ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಉತ್ತರ ಪ್ರದೇಶದಲ್ಲಿ ಹಳಿ ತಪ್ಪಿದ ಎಕ್ಸ್ ಪ್ರೆಸ್ ರೈಲು
ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಆದರೆ, 10 ಮಂದಿಗೆ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರಗೆ ಸೇರಿಸಲಾಗಿದೆ.
ಬರೇಲಿ (ಉತ್ತರ ಪ್ರದೇಶ), ಏಪ್ರಿಲ್ 15: ಮೀರತ್ ಹಾಗೂ ಲಖ್ನೋ ನಡುವೆ ಸಂಚರಿಸುವ ರಾಜ್ಯ ರಾಣಿ ಎಕ್ಸ್ ಪ್ರೆಸ್ ರೈಲಿನ 8 ಬೋಗಿಗಳು ಉತ್ತರ ಪ್ರದೇಶದ ರಾಂಪುರದಲ್ಲಿ ಬೆಳಗ್ಗೆ 8: 15ರ ಸುಮಾರಿಗೆ ಹಳಿ ತಪ್ಪಿವೆ.
ಈವರೆಗೆ ಬಂದಿರುವ ಮಾಹಿತಿಗಳ ಪ್ರಕಾರ, ಈ ಬೋಗಿಗಳಲ್ಲಿದ್ದ ಪ್ರಯಾಣಿಕರಲ್ಲಿ 10 ಮಂದಿಗೆ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರಗೆ ಸೇರಿಸಲಾಗಿದೆ. ಈ ರೈಲು ಅಪಘಾತದಿಂದಾಗಿ, ಆ ಮಾರ್ಗದ ರೈಲು ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ.
ಘಟನೆ ಬಗ್ಗೆ ಮಾಹಿತಿ ಪಡೆದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಗಂಭೀರವಾಗಿ ಗಾಯಗೊಂಡಿರುವ ಕುಟುಂಬಗಳಿಗೆ ತಲಾ 50 ಸಾವಿರ ರು. ಪರಿಹಾರ ಘೋಷಿಸಿದ್ದಾರೆ. ಸಾಧಾರಣವಾಗಿ ಗಾಯಗೊಂ 25 ಸಾವಿರ ರು. ಪರಿಹಾರ ಘೋಷಿಸಿದ್ದಾರೆ.
Comments
English summary
Eight coaches of Lucknow-bound Meerut-Lucknow Rajya Rani Express derailed near Rampur in Uttar Pradesh at 8.15am on Saturday.
Story first published: Saturday, April 15, 2017, 12:28 [IST]