ಸರ್ಕಾರಿ ನೌಕರರಿಗೆ ಡಬ್ಬಲ್ ಧಮಾಕ, ಡಿಎ, ಸಂಬಳ ಏರಿಕೆ!
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸರ್ಕಾರಿ ನೌಕರರಿಗೆ ಶೇ 4ರಷ್ಟು ಡಿಎ ಹೆಚ್ಚಳಕ್ಕೆ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದಲ್ಲದೆ, ತುಟ್ಟಿಭತ್ಯೆ ಪರಿಹಾರ(ಡಿಆರ್) ಬಾಕಿಮೊತ್ತ ಕೂಡಾ ಲಭಿಸಲಿದೆ. ಜೊತೆಗೆ ಜನವರಿ 1, 2020 ಅನ್ವಯ ಸಂಬಳ ಏರಿಕೆಗೂ ಸಂಪುಟ ಒಪ್ಪಿಗೆ ನೀಡಿದೆ ಎಂಬ ಸುದ್ದಿ ಬಂದಿದೆ.
ವೇತನ ಸಂಹಿತೆಯ ಕರಡು ಪ್ರತಿಯಂತೆ ಉದ್ಯೋಗಿಗಳು ದಿನಕ್ಕೆ 9 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ. ವೇತನವನ್ನು ನಿರ್ಧರಿಸಲು ಮೂರು ಭೌಗೋಳಿಕ ವರ್ಗೀಕರಣಗಳನ್ನು ಸೂಚಿಸಲಾಗಿತ್ತು. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಇನ್ನೂ ಯಾವುದೇ ಸೂಚನೆ ಇಲ್ಲಿ ತನಕ ಬಂದಿಲ್ಲ.
ಸದ್ಯದ ಮಾಹಿತಿಯಂತೆ ಡಿಎ ಶೇ 17ರಿಂದ ಶೇ 21ಕ್ಕೇರಿಕೆಯಾಗಲಿದೆ. ಡಿಎ ಹೆಚ್ಚಳ ಘೋಷಣೆಯಿಂದ ಕೇಂದ್ರ ಬೊಕ್ಕಸಕ್ಕೆ 12,150 ಕೋಟಿ ರು ಹೆಚ್ಚುವರಿ ಹೊರೆ ಬೀಳಲಿದೆ, ಕಳೆದ ಆರ್ಥಿಕ ವರ್ಷ 2020-21ರಲ್ಲಿ 14,595 ಕೋಟಿ ರು ನಷ್ಟಿತ್ತು. ಡಿಎ ಹೆಚ್ಚಳದಿಂದಾಗಿ 48.34 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 65.26 ಲಕ್ಷ ಪಿಂಚಣಿದಾರರಿಗೆ ನೆರವು ಲಭಿಸಲಿದೆ. ಡಿಎ ಹೆಚ್ಚಳದ ಬಗ್ಗೆ ಮುಂಬರುವ ಬಜೆಟ್ 2021ರಲ್ಲಿ ಅಧಿಕೃತವಾಗಿ ಘೋಷಣೆ ಸಾಧ್ಯತೆಯಿದೆ.

ಹಣದುಬ್ಬರದ ಪರಿಣಾಮ ಎಲ್ಲವೂ ವ್ಯತ್ಯಯ
ಹಣದುಬ್ಬರದ ಪರಿಣಾಮವನ್ನು ತಡೆದುಕೊಳ್ಳುವ ಸಲುವಾಗಿ ವೇತನದ ಜತೆಗೆ ಪಾವತಿ ಮಾಡುವಂಥ ಒಂದು ಭಾಗ ತುಟ್ಟಿ ಭತ್ಯೆ. ಈ ಏರಿಕೆಯ ಅನುಕೂಲವನ್ನು 48.34 ಲಕ್ಷದಷ್ಟಿರುವ ಕೇಂದ್ರ ಸರಕಾರಿ ನೌಕರರು ಹಾಗೂ 62.26 ಲಕ್ಷದಷ್ಟಿರುವ ಪಿಂಚಣಿದಾರರು ಪಡೆಯಲಿದ್ದಾರೆ. ಡಿಸೆಂಬರ್ ತಿಂಗಳಿನ ಗ್ರಾಹಕ ದರ ಸೂಚಿ (consumer price index) ಶೇ4.59 ರಷ್ಟಾದರೆ, ತುಟ್ಟಿಭತ್ಯೆ ಪ್ರಮಾಣ ಕೂಡಾ ಶೇ3ರ ಬದಲಿಗೆ ಶೇ 4ಕ್ಕಿಂತ ಅಧಿಕವಾಗುವ ನಿರೀಕ್ಷೆಯಿತ್ತು. ಆದರೆ, ಇದೆಲ್ಲವನ್ನು ಮೀರಿ ಮುಂದಿನ ಅವಧಿ ಜನವರಿ 2020ಕ್ಕೆ ಶೇ 4ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಲಾಗುತ್ತದೆ.

ಕನಿಷ್ಠ ವೇತನ ಬೇಡಿಕೆ ಈಡೇರಿಲ್ಲ
ಕೇಂದ್ರದ ಕಾರ್ಮಿಕ ಸಚಿವಾಲಯದ ಆಂತರಿಕ ಸಮಿತಿಯು ಜನವರಿಯಲ್ಲಿ ಬಿಡುಗಡೆ ಮಾಡಿದ ವರದಿಯಂತೆ, ಜುಲೈ 2018ರ ಪ್ರಕಾರ ಕನಿಷ್ಠ ವೇತನ 375 ರೂ., ಕನಿಷ್ಠ ಮಾಸಿಕ ವೇತನ 9,750 ರೂ ಹಾಗೂ ನಗರ ಮೂಲದ ಕಾರ್ಮಿಕರಿಗೆ 1,430 ರೂ. ವಸತಿ ಭತ್ಯೆಯನ್ನು ನೀಡಬೇಕೆಂದು ಸೂಚಿಸಲಾಗಿದೆ. ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆ ಇನ್ನೂ ಈಡೇರಿಲ್ಲ. ಕನಿಷ್ಠ ವೇತನ 21 ಸಾವಿರ ರು ನಿಂದ 26 ಸಾವಿರ ರು ತನಕ ಏರಿಕೆ ಮಾಡುವ ಸಾಧ್ಯತೆ ಬಗ್ಗೆ ಚರ್ಚೆ ನಡೆದಿದ್ದರೂ ಈ ಬಾರಿ ಬಜೆಟ್ ನಲ್ಲಿ ಘೋಷಣೆಯಾಗುವುದಿಲ್ಲ.

ಸರ್ಕಾರಿ ನೌಕರರ ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ
ಸರ್ಕಾರಿ ನೌಕರರ ಬೇಡಿಕೆಗಳು ಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನು ಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್ ಫಾರ್ಮುಲಾ ಅವರನ್ನು ಮೂಲವೇತನದ ಮೂರು ಪಟ್ಟು ಏರಿಕೆ ಮಾಡುವಂತೆ ಬೇಡಿಕೆ ಇದ್ದೇ ಇದೆ. ಕನಿಷ್ಟ ವೇತನವನ್ನು 18,000 ದಿಂದ 26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರ ಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. ಈ ಕುರಿತಂತೆ ಪ್ರತಿಭಟನೆ ಕೂಡಾ ನಡೆಸಿದ್ದರು. ಅಂದರೆ, 3.7 ಫಿಟ್ಮೆಂಟ್ ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ.

ತುಟ್ಟಿಭತ್ಯೆ ಹೆಚ್ಚಳ ಇತಿಹಾಸ
2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆ ಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ. ಈಗ ತುಟ್ಟಿ ದರ (ಡಿಆರ್) ಈಗ ಶೇ 16ರಷ್ಟಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications