7th Pay Commission Update: ಈ ಸರ್ಕಾರಿ ನೌಕರರಿಗೆ ಬಿಗ್ ರಿಲೀಫ್: ಬಾಕಿ ಪಾವತಿ ತೆರವಿಗೆ ನಿರ್ಧಾರ
ನವದೆಹಲಿ, ಏಪ್ರಿಲ್ 10: ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ 7ನೇ ವೇತನ ಆಯೋಗದಡಿ (7th Pay Commission) ತುಟ್ಟಿಭತ್ಯೆ (ಡಿಎ) ಶೇಕಡಾ 4 ರಷ್ಟು ಹೆಚ್ಚಿಸಿದೆ. ಇದರಿಂದ ಹಿಂದಿದ್ದ ಶೇಕಡಾ 46ರಷ್ಟು ತುಟ್ಟಿಭತ್ಯೆ ಪ್ರಮಾಣ ಈಗ ಶೇ.50 ಏರಿಕೆಯಾಗಿದೆ. ಜೊತೆಗೆ ಶೇಕಡಾ 4 ರಷ್ಟು ಪರಿಹಾರ (ಡಿಆರ್) ಸಹ ನೀಡಿದೆ. ಇದೀಗ ಸರ್ಕಾರಿ ನೌಕರರಿಗೆ ಬಿಗ್ ರಿಲೀಫ್ ನೀಡುವ ಬೆಳವಣಿಗೆಯೊಂದು ನಡೆದಿದೆ. ಅದರ ಮಾಹಿತಿಗೆ ಮುಂದೆ ಓದಿ.
ಆದಷ್ಟು ಶೀಘ್ರವೇ 7ನೇ ವೇತನ ಆಯೋಗದ ಬಾಕಿಯನ್ನು ತೆರವುಗೊಳಿಸಲು ತೀರ್ಮಾನಿಸಲಾಗಿದೆ. ಇದರಿಂದ ಕಾಯ ನಿರ್ವಹಿಸಸುತ್ತಿರುವ ಹಾಲಿ ಹಾಗೂ ಮಾಜಿ ಉದ್ಯೋಗಿಗಳಿಗೆ ಬಿಗ್ ರಿಲೀಫ್ ಸಿಗಲಿದೆ. ಇವರಿಗೆಲ್ಲ ನೀಡಬೇಕಾದ ಶಿಫಾರಸುಗಳಿಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗದಿಂದ (7ನೇ CPC) ಪಾವತಿಸದ ಬಾಕಿಗಳನ್ನು ಇತ್ಯರ್ಥಪಡಿಸುವ ಕುರಿತು ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ವಕೀಲರು ಮೂಲಕ ದೆಹಲಿ ಹೈಕೋರ್ಟ್ಗೆ ಮಾಹಿತಿ ಸಲ್ಲಿಸಿದೆ.

ರೂ. 738 ಕೋಟಿ ಪಾವತಿ, ತೆರವಿಗೆ ಬಳಕೆ
ಈ ಮೂಲಕ ಎಂಸಿಡಿ ಹೈಕೋರ್ಟ್ನಲ್ಲಿ ಬಾಕಿ ತೆರವಿನ ಕುರಿತು ತನ್ನ ಬದ್ಧತೆಯನ್ನು ದೃಢಪಡಿಸಿದೆ. ದೆಹಲಿ ರಾಜ್ಯ ಸರ್ಕಾರವು ಬಾಕಿ ಉಳಿಸಿಕೊಂಡ 'ಮೂಲ ತೆರಿಗೆ ನಿಯೋಜನೆ' ಸುಮಾರು 738 ಕೋಟಿ ರೂ. ಹಣವನ್ನು ಕಟ್ಟಲಿದೆ ಎಂದು ಎಸಿಡಿ ವಕೀಲರು ನ್ಯಾಯಪೀಠಕ್ಕೆ ವಿವರಿಸಿದರು. ಈ ಹಣವನ್ನು ಬಾಕಿ ತೆರವುಗೊಳಿಸಲು ಬಳಸಲಾಗುವುದು ಎಂದು ತಿಳಿಸಿದರು.
ಎಂಸಿಡಿ ವಿಸರ್ಜನೆ ತಾಕೀತು
ಕೇಂದ್ರದ ಮಾಜಿ ಉದ್ಯೋಗಿಗಳ ನಿವೃತ್ತಿ ಪ್ರಯೋಜನಗಳನ್ನು ಮುಂದಿನ 12 ವಾರಗಳಲ್ಲಿ ಸರಿಪಡಿಸಲಾಗುವುದು ಎಂದು ವಕೀಲರು ಹೇಳಿದರು. ಇದಕ್ಕೆ ನ್ಯಾಯಪೀಠವು, ವಿಳಂಬ ಪಾವತಿಯ ಕುರಿತು ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಪರಿಸ್ಥಿತಿ ಸುಧಾರಿಸದಿದ್ದರೆ ಇದನ್ನು ವಿಸರ್ಜಿಸಲು ನಿರ್ದೇಶಿಸುವುದಾಗಿ ಹೇಳಿತು.
ಮುಂದಿನ ಹತ್ತು ದಿನಗಳಲ್ಲಿ ಬಾಕಿ ಮೊತ್ತ ಪಾವತಿಗೆ ಸೂಚನೆ ನೀಡಿದೆ. ಈ ಸೂಚನೆಗೆ ನಾಗರಿಕ ಸಂಸ್ಥೆಯಾದ ಎಂಸಿಡಿ ಬದ್ಧವಾಗಿದೆ ಎಂದು ವಕೀಲರು ಹೇಳಿದರು.

ಆದೇಶ ಉಲ್ಲಂಘಿಸಿದರೆ ನ್ಯಾಯಾಂಗ ನಿಂದನೆ ಕೇಸ್
ನ್ಯಾಯಪೀಠವು ಮೇಲಿನ ಈ ಸೂಚನೆ ಜೊತೆಗೆ ನಿರ್ದೇಶನ, ಭರವಸೆಗಳನ್ನು ಉಲ್ಲಂಘಿಸಿದರೆ ಅರ್ಜಿದಾರರು ನಾಗರಿಕ ಸಂಸ್ಥೆ ವಿರುದ್ಧ (ಎಂಸಿಡಿ) ನ್ಯಾಯಾಂಗ ನಿಂದನೆ ಮೊಕದ್ದಮೆ ಹೂಡಲು ಅವಕಾಶ ಇದೆ. ಇದಕ್ಕೆ ಅವರು ಸ್ವಾತಂತ್ರ್ಯ ಹೊಂದಿರುತ್ತಾರೆ ಎಂದು ಹೇಳಿತು.
ಬಾಕಿ ಕೇಳುವುದು ಉದ್ಯೋಗಿಗಳ ಹಕ್ಕು. ಎಂಸಿಡಿ ಏನು ದಾನ ಮಾಡುತ್ತಿಲ್ಲ ಎಂದು ಎಸಿಡಿ ಹಾಲಿ ಹಾಗೂ ಮಾಜಿ ನೌಕರರು ಆದ ಅರ್ಜಿ ದಾರರಿಗೆ ನ್ಯಾಯಾಲಯ ತಿಳಿಸಿದೆ. ದೆಹಲಿ ಸರ್ಕಾರದ ವಕೀಲರು ನ್ಯಾಯಾಲಯಕ್ಕೆ ಸಹಮತ ವ್ಯಕ್ತಪಡಿಸಿದರು. ಜೊತೆಗೆ ಇದರ ಪಾವತಿಗೆ ಏಪ್ರಿಲ್ 25 ರವರೆಗೆ ಅವಕಾಶ ನೀಡುವಂತೆ ಅವರು ಮನವಿ ಮಾಡಿಕೊಂಡರು.
ಆರ್ಥಿಕ ಶಿಸ್ತು ಕಾಪಾಡಿಕೊಳ್ಳದ್ದಕ್ಕೆ ಕೋರ್ಟ್ ಬೇಸರ
ಕಳೆದ ತಿಂಗಳು ಮಾರ್ಚ್ 1 ರಂದು 7ನೇ ವೇತನ ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸುವಲ್ಲಿ ಎಂಸಿಡಿ ವಿಫಲವಾದ ಹಿನ್ನೆಲೆಯಲ್ಲಿ ಪ್ರಕರಣ ಮತ್ತಷ್ಟು ಚರ್ಚೆಗೆ ಬಂತು. ಆರ್ಥಿಕವಾಗಿ ಶಿಸ್ತು ಕಾಪಾಡಿಕೊಳ್ಳದಿದ್ದಲ್ಲಿ ವಿಸರ್ಜನೆಗೊಳಿಸುವುದಾಗಿ ಕೋರ್ಟ್ ಎಚ್ಚರಿಸಿದೆ.
ನಗರದ ಅಭಿವೃದ್ಧಿಯ ಸಂಸ್ಥೆಯು ಉತ್ತಮ ವ್ಯವಸ್ಥೆ ಹೊಂದಬೇಕು. ನಿಮ್ಮಲ್ಲಿ ಆರ್ಥಿಕ ಸದೃಢತೆ ಇಲ್ಲದಾದರೆ ನೀವು ಹೇಗೆ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತೀರಿ ಎಂದು ನ್ಯಾಯಾಲಯ ಪ್ರಶ್ನೆ ಮಾಡಿತು. ಏಳು ವರ್ಷಗಳಿಂದ ಬಾಕಿ ಇರುವುದನ್ನು ಗಮನಿಸಿ ಈ ನಾಗರಿಕ ಸಂಸ್ಥೆ ಬಡವರನ್ನು ಸುಲಿಗೆ ಮಾಡಲು ಸಾಧ್ಯವಿಲ್ಲ ಎಂದು ಖಾರವಾಗಿ ನುಡಿಯಿತು.
ಕೇಂದ್ರ ಸರ್ಕಾರವು ಪ್ರತಿ ಆರು ತಿಂಗಳಿಗೊಮ್ಮೆ ತನ್ನ ನೌಕರರ ತುಟ್ಟಿಭತ್ಯೆಯನ್ನು ಏರಿಕೆ ಮಾಡುತ್ತಿದೆ. ಜನವರಿ ಮತ್ತು ಜುಲೈನಲ್ಲಿ ಹೆಚ್ಚಿಸುತ್ತದೆ. ಮಾರ್ಚ್ಗೆ ಜನವರಿಂದ ಆಗಬೇಕಾದ ಹೆಚ್ಚಳವನ್ನು ಘೋಷಿಸುತ್ತದೆ. ಈ ಬಾರಿ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ 4% ರಷ್ಟು ಹೆಚ್ಚಳ ಮಾಡಲು ಸಂಪುಟ ಒಪ್ಪಿಗೆ ಸೂಚಿಸಿತ್ತು. ಇದರೊಂದಿಗೆ ಮನೆ ಬಾಡಿಗೆ ಭತ್ಯೆ, ಮಕ್ಕಳ ಶಿಕ್ಷಣ ಭತ್ಯೆ, ಪ್ರಯಾಣ ಭತ್ಯೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications