55 ಲಕ್ಷ ನೌಕರರು ಮತ್ತು ಪಿಂಚಣಿದಾರರಿಗೆ ಸಂಬಳ ಏರಿಕೆ
ನವದೆಹಲಿ, ಮೇ 04 : ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರು ನಿರೀಕ್ಷಿಸುತ್ತಿರುವ 7ನೇ ವೇತನ ಆಯೋಗದ ಶಿಫಾರಸುಗಳಿಗೆ ಬುಧವಾರ ಕೇಂದ್ರ ಸಚಿವ ಸಂಪುಟ ಸಮ್ಮತಿ ಸೂಚಿಸಿದೆ.
ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರ ವೇತನ, ಪಿಂಚಣಿಯನ್ನು ಹೆಚ್ಚಳವಾಗುವಂತೆ ಶಿಫಾರಸನ್ನು ಅಂಗೀಕರಿಸಲಾಗಿದೆ. ಇದರಿಂದಾಗಿ 55 ಲಕ್ಷ ಕೇಂದ್ರ ನೌಕರರು ಇದರ ಲಾಭ ಪಡೆದುಕೊಳ್ಳಲಿದ್ದಾರೆ. ಆದರೆ ಕೇಂದ್ರದ ಬೊಕ್ಕಸಕ್ಕೆ ವಾರ್ಷಿಕ 1,76,071 ಕೋಟಿ ರೂಪಾಯಿ ಹೊರೆ ಬೀಳಲಿದೆ.[7ನೇ ವೇತನ ಆಯೋಗ ಏನು? ಏತ್ತ? ಯಾಕೆ? ಲೆಕ್ಕಾಚಾರ ಹೇಗೆ?]
ನ್ಯಾಯಮೂರ್ತಿ ಎ.ಕೆ. ಮಾಥುರ್ ನೇತೃತ್ವದ 7 ನೇ ವೇತನ ಆಯೋಗವು 900 ಪುಟಗಳ ವರದಿಯನ್ನು 2015 ರ ನವೆಂಬರ್ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಗೆ ಸಲ್ಲಿಸಿತ್ತು.

ಜನವರಿ 1, 2016ರಿಂದ ಅನ್ವಯ
ಕೇಂದ್ರ ಸಂಪುಟ ಸಭೆಯು ಬುಧವಾರ ಸಮ್ಮತಿಸಿದ 7ನೇ ವೇತನ ಆಯೋಗ ಸುಮಾರು 55 ಲಕ್ಷ ನೌಕರರಿಗೆ ಜನವರಿ 1, 2016ರಿಂದ ಅನ್ವಯವಾಗಲಿದೆ. ಈ ಏಳನೇ ವೇತನ ಆಯೋಗದಿಂದ ರಕ್ಷಣ ಇಲಾಖೆಗೆ ಹೆಚ್ಚಿನ ಅನುಕೂಲರವಾಗಲಿದೆ.

ಸರ್ಕಾರದ ಬೊಕ್ಕಸಕ್ಕೆ ಎಷ್ಟು ಹೊರೆ?
7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡಿರುವುದರಿಂದ 2016-17ರ ಆರ್ಥಿಕ ವರ್ಷದಲ್ಲಿ ಕೇಂದ್ರದ ಬೊಕ್ಕಸಕ್ಕೆ ವಾರ್ಷಿಕ 1,76,071 ಕೋಟಿ ರೂಪಾಯಿ ಹೊರೆ ಬೀಳಲಿದೆ.

7ನೇ ವೇತನ ಆಯೋಗದ ಶಿಫಾರಸುಗಳೇನು?
ಸುಮಾರು 18 ಹಂತದ ವೇತನ ಮ್ಯಾಟ್ರಿಕ್ ಹೊಂದಿರುವ ಈ ಶಿಫಾರಸ್ಸಿನ ಮೂಲಕ ಹಳೆ ಪಿಂಚಣಿದಾರರು ಹಾಗೂ ಈಗಷ್ಟೇ ನಿವೃತ್ತಿಯಾದ ಪಿಂಚಣಿದಾರರ ನಡುವಿನ ವೇತನ ತಾರತಮ್ಯವನ್ನು ಸರಿಪಡಿಸಲಾಗಿದೆ. ಒಟ್ಟಾರೆ ಶೇ 23.55ರಷ್ಟು ವೇತನ ಏರಿಕೆ ಸಿಕ್ಕಿದೆ.ವೇತನ ಶೇ 16, ಭತ್ಯೆ ಶೇ 63ರಷ್ಟುಹಾಗೂ ಪಿಂಚಣಿ ಸುಮಾರು ಶೇ 24ರಷ್ಟು ಏರಿಕೆಯಾಗಲಿದೆ.

ಪಿ ಕೆ ಸಿನ್ಹಾ ನೇತೃತ್ವ
ವರದಿಯ ಪರಿಶೀಲನೆಗೆ ಸಂಪುಟ ಕಾರ್ಯದರ್ಶಿ ಪಿ ಕೆ ಸಿನ್ಹಾ ನೇತೃತ್ವದಲ್ಲಿ ಉನ್ನತಾಧಿಕಾರ ಸಲಹಾ ಸಮಿತಿ ರಚಿಸಲಾಗಿತ್ತು. ಸಿನ್ಹಾರ ವೇತನ ಸಲಹಾ ಸಮಿತಿ ಸಲ್ಲಿಸಿದ ವರದಿ ಆಧರಿಸಿ 7ನೇ ವೇತನ ಆಯೋಗದ ಶಿಫಾರಸು ಜಾರಿಗೊಳಿಸುವ ಕುರಿತು ಬುಧವಾರ ನಡೆದ ಸಂಪುಟ ಸಭೆಯಲ್ಲಿ ಚರ್ಚಿಸಿ ಬಳಿಕ ಒಪ್ಪಿಗೆ ನೀಡಿತು.

ರಕ್ಷಣಾ ಇಲಾಖೆಗೆ ಅನುಕೂಲ
ಕೇಂದ್ರ ಸಚಿವ ಸಂಪುಟದ 7ನೇ ವೇತನ ಆಯೋಗದ ಶಿಫಾರಸನ್ನು ಅಂಗೀಕರಿಸಿದ್ದರಿಂದ ಭಾರತೀಯ ಸೇನೆಗೆ ಹೆಚ್ಚಿನ ಅನುಕೂಲವಾಗಿದೆ. ಆರ್ಮಿಯವರಿಗೆ ಪ್ರಸ್ತುತ 21,000 ಸಾವಿರ ವೇತನ ಸಿಗುತ್ತಿತ್ತು. ಇನ್ಮುಂದೆ ಅದು 31,500 ರೂಪಾಯಿಗೆ ಏರಿಕೆಯಾಗಲಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications