Tamil Nadu: ತಮಿಳುನಾಡಿನ ಕೃಷ್ಣಗಿರಿ ಪಟಾಕಿ ಗೋದಾಮಿನಲ್ಲಿ ಭೀಕರ ಸ್ಫೋಟ- 8 ಮಂದಿ ಸಾವು, ಹಲವರಿಗೆ ಗಾಯ
ಕೃಷ್ಣಗಿರಿ, ಜುಲೈ 29: ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ಪಟಾಕಿ ಗೋದಾಮಿನಲ್ಲಿ ಸೋಮವಾರ ಬೆಳಗ್ಗೆ ಭೀಕರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಹದಿಮೂರು ಜನರು ಗಾಯಗೊಂಡಿರುವುದು ದೃಢಪಟ್ಟಿದೆ.
ಅಗ್ನಿಶಾಮಕ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಂದಾಯ ಇಲಾಖೆಯ ಮೂಲಗಳ ಪ್ರಕಾರ, ಸ್ಫೋಟಗೊಂಡಿರುವ ಪಟಾಕಿ ಗೋದಾಮು ಅದೇ ಪ್ರದೇಶದಲ್ಲಿ ವಾಸಿಸುತ್ತಿದ್ದ 46 ವರ್ಷದ ರವಿ ಎಂಬುವವರಿಗೆ ಸೇರಿದೆ. ಪಟಾಕಿ ತಯಾರಿಕೆಯಲ್ಲಿ ಬಳಸಲಾಗುವ ಬಾಷ್ಪಶೀಲ ರಾಸಾಯನಿಕಗಳನ್ನು ಈ ಗೋದಾಮಿನಲ್ಲಿ ಸಂಗ್ರಹಿಸಲಾಗಿತ್ತು.
ಗೋದಾಮಿನಲ್ಲಿ ನಡೆದಿರುವ ಸ್ಫೋಟಕ್ಕೆ ಕಾರಣವೇನು ಎಂಬುದು ಇನ್ನೂ ತಿಳಿದಿಲ್ಲ.
ಮೃತರನ್ನು ರವಿ (46), ರುತೀಶ್ (21), ರಿತಿಗಾ (19), ಇಬ್ರಾಹಿಂ ಕೈಯುಲ್ಲಾ (21) ಮತ್ತು ಇಮ್ರಾನ್ (18) ಎಂದು ಗುರುತಿಸಲಾಗಿದೆ. ಇನ್ನೂ ಮೂವರ ಗುರುತು ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಮೂಲಗಳು, ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳ ಸಿಬ್ಬಂದಿ ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಥಳಕ್ಕೆ ಆಗಮಿಸಿ ಪರಿಹಾರ ಕ್ರಮಗಳನ್ನು ಆರಂಭಿಸಿದ್ದಾರೆ. ಬೆಂಕಿ ನಂದಿಸಲು ನಾಲ್ಕು ಅಗ್ನಿಶಾಮಕ ವಾಹನಗಳನ್ನು ತರಲಾಯಿತು ಎಂದು ಹೇಳಿವೆ.
'ಸ್ಫೋಟವು ತೀವ್ರ ಸ್ವರೂಪದ್ದಾಗಿದೆ. ನಾವು ಅವಶೇಷಗಳನ್ನು ತೆರವುಗೊಳಿಸಲು 5 ಮೂವರ್ಗಳನ್ನು ಬಳಸಬೇಕಾಗಿ ಬಂದಿತು. ಇದುವರೆಗೆ 13 ಜನರನ್ನು ಚಿಕಿತ್ಸೆಗಾಗಿ ಕೃಷ್ಣಗಿರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಮುಂದಿನ ಕ್ರಮ ಕೈಗೊಳ್ಳಲಾಗುವುದು. ವಿವರಗಳನ್ನು ನಂತರ ಬಹಿರಂಗಪಡಿಸಲಾಗುವುದು' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಬಗ್ಗೆ ಸೂಚನೆ ಪಡೆದ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮುಖ್ಯಮಂತ್ರಿಗಳು ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದರು. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜನರಿಗೆ 1 ಲಕ್ಷ ರೂಪಾಯಿ ನೆರವು ನೀಡಲಾಗುವುದು ಎಂದು ಹೇಳಿದರು. ಸಣ್ಣಪುಟ್ಟ ಗಾಯಗಳಾದವರಿಗೆ ತಲಾ 50 ಸಾವಿರ ರೂ.ಗಳ ನೆರವು ನೀಡಲಾಗುವುದು ಎಂದಿದ್ದಾರೆ.
-
ಇಂದು ಸಂಜೆ 4 ಗಂಟೆಗೆ 5 ರಾಜ್ಯಗಳ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಚುನಾವಣಾ ಆಯೋಗ ಸಜ್ಜು -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Tamil Nadu Assembly Election: ತಮಿಳುನಾಡು ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 23ಕ್ಕೆ ಮತದಾನ, ಬಲಾಬಲ ಹೇಗಿದೆ? -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು












Click it and Unblock the Notifications