7th Pay Commission DA: ನೌಕರರಿಗೆ 18 ತಿಂಗಳ ಬಾಕಿ DA ಹಣ ಎಷ್ಟು ಕಂತುಗಳಲ್ಲಿ ಸಿಗಲಿದೆ? ತಿಳಿಯಿರಿ
ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ತುಟ್ಟಿ ಭತ್ಯೆ (DA) ಹೆಚ್ಚಳವನ್ನು ಫೆಬ್ರುವರಿಗೆ ನೀಡುವುದಾಗಿ ತಿಳಿಸಿದ್ದ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಬಾಕಿ ಡಿಎ ಹಣವನ್ನು ಕಂತುಗಳಲ್ಲಿ ನೀಡಲು ನಿರ್ಧರಿಸಿದೆ. ಎಷ್ಟು ಕಂತು ಎಂಬ ಮಾಹಿತಿ ಇಲ್ಲಿದೆ.
ಬೆಂಗಳೂರು, ಜನವರಿ 27: ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ತುಟ್ಟಿ ಭತ್ಯೆ (DA) ಹೆಚ್ಚಳವನ್ನು ಫೆಬ್ರುವರಿಗೆ ನೀಡುವುದಾಗಿ ತಿಳಿಸಿದ್ದ ಸರ್ಕಾರ ಇದೀಗ ಮತ್ತೊಂದು ಸಿಹಿ ಸುದ್ದಿ ನೀಡಿದೆ.
ನೌಕರರಿಗೆ ನೀಡಬೇಕಿದ್ದ 18 ತಿಂಗಳ ತುಟ್ಟಿ ಭತ್ಯೆ ಬಾಕಿ ಉಳಿಸಿಕೊಳ್ಳಲಾಗಿತ್ತು. ಇದೀಗ ಆ ಹಣವನ್ನು ನೌಕರರಿಗೆ ನೀಡುಲು ಮುಂದೆ ಬಂದ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಅನುಮೋದನೆಯ ಪ್ರಕಾರ ಬಾಕಿ ತುಟ್ಟಿಭತ್ಯೆ ಹಣ ಒಟ್ಟು ಸುಮಾರು ಎಂಟು ಕಂತುಗಳಲ್ಲಿ ನೌಕರರ ಕೈ ಸೇರಲಿದೆ.
ಫೆಬ್ರವರಿ 18ರಂದು ಇರುವ ಹೋಲಿ ಹಬ್ಬಕ್ಕೆ ವರ್ಷಕ್ಕೆ ಎರಡು ಭಾರಿ ಹೆಚ್ಚಿಸುವ ತುಟ್ಟಿಭತ್ಯೆ ಹಣವು ನೌಕರರಿಗೆ ನೀಡುವುದಾಗಿ ತಿಳಿಸಿದ್ದರು. ಈ ಬಗ್ಗೆ ಖಷಿ ಪಟ್ಟಿದ್ದ ನೌಕರರು ಬಹಳದಿನಗಳಿಂದ 18 ತಿಂಗಳ ಬಾಕಿ ಹಣವನ್ನು ನೀಡುವಂತೆ ಬೇಡಿಕೆ ಇಟ್ಟಿದ್ದರು. ಇದೀಗ ಆ ಹಣ ವಿತರಣೆ ಬಗ್ಗೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳುವ ಮೂಲಕ ನೌಕರರ ಸಂತಸಕ್ಕೆ ಕಾರಣವಾಗಿದೆ.

ಪ್ರಸಕ್ತ ವರ್ಷ ಕೇಂದ್ರ ನೌಕರರು ತುಟ್ಟಿ ಭತ್ಯೆ (DA) ಮತ್ತು ಪಿಂಚಣಿದಾರರಿಗೆ ಡೀಯರ್ನೆಸ್ ರಿಲೀಫ್ (DR) ಅನ್ನು ಮಾರ್ಚ್ 2023 ರಲ್ಲಿ ಘೋಷಿಸಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಅದರಂತೆ ಸರ್ಕಾರ ನೌಕರರ ಬೇಡಿಕೆ ಈಡೇರಿಸಲು ಸಜ್ಜಾಗಿದೆ.
