7ನೇ ವೇತನ ಆಯೋಗದ ಶಿಫಾರಸು ಜಾರಿ : ಮುಖ್ಯಾಂಶಗಳು
7ನೇ ವೇತನ ಆಯೋಗವು ನೀಡಿದ್ದ ಭತ್ಯೆಯ ಶಿಫಾರಸುಗಳಿಗೆ ಕೇಂದ್ರ ಸರ್ಕಾರದ ಅಸ್ತು. ಇದರಿಂದ 34 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ, ಸೇನಾ ವಲಯದ 14 ಲಕ್ಷ ಸಿಬ್ಬಂದಿಗೆ ಲಾಭ.
ನವದೆಹಲಿ, ಜೂನ್ 29: ಕೇಂದ್ರ ಸರ್ಕಾರಿ ನೌಕರರು ತುಂಬಾ ದಿನಗಳಿಂದ ತೀವ್ರವಾಗಿ ನಿರೀಕ್ಷಿಸುತ್ತಿದ್ದ 7ನೇ ವೇತನ ಆಯೋಗದ ಶಿಫಾರಸುಗಳಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ.
ಬುಧವಾರ ಬೆಳಗ್ಗೆ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಶಿಫಾರಸುಗಳಿಗೆ ಅಂತಿಮ ಒಪ್ಪಿಗೆ ನೀಡಲಾಗಿದೆ. ಅದರಂತೆ, ಕೇಂದ್ರ ಸರ್ಕಾರಿ ನೌಕರರು ತಾವಿರುವ ನಗರಗಳ ಆಧಾರದ ಮೇಲೆ ಶೇ. 45ರವರೆಗೆ ಹೆಚ್ಚಿನ ಸಂಬಳ ಪಡೆಯಲಿದ್ದಾರೆ. ಜುಲೈ 1ರಿಂದ ವೇತನ ಆಯೋಗ ಜಾರಿಗೊಳ್ಳಲಿದೆ.
ಇದರಿಂದಾಗಿ, 34 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ, ಸೇನಾ ವಲಯದ 14 ಲಕ್ಷ ಸಿಬ್ಬಂದಿಗೆ ಇದರ ಲಾಭಗಳಾಗಲಿದ್ದು, ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕವಾಗಿ 30,748 ಕೋಟಿ ರು. ಹೊರೆ ಬೀಳಲಿದೆ.
ಬುಧವಾರ ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು, ಈ ವಿಚಾರ ತಿಳಿಸಿದರು.
7ನೇ ವೇತನ ಆಯೋಗದ ಶಿಫಾರಸುಗಳ ಸಾಧಕ- ಬಾಧಕಗಳನ್ನು ಪರಾಮರ್ಶಿಸಲು ಕೇಂದ್ರ ಸರ್ಕಾರ ರಚಿಸಿದ್ದ ಉನ್ನತ ಮಟ್ಟದ ಸಮಿತಿಯು ತನ್ನ ವರದಿಯನ್ನು ಅರುಣ್ ಜೇಟ್ಲಿಯವರಿಗೆ ಇದೇ ವರ್ಷ ಏಪ್ರಿಲ್ ನಲ್ಲಿಯೇ ಸಲ್ಲಿಸಿತ್ತು. ಅದರಲ್ಲಿ ಮನೆ ಬಾಡಿಗೆ ಭತ್ಯೆಯ ಹೆಚ್ಚಳ ವಿಚಾರವನ್ನು ಚರ್ಚಿಸಲು ತಿಳಿಸಲಾಗಿತ್ತು.
ಕೇಂದ್ರ ಸಂಪುಟದ ಈ ಹಿಂದಿನ ಸಭೆಗಳಲ್ಲಿ ವೇತನ ಆಯೋಗದ ಹಲವಾರು ಶಿಫಾರಸುಗಳಿಗೆ ಒಪ್ಪಿಗೆ ಕೊಟ್ಟಿದ್ದರೂ, ಲಾವಾಸಾ ವರದಿಯನ್ವಯ ತುಟ್ಟಿ ಭತ್ಯೆ ಹಾಗೂ ಮನೆ ಬಾಡಿಗೆ ಭತ್ಯೆಗಳ ಬಗ್ಗೆ ಸಂಪುಟ ಸಭೆಯಲ್ಲಿ ಮತ್ತಷ್ಟು ಚರ್ಚೆಗಳ ಅಗತ್ಯವಿದ್ದಿದ್ದರಿಂದ ಆಯೋಗ ಶಿಫಾರಸುಗಳಿಗೆ ಸಂಪೂರ್ಣ ಒಪ್ಪಿಗೆ ಸಿಕ್ಕಿರಲಿಲ್ಲ. ಇದೀಗ, ಆ ಬಗ್ಗೆ ಒಪ್ಪಿಗೆ ಸಿಕ್ಕಿದೆ.
ಹಾಗಾದರೆ, ಯಾವ್ಯಾವ ಭತ್ಯೆಗಳು ಎಷ್ಟು ಹೆಚ್ಚಳ, ಕೇಂದ್ರ ಸರ್ಕಾರಿ ನೌಕರರಿಗೆ ಆಗುವ ಲಾಭಗಳೇನು ಎಂಬಿತ್ಯಾದಿ ಮಾಹಿತಿಗಳು ಇಲ್ಲಿವೆ.

