Get Updates
Get notified of breaking news, exclusive insights, and must-see stories!

7th Pay Commission: 15 ವರ್ಷಗಳ ಬಳಿಕ ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಮತ್ತು ಸಾರಿಗೆ ಭತ್ಯೆಗಳ ಹೆಚ್ಚಳ

7th Pay Commission: ಸರ್ಕಾರವು ಸರ್ಕಾರಿ ನೌಕರರಿಗೆ ಶುಭಸುದ್ದಿಗಳನ್ನು ನೀಡುತ್ತಲೇ ಇರುತ್ತದೆ. ಇದೀಗ ಈ ಸರ್ಕಾರವು ತನ್ನ ಉದ್ಯೋಗಿಗಳಿಗೆ 15 ವರ್ಷಗಳ ಬಳಿಕ ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಭತ್ಯೆ ಮತ್ತು ಸಾರಿಗೆ ಭತ್ಯೆಯಲ್ಲಿ ಏರಿಕೆ ಮಾಡಿದೆ. ಹಾಗಾದ್ರೆ ಎಷ್ಟು ಎನ್ನುವ ಮಾಜಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ರಾಜ್ಯದ ಸರ್ಕಾರಿ ಉದ್ಯೋಗಿಗಳಿಗೆ 15 ವರ್ಷಗಳ ನಂತರ ಮಧ್ಯಪ್ರದೇಶ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರಾಜ್ಯದ ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಭತ್ಯೆ ಮತ್ತು ಸಾರಿಗೆ ಭತ್ಯೆಯಲ್ಲಿ ಏರಿಕೆ ಮಾಡಿದೆ. ಸಿಎಂ ಡಾ. ಮೋಹನ್ ಯಾದವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಇದರಿಂದ ರಾಜ್ಯದ ಸರ್ಕಾರಿ ನೌಕರರು ಮತ್ತು ಕಾರ್ಮಿಕರು ಸಂತಸಗೊಂಡಿದ್ದಾರೆ.

7th Pay Commission House Rent and Transport Allowances Increase for Government Employees

7ನೇ ವೇತನ ಆಯೋಗದಡಿ ಮಧ್ಯಪ್ರದೇಶ ಸರ್ಕಾರವು ರಾಜ್ಯದ ಸರ್ಕಾರಿ ಉದ್ಯೋಗಿಗಳ ವೇತನವನ್ನು ಪರಿಷ್ಕರಣೆ ಮಾಡಿದೆ. ಹೊಸ ವೇತನ ಶ್ರೇಣಿಯು ಏಪ್ರಿಲ್ 1, 2025ರಿಂದ ಜಾರಿಗೆ ಬರಲಿದ್ದು, ಇದರಿಂದ ಸರ್ಕಾರಿ ನೌಕರರ ಭರ್ಜರಿ ಶುಭ ಸುದ್ದಿ ಸಿಕ್ಕಂತಾಗಿದೆ.

* ಮೊದಲಿಗೆ ಕೌಶಲ್ಯರಹಿತ ಕೆಲಸಗಾರರ ದೈನಂದಿನ ಸಂಬಳ 368.27 ರೂಪಾಯಿ ಇತ್ತು. ಇದೀಗ ಇದು 466.35 ರೂಪಾಯಿಗೆ ಏರಿಕೆಯಾಗಿದ್ದು, ಮಾಸಿಕ ಸಂಬಳ 12,125 ರೂಪಾಯಿ ಆದಂತಾಗಿದೆ.

* ಮೊದಲಿಗೆ ಅರೆ ಕೌಶಲ್ಯಪೂರ್ಣ ಕೆಲಸಗಾರರ ದಿನದ ಸಂಬಳ 406.58 ರೂಪಾಯಿ ಇತ್ತು. ಇದೀಗ ಇದನ್ನು 505.00 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ಮಾಸಿಕ ವೇತನ 13,121 ರೂಪಾಯಿ ಆದಂತಾಗಿದೆ.

* ಮೊದಲಿಗೆ ಕೌಶಲ್ಯಪೂರ್ಣ ಕೆಲಸಗಾರರಿಗೆ 472.85 ರೂಪಾಯಿ ದಿನದ ವೇತನ ಇತ್ತು. ಇದೀಗ 571.00 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ಮಾಸಿಕ ವೇತನ 14,844 ರೂಪಾಯಿ ಆದಂತಾಗಿದೆ.

* ಮೊದಲಿಗೆ ಹೆಚ್ಚು ಕೌಶಲ್ಯಪೂರ್ಣ ಕೆಲಸಗಾರರಿಗೆ 535.35 ರೂಪಾಯಿ ದೈನಂದಿನ ಸಂಬಳ ಇತ್ತು. ಇದೀಗ 633.00 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ಮಾಸಿಕ ವೇತನ 16,469 ರೂಪಾಯಿ ಆಗಿದೆ. ಇನ್ನು ಈ ಹೊಸ ವೇತನ ಶ್ರೇಣಿಯು ಉದ್ಯೋಗಿಗಳ ಆರ್ಥಿಕ ಸ್ಥಿತಿ ಜೊತೆಗೆ ಅವರ ಜೀವನ ಮಟ್ಟವನ್ನು ಸುಧಾರಿಸಲಿದೆ.

ಇನ್ನು ಈ ವೇತನ ಮತ್ತು ಭತ್ಯೆ ಹೆಚ್ಚಳದಿಂದ ರಾಜ್ಯ ಸರ್ಕಾರದ ಹಣಕಾಸಿನ ಮೇಲೆ ಹೆಚ್ಚು ಪರಿಣಾಮ ಬೀರಲಿದೆ. ಸಚಿವ ಕೈಲಾಶ್ ವಿಜಯವರ್ಗಿಯ ಅವರ ಪ್ರಕಾರ, ವೇತನ ಏರಿಕೆಯಿಂದ ರಾಜ್ಯದ ಬೊಕ್ಕಸದ ಮೇಲೆ ವಾರ್ಷಿಕ 1,500 ಕೋಟಿ ರೂಪಾಯಿಗಳ ಹೆಚ್ಚುವರಿಯಾಗಿ ಹೊರೆ ಬೀಳಲಿದೆ. ಆದರೆ, ಉದ್ಯೋಗಿಗಳ ಯೋಗಕ್ಷೇಮಕ್ಕಾಗಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿರುವುದು ಸ್ವಾಗತಾರ್ಹ ಅಂತಾ ಹೇಳಿದ್ದಾರೆ.

ಮಧ್ಯಪ್ರದೇಶ ಕರ್ಮಚಾರಿ ಮಂಚ್‌ನ ಮುಖ್ಯಸ್ಥ ಅಶೋಕ್ ಪಾಂಡೆ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಈ ವೇತನ ಹೆಚ್ಚಳದ ನಿರ್ಧಾರವು ಸರ್ಕಾರಿ ನೌಕರರು ಮತ್ತು ಕಾರ್ಮಿಕರಿಗೆ ತುಂಬಾ ಉಪಯುಕ್ತವಾಗಲಿದೆ. ಹಣದುಬ್ಬರದ ಸಮಯದಲ್ಲಿ ಇಂತಹ ನಿರ್ಧಾರವು ಉದ್ಯೋಗಿಗಳ ಜೀವನವನ್ನು ಸುಧಾರಿಸಲಿದೆ ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+