ಡಿಎ ಹೆಚ್ಚಿಸಿ ಸರ್ಕಾರಿ ನೌಕರರಿಗೆ ಶುಭ ಸುದ್ದಿ ನೀಡಲಿದೆ ಮೋದಿ ಸರ್ಕಾರ
Recommended Video

ನವದೆಹಲಿ, ಜನವರಿ 07: ಲೋಕಸಭೆ ಚುನಾವಣೆಗೂ ಮುನ್ನ ನಿರೀಕ್ಷೆಯಂತೆ ಕೋಟ್ಯಂತರ ಮಂದಿಗೆ ಮೋದಿ ಸರ್ಕಾರದಿಂದ ಶುಭ ಸುದ್ದಿ ಸಿಗಲಿದೆ.
ಕಳೆದ ಸ್ವಾತಂತ್ರ್ಯೋತ್ಸವ ದಿನದಂದು ವೇತನ ಏರಿಕೆ, ತುಟ್ಟಿಭತ್ಯೆ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ನಿರಾಶೆಯಾಗಿತ್ತು. ಆದರೆ, ಕಳೆದ ಆಗಸ್ಟ್ ತಿಂಗಳಿನಲ್ಲಿ ತುಟ್ಟಿಭತ್ಯೆ(ಡಿಎ) ಹೆಚ್ಚಳ ಮಾಡಿದ್ದ ಮೋದಿ ಸರ್ಕಾರ, ಈಗ ಮತ್ತೊಮ್ಮೆ ಡಿಎ ಹೆಚ್ಚಿಸುವ ಮೂಲಕ ಸರ್ಕಾರಿ ನೌಕರರ ಮನ ಗೆಲ್ಲುವ ಹಂತದಲ್ಲಿದೆ.
7ನೇ ವೇತನ ಆಯೋಗದ ಬಹು ನಿರೀಕ್ಷಿತ ಶಿಫಾರಸ್ಸಿನ ಅನ್ವಯ ಸುಮಾರು 1 ಕೋಟಿಗೂ ಮಂದಿಗೆ ಲಾಭವಾಗಲಿರುವ ನಿವೃತ್ತಿ ವಯಸ್ಸು ಏರಿಕೆ(60 ರಿಂದ 62ಕ್ಕೆ) ಬೇಡಿಕೆ ಹಾಗೂ ವೇತನ ಹೆಚ್ಚಳ ಎರಡಕ್ಕೂ ಮೋದಿ ಅವರು ಇನ್ನು ಅಸ್ತು ಎಂದಿಲ್ಲ.
ಆದರೆ, ಶೇ3ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ಈ ಕುರಿತಂತೆ ಅಧಿಕೃತ ಘೋಷಣೆ ಇನ್ನೂ ಬಾಕಿಯಿದೆ. ಜನವರಿ 01, 2019ರಿಂದ ಪೂರ್ವನ್ವಯವಾಗುವಂತೆ ಹೆಚ್ಚಳ ಜಾರಿಗೆ ಬರಲಿದೆ.

ಶೇ4ರಷ್ಟು ತುಟ್ಟಿಭತ್ಯೆ ಸಿಕ್ಕರೂ ಸಿಗಬಹುದು
ಕಳೆದ ಡಿಸೆಂಬರ್ ತಿಂಗಳಿನ ಗ್ರಾಹಕ ದರ ಸೂಚಿ (consumer price index) ಶೇ5 ರಷ್ಟಾದರೆ, ತುಟ್ಟಿಭತ್ಯೆ ಪ್ರಮಾಣ ಕೂಡಾ ಶೇ3ರ ಬದಲಿಗೆ ಶೇ 4ಕ್ಕಿಂತ ಅಧಿಕವಾಗುವ ನಿರೀಕ್ಷೆಯಿದೆ ಎಂದು ಅಖಿಲ ಭಾರತ ಅಕೌಂಟ್ಸ್ ಹಾಗೂ ಆಡಿಟ್ ಸಂಸ್ಥೆಯ ಸಹಾಯಕ ಕಾರ್ಯದರ್ಶಿ ಹರಿಶಂಕರ್ ತಿವಾರಿ ಹೇಳಿದ್ದಾರೆ. ಶೇ3ರಷ್ಟು ಡಿಎ ಹೆಚ್ಚಳ ನಿಚ್ಚಳವಾಗಿದೆ ಎಂದಿದ್ದಾರೆ.

ಈ ಹಿಂದೆ ಡಿಎ ಶೇ2ರಷ್ಟು ಹೆಚ್ಚಳವಾಗಿತ್ತು
ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಜುಲೈ 01,2018ರಿಂದ ಅನ್ವಯವಾಗುವಂತೆ ಶೇ.2ರಷ್ಟು ಹೆಚ್ಚಳ ಮಾಡಲಾಗಿತ್ತು. ಇದರಿಂದ ಸುಮಾರು 1.1 ಕೋಟಿ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ನೆರವಾಗಲಿದ್ದು, ಕೇಂದ್ರ ಸರ್ಕಾರದ ಮೇಲೆ ವಾರ್ಷಿಕವಾಗಿ 6,112.20 ಕೋಟಿ ರೂ. ಹೆಚ್ಚಿನ ಹೊರೆ ಬೀಳಲಿದೆ. 2013-14ರಲ್ಲಿ 63,000 ಕೋಟಿ ಇದ್ದ ಇಲಾಖೆಯ ಬಹೆಟ್ ಈಗ 2018-19ರಲ್ಲಿ 110 ಲಕ್ಷ ಕೋಟಿಗೆ ಏರಿಕೆಯಾಗಿದೆ.

ನಿವೃತ್ತಿ ವಯಸ್ಸು ಹೆಚ್ಚಳದ ಬೇಡಿಕೆ
2014ರಲ್ಲಿ ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಶೇಕಡಾ 14ರಷ್ಟು ಏರಿಕೆ ಮಾಡಲಾಗಿತ್ತು. ಆದರೆ, ಸರ್ಕಾರಿ ನೌಕರರು ಇದಕ್ಕೆ ತೃಪ್ತಿ ವ್ಯಕ್ತಪಡಿಸಿರಲಿಲ್ಲ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ ಹೆಚ್ಚಳ ಮಾಡಬೇಕೆಂಬ ಬೇಡಿಕೆಯಿಟ್ಟಿದ್ದರು. ತುಟ್ಟಿಭತ್ಯೆ ಹೆಚ್ಚಳವು ಜನವರಿ 01, 2018ರಿಂದ ಜಾರಿಗೆ ಬರಬೇಕಿದ್ದು, 50 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 61 ಲಕ್ಷಕ್ಕೂ ಅಧಿಕ ಪಿಂಚಣಿದಾರರಿಗೆ ಲಾಭ ತರಲಿದೆ. ಇದರ ಜತೆಗೆ ಈಗ ನಿವೃತ್ತಿ ವಯಸ್ಸು 62ಕ್ಕೇರಿಸಿದರೆ 1.1 ಕೋಟಿ ಮಂದಿಗೆ ಲಾಭವಾಗಲಿದೆ.

ಪಿಂಚಣಿದಾರರಿಗೂ ಅನುಕೂಲ
ಕೇಂದ್ರ ವಿಶ್ವವಿದ್ಯಾಲಯದ ಶಿಕ್ಷಣ ಸಂಸ್ಥೆಗಳಿಂದ ನಿವೃತ್ತಿ ಹೊಂದಿದ ಬೋಧಕ ಸಿಬ್ಬಂದಿಗಳಿಗೆ 7ನೇ ವೇತನ ಆಯೋಗದ ಅನ್ವಯ ಪಿಂಚಣಿ ಸಿಗಲಿದೆ. ಸುಮಾರು 25,000 ಪಿಂಚಣಿದಾರರಿಗೆ 6,000 ರು ನಿಂದ 18,000 ರುಗಳ ತನಕ ಪಿಂಚಣಿ ಸಿಗಲಿದೆ. ಇದು ಪರೋಕ್ಷವಾಗಿ ರಾಜ್ಯ ವಿಶ್ವವಿದ್ಯಾಲಯಗಳಿಂದ ನಿವೃತ್ತಿ ಹೊಂದಿದ 23 ಲಕ್ಷಕ್ಕೂ ಅಧಿಕ ಸಿಬ್ಬಂದಿಗಳಿಗೂ ಅನ್ವಯವಾಗಲಿದೆ.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications