ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ
ನವದೆಹಲಿ, ಜುಲೈ 14: ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಕುರಿತಂತೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಸರ್ಕಾರಿ ನೌಕರರಿಗೆ ಶೇ 4ರಷ್ಟು ಡಿಎ ಹೆಚ್ಚಳಕ್ಕೆ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಲಾಗಿದ್ದು, ಸದ್ಯದ ಮಾಹಿತಿಯಂತೆ ಡಿಎ ಶೇ 17ರಿಂದ ಶೇ 28ಕ್ಕೇರಿಕೆಯಾಗಿದೆ.
ಜುಲೈ 1ರಿಂದಲೇ ಅನ್ವಯವಾಗುವಂತೆ ಡಿಎ ಲಭಿಸಲಿದೆ. ಈ ಕುರಿತಂತೆ ಅಧಿಕೃತ ಆದೇಶ ಶೀಘ್ರದಲ್ಲೇ ಪ್ರಕಟವಾಗಲಿದೆ. ಕಳೆದ ಒಂದೂವರೆ ವರ್ಷಗಳಿಂದ ಡಿಎ ಹೆಚ್ಚಳ ಮಾಡಲಾಗಿಲ್ಲ.
ಜನವರಿ 1 (4%), ಜುಲೈ 1 2020(3%) ಹಾಗೂ ಜನವರಿ 1, 2021 (4%) ಗೆ ಮೂರು ಬಾರಿ ಏರಿಕೆಯಾಗಿ ಶೇ 25ಕ್ಕೇರಿದೆ. ಸೆಪ್ಟೆಂಬರ್ 1, 2021ಕ್ಕೆ ಪರಿಷ್ಕರಣೆಗೊಳ್ಳಲಿದೆ. ಆದರೆ, 18 ತಿಂಗಳ ಬಾಕಿ ಮೊತ್ತ ಸಿಗುವುದಿಲ್ಲ.

ಡಿಎ ಹೆಚ್ಚಳ ಘೋಷಣೆ ಮಾಡಿದರೆ, ಕೇಂದ್ರ ಬೊಕ್ಕಸಕ್ಕೆ 12,150 ಕೋಟಿ ರು ಹೆಚ್ಚುವರಿ ಹೊರೆ ಬೀಳಲಿದೆ, ಕಳೆದ ಆರ್ಥಿಕ ವರ್ಷ 2020-21ರಲ್ಲಿ 14,595 ಕೋಟಿ ರು ನಷ್ಟಿತ್ತು. ಡಿಎ ಹೆಚ್ಚಳದಿಂದಾಗಿ 48.34 ಲಕ್ಷ ಕೇಂದ್ರ ಸರ್ಕಾರಿ ನೌಕರರು ಹಾಗೂ 65.26 ಲಕ್ಷ ಪಿಂಚಣಿದಾರರಿಗೆ ನೆರವು ಲಭಿಸಲಿದೆ.
ವೇತನ ಸಂಹಿತೆಯ ಕರಡು ಪ್ರತಿಯಂತೆ ಉದ್ಯೋಗಿಗಳು ದಿನಕ್ಕೆ 9 ಗಂಟೆಗಳ ಕಾಲ ಕೆಲಸ ಮಾಡಬೇಕಾಗುತ್ತದೆ. ವೇತನವನ್ನು ನಿರ್ಧರಿಸಲು ಮೂರು ಭೌಗೋಳಿಕ ವರ್ಗೀಕರಣಗಳನ್ನು ಸೂಚಿಸಲಾಗಿತ್ತು. ಗೃಹಭತ್ಯೆಯನ್ನು ನಗರಕ್ಕೆ ಅನುಗುಣವಾಗಿ ವಿಂಗಡಿಸುವುದರ ಬಗ್ಗೆ ಇನ್ನೂ ಯಾವುದೇ ಸೂಚನೆ ಇಲ್ಲಿ ತನಕ ಬಂದಿಲ್ಲ. ರೈಲ್ವೆ ಇಲಾಖೆಯಲ್ಲಿ ಮಾತ್ರ ಎರಡು ಪಾಳಿಯಲ್ಲಿ ಕೆಲಸ ಮಾಡಲು ಆದೇಶ ನೀಡಲಾಗಿದೆ.
ಕೋವಿಡ್ -19 ಸಾಂಕ್ರಾಮಿಕದಿಂದಾಗಿ ಉದ್ಭವಿಸಿದ ಅಸಾಧಾರಣ ಪರಿಸ್ಥಿತಿಯಿಂದಾಗಿ ಕೇಂದ್ರ ಸರ್ಕಾರಿ ನೌಕರರಿಗೆ ಮೂರು ಹೆಚ್ಚುವರಿ ಕಂತುಗಳ ತುಟ್ಟಿ ಭತ್ಯೆ [ಡಿಎ] ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರವನ್ನು [ಡಿಆರ್] 01.01.2020, 01.07.2020 ಮತ್ತು 01.01.2021, ಸ್ಥಗಿತಗೊಳಿಸಲಾಗಿತ್ತು.
''ಇದೀಗ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಹಾಗೂ ಪಿಂಚಣಿದಾರರಿಗೆ ತುಟ್ಟಿ ಪರಿಹಾರ 01.07,2021 ರಿಂದ ಶೇ 28 ಕ್ಕೆ ಹೆಚ್ಚಳವಾಗಲಿದೆ. ಇದು ಪ್ರಸ್ತುತ ಇರುವ ಶೇ 11 ರಷ್ಟು ಮೂಲ ದರಕ್ಕಿಂತ ವೇತನ/ ಪಿಂಚಣಿಯ ಶೇ 17 ರಷ್ಟು ಹೆಚ್ಚಳವಾಗಲಿದೆ. 01.01.2020, 01.07.2020 ಮತ್ತು 01.01.2021 ರಂದು ಹೆಚ್ಚುವರಿ ಕಂತುಗಳಲ್ಲಿ ಇದು ದೊರೆಯಲಿದೆ. 01.01.2020 ರಿಂದ 30.06.2021 ರ ಅವಧಿಗೆ ತುಟ್ಟಿ ಭತ್ಯೆ / ಪರಿಹಾರ ದರ ಶೇ 17 ರಷ್ಟಿದೆ, '' ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications