ಜುಲೈ ಅಂತ್ಯಕ್ಕೆ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದಿಂದ ಶುಭ ಸುದ್ದಿ
ನವದೆಹಲಿ, ಜುಲೈ 12: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 05ರಂದು ಮಂಡಿಸಿದ ಚೊಚ್ಚಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ನಿರಾಶೆ ಉಂಟಾಗಿತ್ತು. ಮೋದಿ ಸರ್ಕಾರ್ 2.0 ನ ಚೊಚ್ಚಲ ಬಜೆಟ್ ನಲ್ಲಿ ಸರ್ಕಾರಿ ನೌಕರರ ಬೇಡಿಕೆ, 7ನೇ ವೇತನ ಆಯೋಗದ ಶಿಫಾರಸು ಅನುಷ್ಠಾನ, ನಿವೃತ್ತಿ ವಯಸ್ಸು ಏರಿಕೆ, ಕನಿಷ್ಟ ವೇತನ ಮೊತ್ತ ಏರಿಕೆ ಬಗ್ಗೆ ಯಾವುದೇ ಪ್ರಸ್ತಾಪ ಕಂಡು ಬಂದಿರಲಿಲ್ಲ.
ಕೇಂದ್ರ ಸರ್ಕಾರಿ ನೌಕರರು 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕನಿಷ್ಠ ವೇತನವನ್ನು 18,000ರು ನಿಂದ 26,000 ರು ಗೇರಿಸುವಂತೆ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಇನ್ನೂ ಮನ್ನಣೆ ಸಿಕ್ಕಿಲ್ಲ.ಹೀಗಾಗಿ ಸರ್ಕಾರಿ ನೌಕರರು ತಮ್ಮ ಬೇಡಿಕೆ ಈಡೇರಲು ಇನ್ನಷ್ಟು ಕಾಲ ಕಾಯುವುದು ಅನಿವಾರ್ಯ ಎನ್ನಲಾಗಿತ್ತು. ಆದರೆ, ಸದ್ಯಕ್ಕೆ ತುಟ್ಟಿಭತ್ಯೆ ಹೆಚ್ಚಳದ ಬಗ್ಗೆ ತೀರ್ಮಾನವಾಗಿದ್ದು, ಜುಲೈ ತಿಂಗಳ ಅಂತ್ಯಕ್ಕೆ ಈ ಬಗ್ಗೆ ಅಧಿಕೃತ ಆದೇಶ ನಿರೀಕ್ಷಿಸಬಹುದಾಗಿದೆ.
ತುಟ್ಟಿಭತ್ಯೆ ಪ್ರಮಾಣ ಕೂಡಾ ಶೇ3ರ ಬದಲಿಗೆ ಶೇ 4ಕ್ಕಿಂತ ಅಧಿಕವಾಗುವ ನಿರೀಕ್ಷೆಯಿದೆ ಎಂದು ಅಖಿಲ ಭಾರತ ಅಕೌಂಟ್ಸ್ ಹಾಗೂ ಆಡಿಟ್ ಸಂಸ್ಥೆಯ ಸಹಾಯಕ ಕಾರ್ಯದರ್ಶಿ ಹರಿಶಂಕರ್ ತಿವಾರಿ ಹೇಳಿದ್ದರು. ಆದರೆ, ಶೇ 5ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಜುಲೈ ತಿಂಗಳಿನಲ್ಲೇ ಸರ್ಕಾರ ಘೋಷಿಸಲು ಸಜ್ಜಾಗಿದೆ.

ಶೇ12 ರಿಂದ ಶೇ 17ಕ್ಕೆ ಡಿಎ ಏರಿಕೆಯಾಗಲಿದೆ
ಲಭ್ಯ ಮಾಹಿತಿಯಂತೆ ಶೇ12 ರಿಂದ ಶೇ 17ಕ್ಕೆ ಡಿಎ ಏರಿಕೆಯಾಗಲಿದೆ. ಗ್ರಾಹಕ ದರ ಸೂಚ್ಯಂಕ, ಸಗಟು ಹಣದುಬ್ಬರ ಗಮನಿಸಿ, ಅಖಿಲ ಭಾರತ ಗ್ರಾಹಕ ದರ ಸೂಚ್ಯಂಕ(ಎಐಸಿಪಿಐ) ಏಪ್ರಿಲ್ ನಲ್ಲಿ ಏರಿಕೆಯಾಗಿದೆ.
ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಜುಲೈ 01,2018ರಿಂದ ಅನ್ವಯವಾಗುವಂತೆ ಶೇ.2ರಷ್ಟು ಹೆಚ್ಚಳ ಮಾಡಲಾಗಿತ್ತು. ಶೇ 13.39ರಿಂದ ಶೇ 15.49ಕ್ಕೇರಿಯಾಗಿತ್ತು.
ಸುಮಾರು 1.1 ಕೋಟಿ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ನೆರವಾಗಲಿದ್ದು, ಕೇಂದ್ರ ಸರ್ಕಾರದ ಮೇಲೆ ವಾರ್ಷಿಕವಾಗಿ 6,112.20 ಕೋಟಿ ರೂ. ಹೆಚ್ಚಿನ ಹೊರೆ ಬೀಳಲಿದೆ. 2013-14ರಲ್ಲಿ 63,000 ಕೋಟಿ ಇದ್ದ ಇಲಾಖೆಯ ಬಹೆಟ್ ಈಗ 2018-19ರಲ್ಲಿ 110 ಲಕ್ಷ ಕೋಟಿಗೆ ಏರಿಕೆಯಾಗಿದೆ.

2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನ
2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆ ಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ. ಆದರೆ, ನಿವೃತ್ತಿ ವಯಸ್ಸು ಏರಿಕೆ, ಕನಿಷ್ಠ ವೇತನದಲ್ಲಿ ಬದಲಾವಣೆ ಬಗ್ಗೆ ಸುಳಿವು ಸಿಕ್ಕಿಲ್ಲ.

ಕನಿಷ್ಟ ವೇತನ ಏರಿಕೆ ಇಲ್ಲ, ಒಟ್ಟಾರೆ ವೇತನ ಏರಿಕೆ?
ಕಳೆದ ಏಪ್ರಿಲ್ 1 ರಿಂದ 7 ನೇ ವೇತನ ಆಯೋಗದ ವರದಿ ಅನುಷ್ಠಾನವಾಗಲಿದ್ದು, ಆಯೋಗದ ಶಿಫಾರಸು ಮೀರಿ ಕನಿಷ್ಠ ವೇತನವನ್ನು 18,000 ರೂ.ನಿಂದ 21,000 ರೂ.ಗೆ ಏರಿಕೆ ಮಾಡುವ ಸಾಧ್ಯತೆ ಇತ್ತು. ಆದರೆ, ಈ ಬಗ್ಗೆ ಯಾವುದೇ ಘೋಷಣೆಯಾಗಲಿಲ್ಲ. ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ನೀತಿ ಸಂಹಿತೆ ಜಾರಿಗೊಂಡು ಯಾವುದೇ ಘೋಷಣೆಗೆ ಅವಕಾಶ ಸಿಗಲಿಲ್ಲ. ಹೀಗಾಗಿ, ಮೂಲ ವೇತನದಲ್ಲಿ ಎಷ್ಟು ಪ್ರಮಾಣ ಏರಿಕೆ ಬೇಡಿಕೆ ಹಾಗೆ ಉಳಿದಿದೆ. ಆದರೆ, ಒಟ್ಟಾರೆ ವೇತನದಲ್ಲಿ 2 ಸಾವಿರ ರು ಏರಿಕೆ ಸಾಧ್ಯತೆ ಬಗ್ಗೆ ಸುಳಿವು ಸಿಕ್ಕಿದೆ.

ತುಟ್ಟಿಭತ್ಯೆ ಹೆಚ್ಚಳ ಪ್ರಮಾಣ ಹೆಚ್ಚಿಸಲು ಮನವಿ
ಕೇಂದ್ರ ಸಂಪುಟವು 3% ತುಟ್ಟಿ ಭತ್ಯೆ (ಡಿಎ) ಹೆಚ್ಚಳದ ಘೋಷಣೆ ಮಾಡಿದ್ದು, ಸರ್ಕಾರಿ ನೌಕರರಿಗೆ ಕೊಂಚ ಸಂತಸ ತಂದಿದೆ. ಜನವರಿ 1, 2019ರಿಂದಲೇ ಇದು ಪೂರ್ವಾನ್ವಯ ಆಗಲಿದೆ. ಈ ನಿರ್ಧಾರದಿಂದ ಕಳೆದ ಕೇಂದ್ರ ಸರಕಾರದ ಮೇಲೆ 9000 ಕೋಟಿ ರುಪಾಯಿ ಹೆಚ್ಚುವರಿ ಹೊರೆ ಬಿದ್ದಿತ್ತು.
ಹಣದುಬ್ಬರದ ಪರಿಣಾಮವನ್ನು ತಡೆದುಕೊಳ್ಳುವ ಸಲುವಾಗಿ ವೇತನದ ಜತೆಗೆ ಪಾವತಿ ಮಾಡುವಂಥ ಒಂದು ಭಾಗ ತುಟ್ಟಿ ಭತ್ಯೆ. 3% ತುಟ್ಟಿ ಭತ್ಯೆ ಹೆಚ್ಚಳ ಮಾಡಿರುವುದರಿಂದ ಡಿಎ ಹಾಗೂ ತುಟ್ಟಿ ದರ (ಡಿಆರ್) ನಿವೃತ್ತಿಯಾದವರಿಗೆ ಶೇ 12ರಷ್ಟು ತಲುಪಲಿದೆ. ಈ ಏರಿಕೆಯ ಅನುಕೂಲವನ್ನು 48.41 ಲಕ್ಷದಷ್ಟಿರುವ ಕೇಂದ್ರ ಸರಕಾರಿ ನೌಕರರು ಹಾಗೂ 62.03 ಲಕ್ಷದಷ್ಟಿರುವ ಪಿಂಚಣಿದಾರರು ಪಡೆಯಲಿದ್ದಾರೆ. ಆದರೆ, ಶೇ 4ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಬೇಡಿಕೆ ಇಡಲಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications