7th Pay Commission: ಕೇಂದ್ರ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ ಸಾಧ್ಯತೆ
ನವದೆಹಲಿ, ಮೇ 2: ಕೇಂದ್ರ ಸರ್ಕಾರವು ಸರ್ಕಾರಿ ನೌಕರರಿಗೆ ಸದ್ಯದಲ್ಲೇ ಗುಡ್ ನ್ಯೂಸ್ ನೀಡಲಿದ್ದು, ಎರಡು ಸಂಭಾವ್ಯ ಹೆಚ್ಚಳದೊಂದಿಗೆ ನೌಕರರ ವೇತನ ಹೆಚ್ಚಳ ಮಾಡಲು ಯೋಜಿಸುತ್ತಿದೆ ಎಂದು ವರದಿಗಳು ತಿಳಿಸಿವೆ.
ಮಾಧ್ಯಮ ವರದಿಗಳ ಪ್ರಕಾರ ಉದ್ಯೋಗಿಗಳ ವೇತನವು 95,000 ರೂ.ವರೆಗೂ ಹೆಚ್ಚಳವಾಗಬಹುದು. ಜುಲೈನಲ್ಲಿ ನರೇಂದ್ರ ಮೋದಿ ಸರ್ಕಾರವು ತುಟ್ಟಿಭತ್ಯೆಯನ್ನು (ಡಿಎ) 4 ಪ್ರತಿಶತ ಮತ್ತು ಫಿಟ್ಮೆಂಟ್ ಅಂಶವನ್ನು ಹೆಚ್ಚಿಸಬಹುದು, ಕನಿಷ್ಠ ವೇತನ ಹೆಚ್ಚಳದ ದೀರ್ಘಕಾಲದ ಬೇಡಿಕೆಯನ್ನು ಪೂರೈಸುತ್ತದೆ ಎನ್ನಲಾಗುತ್ತಿದೆ.

ಪ್ರಸ್ತುತ ಕೇಂದ್ರ ನೌಕರರ ಮೂಲ ವೇತನ 18 ಸಾವಿರ ರೂ.ಗಳಾಗಿದ್ದು, ಫಿಟ್ಮೆಂಟ್ ಅಂಶದಲ್ಲಿ ತಿದ್ದುಪಡಿ ತಂದ ನಂತರ ಮೂಲ ವೇತನ ತಿಂಗಳಿಗೆ 21 ಸಾವಿರದಿಂದ 26 ಸಾವಿರ ರೂ. ಸಿಗಬಹುದು. ಫಿಟ್ಮೆಂಟ್ ಅಂಶದಲ್ಲಿನ ಹೆಚ್ಚಳವು ಉದ್ಯೋಗಿಗಳಿಗೆ ರೂ 8,000 ವರೆಗಿನ ಮಾಸಿಕ ಪ್ರಯೋಜನವನ್ನು ಒದಗಿಸಬಹುದು. ಸರ್ಕಾರ ಫಿಟ್ಮೆಂಟ್ ಅಂಶವನ್ನು 3.68 ಪಟ್ಟು ಹೆಚ್ಚಿಸಬಹುದು ಎಂದು ಹೇಳಲಾಗುತ್ತಿದೆ.
ಪ್ರಸ್ತುತ ಕೇಂದ್ರ ನೌಕರರಿಗೆ ಶೇ.2.57ರಷ್ಟು ಫಿಟ್ಮೆಂಟ್ ಅಂಶವನ್ನು ಲೆಕ್ಕಹಾಕಿ ವೇತನ ನೀಡಲಾಗುತ್ತಿದ್ದು, ಇದನ್ನು 3.68 ಪಟ್ಟು ಹೆಚ್ಚಿಸಬೇಕು ಎಂಬುದು ನೌಕರರ ಬೇಡಿಕೆಯಾಗಿದೆ. ಫಿಟ್ಮೆಂಟ್ ಅಂಶವನ್ನು 3 ಪಟ್ಟು ಹೆಚ್ಚಿಸಿದರೆ, ನೌಕರರ ಮೂಲ ವೇತನವನ್ನು ತಿಂಗಳಿಗೆ ರೂ.35 ಸಾವಿರಕ್ಕೆ ಹೆಚ್ಚಿಸಬಹುದು. 2016 ರಲ್ಲಿ ಏಳನೇ ವೇತನ ಆಯೋಗವನ್ನು ಜಾರಿಗೊಳಿಸಿದಾಗ ಫಿಟ್ಮೆಂಟ್ ಅಂಶವನ್ನು ಕೊನೆಯದಾಗಿ ಹೆಚ್ಚಿಸಲಾಯಿತು. ಈ ಹಿಂದೆ ನೌಕರರ ಮೂಲ ವೇತನ 6000 ರೂ.ಗಳಷ್ಟಿದ್ದು, ತಿಂಗಳಿಗೆ 18,000 ರೂ. ಈಗ ಮತ್ತೆ ಹೆಚ್ಚಿಸಬೇಕು ಎಂಬುದು ಆಗ್ರಹವಾಗಿದೆ.

ಸಂಭಾವ್ಯ ವೇತನ ಹೆಚ್ಚಳದ ಕುರಿತು ಕೇಂದ್ರ ಸರ್ಕಾರ ಇನ್ನೂ ಅಧಿಕೃತ ಮಾಹಿತಿಯನ್ನು ನೀಡಿಲ್ಲವಾದರೂ, ಮಾಧ್ಯಮ ವರದಿಗಳು ಶೀಘ್ರದಲ್ಲೇ ಪ್ರಮುಖ ಕ್ರಮಗಳನ್ನು ತೆಗೆದುಕೊಳ್ಳಬಹುದೆಂದು ಸೂಚಿಸುತ್ತವೆ. ಸರ್ಕಾರ ಈ ಕ್ರಮ ಕೈಗೊಂಡರೆ ನೌಕರರಿಗೆ ದೊಡ್ಡ ಉತ್ತೇಜನ ದೊರೆಯಲಿದ್ದು, ಅವರ ವೇತನವೂ ಗಣನೀಯವಾಗಿ ಏರಿಕೆಯಾಗಲಿದೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ!












Click it and Unblock the Notifications