ಮುಂದಿನ ಮಾರ್ಚ್ಗೆ ಡಿಎ ಏರಿಕೆ
ಕೇಂದ್ರ ಸರ್ಕಾರ ಸುಮಾರು ಒಂದು ಕೋಟಿ ಕೇಂದ್ರದ ನೌಕರರಿಗೆ ತುಟ್ಟಿ ಭತ್ಯೆ ಹಾಗೂ ಪಿಂಚಣಿದಾರರಿಗೆ ಡಿಆರ್ ಪರಿಹಾರ ಹಣವನ್ನು ಮುಂದಿನ ಮಾರ್ಚ್ ತಿಂಗಳಲ್ಲಿ ಹೆಚ್ಚಿಸಿ ಘೋಷಣೆ ಮಾಡುವ ನಿರೀಕ್ಷೆ ಇದೆ. ಈ ಮಧ್ಯೆ ಹಲವು ರಾಜ್ಯಗಳು ತಮ್ಮ ನೌಕರರು ಹಾಗೂ ಪಿಂಚಣಿದಾರರಿಗೆ ತುಟ್ಟಿ ಭತ್ಯೆ (ಡಿಎ) ಮತ್ತು ಡಿಆರ್ ಹಣ ಘೋಷಿಸಿವೆ. ಇತ್ತೀಚೆಗಷ್ಟೇ ಬಾಕಿ ಉಳಿದಿದ್ದ ರಾಜ್ಯ ತೆಲಂಗಾಣವು ಡಿಎ, ಡಿಆರ್ ಘೋಷಣೆ ಮಾಡಿದೆ.
ಕಳೆದ ನಾಲ್ಕು ತಿಂಗಳ ಸೇವೆಯಲ್ಲಿ ಸಾಮಾನ್ಯ ಭವಿಷ್ಯ ನಿಧಿಗೆ (GPF) ಕೊಡುಗೆ ನೀಡುವುದರಿಂದ ವಿನಾಯಿತಿ ನೀಡಲಾಗುತ್ತದೆ. ಸರ್ಕಾರದ ಈ ನಿರ್ಧಾರದಿಂದ 4.4 ಲಕ್ಷ ನೌಕರರು ಮತ್ತು 2.28 ಲಕ್ಷ ಪಿಂಚಣಿದಾರರಿಗೆ ಉಪಯೋಗವಾಗಲಿದೆ ಎನ್ನಲಾಗಿದೆ.

ಎಷ್ಟು ಹೆಚ್ಚಳ ಮಾಡಲಾಗಿದೆ?
ಕೇಂದ್ರ ಸರ್ಕಾರ ನೌಕರರು ಮತ್ತು ಪಿಂಚಣಿದಾರರ ತುಟ್ಟಿ ಭತ್ಯೆಯನ್ನು ಶೇಕಡಾ 2.73 ರಷ್ಟು ಹೆಚ್ಚಿಸಿದೆ. ಇದಾದ ಬಳಿಕ ಉದ್ಯೋಗಿಗಳ ಡಿಎ ಶೇ. 17.29 ರಿಂದ ಶೇ. 20.2ರಷ್ಟಕ್ಕೆ ಹೆಚ್ಚಾಗಿದೆ. ಈ ಹೆಚ್ಚಳದ ಹಣ ಬಿಡುಗಡೆಯು 2021ರ ಜುಲೈ 1 ರಿಂದ ಜಾರಿಗೆ ತರಲಾಗುತ್ತಿದೆ. ಈ ಹಣ 8 ಕಂತುಗಳಲ್ಲಿ ನೌಕರರ ಜಿಪಿಎಫ್ ಖಾತೆಗೆ ಪಾವತಿಯಾಗಲಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications