ಬಿಎಸ್ಎನ್ಎಲ್ ಸಿಬ್ಬಂದಿಗೆ ಸಿಹಿಸುದ್ದಿ ನೀಡಲಿದೆ ಮೋದಿ ಸರ್ಕಾರ್!
ನವದೆಹಲಿ, ಡಿಸೆಂಬರ್ 18: ಸರ್ಕಾರಿ ಸ್ವಾಮ್ಯದ ಭಾರತೀಯ ಸಂಚಾರ ನಿಗಮ ನಿಯಮಿತ(ಬಿಎಸ್ಎನ್ಎಲ್) ನ ಸಿಬ್ಬಂದಿಗೆ ಮೋದಿ ಸರ್ಕಾರವು ಸಿಹಿ ಸುದ್ದಿ ನೀಡಲಿದೆ. ಬಿಎಸ್ಎನ್ಎಲ್ ನೌಕರರ ಬಹುಕಾಲ ಬೇಡಿಕೆ ಈಡೇರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಏಳನೇ ವೇತನ ಆಯೋಗದಂತೆ ವೇತನ ಹಾಗೂ ಪಿಂಚಣಿ ಪರಿಷ್ಕರಿಸಲು ನಿರ್ಧರಿಸಲಾಗಿದೆ. ಈ ಕುರಿತಂತೆ, ಡಿಸೆಂಬರ್ 13ರಂದು ಹಲವು ನಿರ್ಧಾರ ಪ್ರಕಟಿಸಲಾಗಿದೆ.
ಮೂಲ ವೇತನ ಆಧಾರದಲ್ಲಿ ಪಿಂಚಣಿ ಪಾಲು ಪಾವತಿ, ಪಿಂಚಣಿ ಪರಿಷ್ಕರಣೆ, ಬಾಕಿ ಉಳಿದ ಪಾವತಿಗೆ ಕ್ರಮ, ವೇತನ ಪರಿಷ್ಕರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಇದರೊಟ್ಟಿಗೆ 4ಜಿ ಸ್ಪೆಕ್ರ್ಟಮ್ ನೀಡಿಕೆ ಬಗ್ಗೆ ನಿರ್ಧರಿಸಲಾಗಿದೆ ಎಂದು ಬಿಎಸ್ಎನ್ಎಲ್ ಯೂನಿಯನ್ ಹೇಳಿದೆ.

ಸಂಪೂರ್ಣ ವೇತನ ಪರಿಷ್ಕರಣೆ ಹಾಗೂ ಶೇ 15ರ ಫಿಟ್ಮೆಂಟ್ ನಂತೆ ಭತ್ಯೆ ನೀಡುವಂತೆ ಬಿಎಸ್ಎನ್ಎಲ್ ಸಿಬ್ಬಂದಿ ಬೇಡಿಕೆ ಒಡ್ಡಿದ್ದಾರೆ. 4 ಜಿ ತರಂಗಗುಚ್ಛಗಳನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗೆ ನೀಡುವಂತೆ ಕೂಡಾ ಕೋರಲಾಗಿದೆ. ಈ ಮೂಲಕ ಟೆಲಿಕಾಂ ಕ್ಷೇತ್ರದಲ್ಲಿ ಉಂಟಾಗಿರುವ ಪೈಪೋಟಿಗೆ ಬಿಎಸ್ಎನ್ಎಲ್ ತಕ್ಕ ಉತ್ತರ ನೀಡಲು ಸಜ್ಜಾಗುತ್ತಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications