ಸರ್ಕಾರಿ ನೌಕರರೇ ಭರ್ಜರಿ ಉಡುಗೊರೆ ನಿರೀಕ್ಷಿಸಿ!
Recommended Video

ನವದೆಹಲಿ, ಫೆಬ್ರವರಿ 05: ಕೇಂದ್ರ ಬಜೆಟ್ ಮಂಡನೆ ಬಳಿಕ ಕೇಂದ್ರ ಸರ್ಕಾರಿ ನೌಕರರಿಗೆ ಕೈ ತುಂಬಾ ಸಂಬಳ ಸಿಗುವ ಸುದ್ದಿ ಬಹುತೇಕ ಖಚಿತವಾಗಿದೆ.
ವಿತ್ತ ಸಚಿವಾಲಯದ ಮೂಲಗಳ ಪ್ರಕಾರ ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ, ಭತ್ಯೆ ಏರಿಕೆಯಾಗಲಿದೆ.
ಏಪ್ರಿಲ್ ತಿಂಗಳಿನಿಂದ ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆಯಾಗುವ ಸಾಧ್ಯತೆಯಿದೆ ಎಂಬ ಸುದ್ದಿ ಲಕ್ಷಾಂತರ ಮಂದಿಗೆ ಖುಷಿ ತರಲಿದೆ.
7ನೇ ವೇತನ ಆಯೋಗ ಶಿಫಾರಸ್ಸಿನ ಅನ್ವಯ ಹೊಸ ವೇತನ ದರ ಪಟ್ಟಿ ಜಾರಿಗೆ ಬರಲಿದ್ದು, ಇದಕ್ಕೆ ಕೇಂದ್ರ ಸಚಿವ ಸಂಪುಟ ಕೂಡ 2016ರಲ್ಲೇ ಒಪ್ಪಿಗೆ ಸೂಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಕೇಂದ್ರ ಸರ್ಕಾರಿ ನೌಕರರು 6ನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ, ಫಿಟ್ಮೆಂಟ್ ಫಾರ್ಮ್ಯೂಲಾದಂತೆ ಮೂಲ ವೇತನದ 2.57ರಂತೆ ವೇತನ ಪಡೆಯುತ್ತಿದ್ದಾರೆ.
ಈಗ ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನು ಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವ ನಿರೀಕ್ಷೆಯಿದೆ.

ಸಿಬ್ಬಂದಿಯ ಕನಿಷ್ಟ ವೇತನ ಏರಿಕೆ
ಸಿಬ್ಬಂದಿಯ ಕನಿಷ್ಟ ವೇತನವನ್ನು 7000 ರು ಗಳಿಂದ 18,000ಕ್ಕೇರಿಸಲಾಗುವುದು ಹಾಗೂ ಗರಿಷ್ಟ ವೇತನವನ್ನು 90,000 ರು ನಿಂದ 2.5 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗುತ್ತದೆ. ಇದು ಜನವರಿ 2016ರಿಂದ ಪೂರ್ವನ್ವಯವಾಗಲಿದೆ. ಇದು 2.57 ಫಿಟ್ಮೆಂಟ್ ಫಾರ್ಮುಲಾಗೆ ಅನುಗುಣವಾಗಿ ಸಿಗಲಿದೆ.

ಸಿಬ್ಬಂದಿಗಳ ಬೇಡಿಕೆ ಏನಿದೆ?
ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ಕಳೆದ ವರ್ಷ ಜುಲೈ ತಿಂಗಳಿನಲ್ಲಿ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ.

ಬಜೆಟ್ 2018ರಲ್ಲಿ ಈ ಬಗ್ಗೆ ನಿರೀಕ್ಷೆಯಿತ್ತು
ಸಂಬಳದಾರ ಮಧ್ಯಮವರ್ಗದವರಿಗೆ ಬಜೆಟ್ 2018ರಲ್ಲಿ ಅರುಣ್ ಜೇಟ್ಲಿ ಏನು ಕೊಟ್ಟಿಲ್ಲ ಎಂಬ ದೊಡ್ಡ ಆರೋಪ ಕೇಳಿ ಬಂದಿದೆ. ಇದನ್ನು ಸರಿದೂಗಿಸಲು ವೇತನ ಏರಿಕೆಯ ಗಿಫ್ಟ್ ನೀಡುವ ಸಾಧ್ಯತೆಯಿದೆ. ಆದರೆ, ಇದಕ್ಕೆ ಮತ್ತೊಮ್ಮೆ ಸಂಪುಟದ ಸಮ್ಮತಿ ಬೇಕಾಗಿದ್ದು, ಮುಂದಿನ ಆರ್ಥಿಕ ವರ್ಷದಿಂದ ಜಾರಿಗೆ ಬರುವ ನಿರೀಕ್ಷೆಯಿದೆ.

ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಹೊರೆ
ಕೇಂದ್ರ ಸರ್ಕಾರಿ ನೌಕರರು ತಾವಿರುವ ನಗರಗಳ ಆಧಾರದ ಮೇಲೆ ಶೇ. 45ರವರೆಗೆ ಹೆಚ್ಚಿನ ಸಂಬಳ ಪಡೆಯಲಿದ್ದಾರೆ. ಜುಲೈ 1ರಿಂದ ವೇತನ ಆಯೋಗ ಜಾರಿಗೊಳ್ಳಲಿದೆ.
34 ಲಕ್ಷ ಕೇಂದ್ರ ಸರ್ಕಾರಿ ನೌಕರರಿಗೆ, ಸೇನಾ ವಲಯದ 14 ಲಕ್ಷ ಸಿಬ್ಬಂದಿಗೆ ಇದರ ಲಾಭಗಳಾಗಲಿದ್ದು, ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕವಾಗಿ 30,748 ಕೋಟಿ ರು. ಹೊರೆ ಬೀಳಲಿದೆ
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications