7th Pay Commission: 15 ವರ್ಷಗಳ ಬಳಿಕ ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಮತ್ತು ಸಾರಿಗೆ ಭತ್ಯೆಗಳ ಹೆಚ್ಚಳ
7th Pay Commission: ಸರ್ಕಾರವು ಸರ್ಕಾರಿ ನೌಕರರಿಗೆ ಶುಭಸುದ್ದಿಗಳನ್ನು ನೀಡುತ್ತಲೇ ಇರುತ್ತದೆ. ಇದೀಗ ಈ ಸರ್ಕಾರವು ತನ್ನ ಉದ್ಯೋಗಿಗಳಿಗೆ 15 ವರ್ಷಗಳ ಬಳಿಕ ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಭತ್ಯೆ ಮತ್ತು ಸಾರಿಗೆ ಭತ್ಯೆಯಲ್ಲಿ ಏರಿಕೆ ಮಾಡಿದೆ. ಹಾಗಾದ್ರೆ ಎಷ್ಟು ಎನ್ನುವ ಮಾಜಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯದ ಸರ್ಕಾರಿ ಉದ್ಯೋಗಿಗಳಿಗೆ 15 ವರ್ಷಗಳ ನಂತರ ಮಧ್ಯಪ್ರದೇಶ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ರಾಜ್ಯದ ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಭತ್ಯೆ ಮತ್ತು ಸಾರಿಗೆ ಭತ್ಯೆಯಲ್ಲಿ ಏರಿಕೆ ಮಾಡಿದೆ. ಸಿಎಂ ಡಾ. ಮೋಹನ್ ಯಾದವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರಕ್ಕೆ ಒಪ್ಪಿಗೆ ಸೂಚಿಸಲಾಗಿದೆ. ಇದರಿಂದ ರಾಜ್ಯದ ಸರ್ಕಾರಿ ನೌಕರರು ಮತ್ತು ಕಾರ್ಮಿಕರು ಸಂತಸಗೊಂಡಿದ್ದಾರೆ.

7ನೇ ವೇತನ ಆಯೋಗದಡಿ ಮಧ್ಯಪ್ರದೇಶ ಸರ್ಕಾರವು ರಾಜ್ಯದ ಸರ್ಕಾರಿ ಉದ್ಯೋಗಿಗಳ ವೇತನವನ್ನು ಪರಿಷ್ಕರಣೆ ಮಾಡಿದೆ. ಹೊಸ ವೇತನ ಶ್ರೇಣಿಯು ಏಪ್ರಿಲ್ 1, 2025ರಿಂದ ಜಾರಿಗೆ ಬರಲಿದ್ದು, ಇದರಿಂದ ಸರ್ಕಾರಿ ನೌಕರರ ಭರ್ಜರಿ ಶುಭ ಸುದ್ದಿ ಸಿಕ್ಕಂತಾಗಿದೆ.
* ಮೊದಲಿಗೆ ಕೌಶಲ್ಯರಹಿತ ಕೆಲಸಗಾರರ ದೈನಂದಿನ ಸಂಬಳ 368.27 ರೂಪಾಯಿ ಇತ್ತು. ಇದೀಗ ಇದು 466.35 ರೂಪಾಯಿಗೆ ಏರಿಕೆಯಾಗಿದ್ದು, ಮಾಸಿಕ ಸಂಬಳ 12,125 ರೂಪಾಯಿ ಆದಂತಾಗಿದೆ.
* ಮೊದಲಿಗೆ ಅರೆ ಕೌಶಲ್ಯಪೂರ್ಣ ಕೆಲಸಗಾರರ ದಿನದ ಸಂಬಳ 406.58 ರೂಪಾಯಿ ಇತ್ತು. ಇದೀಗ ಇದನ್ನು 505.00 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ಮಾಸಿಕ ವೇತನ 13,121 ರೂಪಾಯಿ ಆದಂತಾಗಿದೆ.
* ಮೊದಲಿಗೆ ಕೌಶಲ್ಯಪೂರ್ಣ ಕೆಲಸಗಾರರಿಗೆ 472.85 ರೂಪಾಯಿ ದಿನದ ವೇತನ ಇತ್ತು. ಇದೀಗ 571.00 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ಮಾಸಿಕ ವೇತನ 14,844 ರೂಪಾಯಿ ಆದಂತಾಗಿದೆ.
* ಮೊದಲಿಗೆ ಹೆಚ್ಚು ಕೌಶಲ್ಯಪೂರ್ಣ ಕೆಲಸಗಾರರಿಗೆ 535.35 ರೂಪಾಯಿ ದೈನಂದಿನ ಸಂಬಳ ಇತ್ತು. ಇದೀಗ 633.00 ರೂಪಾಯಿಗೆ ಏರಿಕೆ ಮಾಡಲಾಗಿದ್ದು, ಮಾಸಿಕ ವೇತನ 16,469 ರೂಪಾಯಿ ಆಗಿದೆ. ಇನ್ನು ಈ ಹೊಸ ವೇತನ ಶ್ರೇಣಿಯು ಉದ್ಯೋಗಿಗಳ ಆರ್ಥಿಕ ಸ್ಥಿತಿ ಜೊತೆಗೆ ಅವರ ಜೀವನ ಮಟ್ಟವನ್ನು ಸುಧಾರಿಸಲಿದೆ.
ಇನ್ನು ಈ ವೇತನ ಮತ್ತು ಭತ್ಯೆ ಹೆಚ್ಚಳದಿಂದ ರಾಜ್ಯ ಸರ್ಕಾರದ ಹಣಕಾಸಿನ ಮೇಲೆ ಹೆಚ್ಚು ಪರಿಣಾಮ ಬೀರಲಿದೆ. ಸಚಿವ ಕೈಲಾಶ್ ವಿಜಯವರ್ಗಿಯ ಅವರ ಪ್ರಕಾರ, ವೇತನ ಏರಿಕೆಯಿಂದ ರಾಜ್ಯದ ಬೊಕ್ಕಸದ ಮೇಲೆ ವಾರ್ಷಿಕ 1,500 ಕೋಟಿ ರೂಪಾಯಿಗಳ ಹೆಚ್ಚುವರಿಯಾಗಿ ಹೊರೆ ಬೀಳಲಿದೆ. ಆದರೆ, ಉದ್ಯೋಗಿಗಳ ಯೋಗಕ್ಷೇಮಕ್ಕಾಗಿ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿರುವುದು ಸ್ವಾಗತಾರ್ಹ ಅಂತಾ ಹೇಳಿದ್ದಾರೆ.
ಮಧ್ಯಪ್ರದೇಶ ಕರ್ಮಚಾರಿ ಮಂಚ್ನ ಮುಖ್ಯಸ್ಥ ಅಶೋಕ್ ಪಾಂಡೆ ಈ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಈ ವೇತನ ಹೆಚ್ಚಳದ ನಿರ್ಧಾರವು ಸರ್ಕಾರಿ ನೌಕರರು ಮತ್ತು ಕಾರ್ಮಿಕರಿಗೆ ತುಂಬಾ ಉಪಯುಕ್ತವಾಗಲಿದೆ. ಹಣದುಬ್ಬರದ ಸಮಯದಲ್ಲಿ ಇಂತಹ ನಿರ್ಧಾರವು ಉದ್ಯೋಗಿಗಳ ಜೀವನವನ್ನು ಸುಧಾರಿಸಲಿದೆ ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications