ಕೇರಳದಲ್ಲಿ ಮುಂಗಾರು ಮಳೆ ಅಬ್ಬರಕ್ಕೆ ಭೂ ಕುಸಿತ: 8 ಸಾವು
ಕೋಯಿಕ್ಕೋಡ್, ಜೂನ್ 15: ಕೇರಳದ ಕಟ್ಟಿಪರ ಎಂಬಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಎಂಟು ಮಂದಿ ಸಾವಿಗೀಡಾಗಿದ್ದಾರೆ.
ಇನ್ನೂ ಆರು ಮಂದಿ ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.
ಕೋಯಿಕ್ಕೋಡ್ ಜಿಲ್ಲೆಯ ಕರಿಂಚೊಲಾ, ಪುಳ್ಳರನ್ಪರ ಮತ್ತು ಚಮಾಲ್ ಪ್ರದೇಶಗಳಲ್ಲಿಯೂ ಭೂ ಕುಸಿತ ಸಂಭವಿಸಿರುವ ಬಗ್ಗೆ ವರದಿಯಾಗಿದೆ.

ನದಿಗಳಲ್ಲಿ ನೀರು ಅಪಾಯ ಮಟ್ಟವನ್ನು ಉಕ್ಕಿ ಹರಿಯುತ್ತಿರುವುದರ ಪರಿಣಾಮ ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಗಳಲ್ಲಿನ ಆಶ್ರಯ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.
ಮುಂಗಾರು ಆರಂಭವಾದಾಗಿನಿಂದಲೂ ಕೇರಳದ ಅನೇಕ ಭಾಗಗಳಲ್ಲಿ ವಿಪರೀತ ಗಾಳಿ ಮಳೆಯಾಗುತ್ತಿದ್ದು, ಭಾರಿ ಪ್ರಮಾಣದ ಅನಾಹುತಗಳನ್ನು ಸೃಷ್ಟಿಸಿದೆ.
ರಾಜ್ಯದ ವಿವಿಧಡೆ ಮಳೆ ಅಬ್ಬರದಿಂದ ಉಂಟಾದ ಅವಘಡಗಳಲ್ಲಿ ಕಳೆದ ವಾರ 13 ಮಂದಿ ಬಲಿಯಾಗಿದ್ದರು. ಇಡುಕ್ಕಿ ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ಮಳೆಯ ತೀವ್ರತೆಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು












Click it and Unblock the Notifications