ಮೂರು ವಿಭಾಗಗಳಲ್ಲಿ ವಿಂಗಡಣೆ
ವೇತನ ಆಯೋಗದ ಶಿಫಾರಸುಗಳಲ್ಲಿ ಮನೆ ಬಾಡಿಗೆ ಭತ್ಯೆಯೇ ಅತಿ ಹೆಚ್ಚು ಚರ್ಚೆಗೊಳಗಾದ ವಿಚಾರ. ಇದೀಗ, ಕೇಂದ್ರ ಸರ್ಕಾರಿ ನೌಕರರು ವಾಸವಾಗಿರುವ ನಗರಗಳನ್ನು x,y ಹಾಗೂ z ಎಂಬ ಮೂರು ವಿಭಾಗಗಳಲ್ಲಿ ವಿಂಗಡಿಸಲಾಗಿದ್ದು, ಆಯಾ ವಿಭಾಗಗಳಿಗೆ ಕ್ರಮವಾಗಿ, ಶೇ. 24, ಶೇ. 26 ಹಾಗೂ ಶೇ. 8ರಷ್ಟು ಭತ್ಯೆಯನ್ನು ಹೆಚ್ಚಿಸಲಾಗಿದೆ.

ಉನ್ನತ ಅಧಿಕಾರಗಳಿಗೆ ಬಂಪರ್
ಹೆಚ್ಚಾಗಲಿರುವ ಮನೆ ಬಾಡಿಗೆ ಭತ್ಯೆಯಿಂದಾಗಿ, ದೆಹಲಿಯಂಥ ನಗರದಲ್ಲಿ ಸೇವೆ ಸಲ್ಲಿಸುತ್ತಿರುವ ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಯೊಬ್ಬರ (ಸಂಪುಟ ಕಾರ್ಯದರ್ಶಿ ಸರಿಸಮಾನ ಹುದ್ದೆಗಳು) ಮನೆ ಬಾಡಿಗೆ ಭತ್ಯೆಯು ಈ ಹಿಂದಿದ್ದ 22,500 ರು.ಗಳಿಂದ 44,640 ರು. ಗಳವರೆಗೆ ಹೆಚ್ಚಾಗಲಿದೆ. ಆ ಅಧಿಕಾರಿಯ ಮಾಸಿಕ ವೇತನದ ಮೂಲ ವೇತನದ ಪ್ರಮಾಣ, 85,000 ರು. ಗಳಿಂದ 1.26 ಲಕ್ಷ ರು.ಗಳಿಗೆ ಹೆಚ್ಚಾಗಲಿದೆ.

ಹಿರಿಯ ನಾಗರಿಕರಿಗೆ ಖುಷಿ
ಕೇಂದ್ರ ಸರ್ಕಾರದ ಮಾಜಿ ನೌಕರರ ಪಿಂಚಣಿಯಲ್ಲಿ ನೀಡಲಾಗುತ್ತಿದ್ದ ವೈದ್ಯಕೀಯ ಭತ್ಯೆಯನ್ನು ಮಾಸಿಕ 500 ರು.ಗಳಿಂದ 1,000 ರು.ವರೆಗೆ ಹೆಚ್ಚಿಸಲಾಗಿದೆ. ಇನ್ನು, ರೋಗಿಗಳ ಶುಶ್ರೂಷಾ ಭತ್ಯೆಯನ್ನು ಮಾಸಿಕವಾಗಿ 2,100 ರು.ಗಳಿಂದ 5,300 ರು.ಗಳವರೆಗೆ ಹೆಚ್ಚಿಸಲಾಗಿದೆ. ಒಟ್ಟಾರೆಯಾಗಿ, ಹಿರಿಯ ನಾಗರಿಕರಿಗೆ ವೈದ್ಯಕೀಯ ಚಿಕಿತ್ಸೆ ಭತ್ಯೆಯಲ್ಲಿ 6,300 ರು.ಗಳಷ್ಟು ಹೆಚ್ಚುವರಿ ಹಣ ಸಿಗಲಿದೆ.

ಅನೇಕರಿಗೆ ಸಹಾಯ
ಕೇಂದ್ರ ಸರ್ಕಾರಿ ನೌಕರರ ಮಕ್ಕಳ ವಿದ್ಯಾಭ್ಯಾಸದ ಭತ್ಯೆಯನ್ನು ಮಾಸಿಕವಾಗಿ 1,500 ರು.ಗಳಿಂದ 2,500 ರು.ಗಳಿಗೆ ಹೆಚ್ಚಿಸಲಾಗಿದೆ.

ಸೈನಿಕರ, ಅಧಿಕಾರಿಗಳ ವಿಶೇಷ ಭತ್ಯೆ ಹೆಚ್ಚಳ
ಸಿಯಾಚಿನ್ ನಲ್ಲಿನರುವ ಭಾರತೀಯ ಸೇನಾ ನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೈನಿಕರಿಗೆ ನೀಡಲಾಗುತ್ತಿದ್ದ ವಿಶೇಷ ಭತ್ಯೆಯನ್ನು ಮಾಸಿಕ 14, 0000 ರು.ದಿಂದ 30,000 ರು.ವರೆಗೆ ಹೆಚ್ಚಿಸಲಾಗಿದೆ. ಇದೇ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿರುವ ಸೇನಾಧಿಕಾರಿಗಳ ವಿಶೇಷ ಭತ್ಯೆಯನ್ನು ಮಾಸಿಕ 21,000ದಿಂದ 42,500 ರು.ಗಳವರೆಗೆ ಹೆಚ್ಚಿಸಲಾಗಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications