,34,65,975 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ. ಅಕ್ಟೋಬರ್ 7ರಂದು 11,94,321 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.
ಎಲ್ಲಿ ಎಷ್ಟು ಕೇಸ್ : ಬುಧವಾರ ಮಹಾರಾಷ್ಟ್ರದಲ್ಲಿ 14,578, ಆಂಧ್ರ ಪ್ರದೇಶದಲ್ಲಿ 5,120, ಕರ್ನಾಟಕದಲ್ಲಿ 10,947, ತಮಿಳುನಾಡಿನಲ್ಲಿ 5,447, ಉತ್ತರ ಪ್ರದೇಶದಲ್ಲಿ3,389 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಕೇರಳದಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಬಂದಿತ್ತು. ಬುಧವಾರ ರಾಜ್ಯದಲ್ಲಿ 10,606 ಹೊಸ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 2,53,406ಕ್ಕೆ ಏರಿಕೆಯಾಗಿದೆ.
ಪಶ್ಚಿಮ ಬಂಗಾಳದಲ್ಲಿ 3,455, ಓಡಿಶಾದಲ್ಲಿ 2,995, ಬಿಹಾರದಲ್ಲಿ 1,304, ರಾಜಸ್ಥಾನದಲ್ಲಿ 2,151, ದೆಹಲಿಯಲ್ಲಿ 2,871 ಹೊಸ ಕೋವಿಡ್ ಪ್ರಕರಣಗಳು ಬುಧವಾರ ದಾಖಲಾಗಿವೆ.
ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,68,652ಕ್ಕೆ ಏರಿಕೆಯಾಗಿದೆ. ಈ ವಾರದಲ್ಲಿ 2 ದಿನ ರಾಜ್ಯದಲ್ಲಿ ಹೊಸ ಪ್ರಕರಣಗಳ ಸಂಖ್ಯೆ 10 ಸಾವಿರದ ಗಡಿ ದಾಟಿದೆ. ಬೆಂಗಳೂರು ನಗರದಲ್ಲಿ ಸತತ ಎರಡು ದಿನಗಳಿಂದ 5 ಸಾವಿರ ಹೊಸ ಪ್ರಕರಣ ದಾಖಲಾಗುತ್ತಿದೆ.
ಟಾಪ್ 5 ರಾಜ್ಯಗಳು : ಭಾರತದಲ್ಲಿ ಕೋವಿಡ್ ಸೋಂಕಿತರು ಹೆಚ್ಚು ಇರುವ ರಾಜ್ಯ ಮಹಾರಾಷ್ಟ್ರ. ಒಟ್ಟು ಸೋಂಕಿತರು 14,80,489, ಸಕ್ರಿಯ ಪ್ರಕರಣಗಳ ಸಂಖ್ಯೆ 2,44,527.
ಆಂಧ್ರ ಪ್ರದೇಶ ರಾಜ್ಯ ಎರಡನೇ ಸ್ಥಾನದಲ್ಲಿದೆ. ಒಟ್ಟು ಸೋಂಕಿತರು 7,34,427, ಸಕ್ರಿಯ ಪ್ರಕರಣಗಳು 49,513. ಕರ್ನಾಟಕ 3ನೇ ಸ್ಥಾನದಲ್ಲಿದೆ (6,68,652).
ತಮಿಳುನಾಡು ರಾಜ್ಯ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ 4ನೇ ಸ್ಥಾನದಲ್ಲಿದೆ, ರಾಜ್ಯದಲ್ಲಿ ಒಟ್ಟು ಸೋಂಕಿತರು 6,35,855. 5ನೇ ಸ್ಥಾನದಲ್ಲಿ ಉತ್ತರ ಪ್ರದೇಶ ರಾಜ್ಯವಿದೆ (4,24,326).
-
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ರಾಶಿಯಷ್ಟೇ ಅಲ್ಲ, ದಿಕ್ಕು ಕೂಡಾ ಮುಖ್ಯ: ರಾಶಿಗನುಗುಣವಾಗಿ ನಿಮ್ಮ ಅದೃಷ್ಟ ದಿಕ್ಕು ಯಾವುದು ಗೊತ್ತಾ? -
ಮೊಡವೆ ಕಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವ ಸಿಂಪಲ್ ಟ್ರಿಕ್ಸ್ : ಬೇಸಿಗೆಯಲ್ಲಿ ಅನುಸರಿಸಿ ಈ 9 ಟಿಪ್ಸ್ -
ಮನೆ ಕಟ್ಟುವಾಗ ವಾಸ್ತು ಪಾಲಿಸದಿದ್ದರೆ ಏನಾಗುತ್ತದೆ? ಇಲ್ಲಿವೆ 5 ಪ್ರಮುಖ ನಿಯಮಗಳು -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications