ಜೈಲಿನಿಂದ ಪರಾರಿಯಾಗಿದ್ದ ಸಿಮಿ ಉಗ್ರರು ಎನ್ ಕೌಂಟರಿಗೆ ಬಲಿ
ಭೋಪಾಲ್, ಅಕ್ಟೋಬರ್ 31: ಇಲ್ಲಿನ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಎಂಟು ಮಂದಿ ವಿಚಾರಣಾಧೀನ ಕೈದಿಗಳು ಸೋಮವಾರ ಎನ್ ಕೌಂಟರಿಗೆ ಬಲಿಯಾಗಿದ್ದಾರೆ. ಭೋಪಾಲ್ ಹೊರ ವಲಯದ ಇಂತಕೇಡಿ ಗ್ರಾಮದ ಬಳಿ ಎಲ್ಲರನ್ನು ಹೊಡೆದುರಳಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮೃತರನ್ನು ಶೇಖ್ ಮುಜೀಬ್, ಖಾಲೀದ್, ಅಖ್ವೀಲ್, ಮಜೀದ್, ಝಾಕೀರ್ ಹುಸೇನ್, ಮೊಹಮ್ಮದ್ ಸಾಲಿಕ್, ಶೇಖ್ ಮೊಹಮ್ಮದ್ ಹಾಗೂ ಅಮ್ಜದ್ ಎಂದು ಗುರಿಸಲಾಗಿದೆ. ಈ ಎಲ್ಲಾ ಕೈದಿಗಳು ನಿಷೇಧಿತ ಸ್ಟುಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ)ದ ಎಂಟು ಸದಸ್ಯರು ಎಂದು ತಿಳಿದು ಬಂದಿದೆ. ಪರಾರಿಯಾಗುವ ವೇಳೆ ಜೈಲಿನ ಸೆಕ್ಯುರಿಟಿ ಗಾರ್ಡ್ ಹತ್ಯೆ ಮಾಡಿದ್ದರು.[ಜೈಲಿನಿಂದ ನಿಷೇಧಿತ ಸಿಮಿ ಸಂಘಟನೆಯ ಸದಸ್ಯರು ಎಸ್ಕೇಪ್]
ಮಧ್ಯಪ್ರದೇಶ ರಾಜ್ಯದಲ್ಲಿ ಈ ರೀತಿ ಘಟನೆ ನಡೆದಿದ್ದು ಇದೇ ಮೊದಲಲ್ಲ. ಈ ಹಿಂದೆ ಕೂಡಾ ಭೋಪಾಲ್ ಕೇಂದ್ರ ಕಾರಾಗೃಹದಿಂದಲೇ ವಿಚಾರಣಾಧೀನ ಕೈದಿಗಳಾಗಿದ್ದ ಸಿಮಿ ಸಂಘಟನೆಯ ಹತ್ತು ಸದಸ್ಯರು ಎಸ್ಕೇಪ್ ಆಗಿದ್ದರು. ಆದರೆ, ಈ ಪೈಕಿ ಐವರನ್ನು ತಕ್ಷಣವೇ ಬಂಧಿಸುವಲ್ಲಿ ಅಲ್ಲಿನ ಪೊಲೀಸರು ಯಶಸ್ವಿಯಾಗಿದ್ದರು.

ಸರಣಿ ಸ್ಫೋಟದ ರೂವಾರಿಗಳು: ಅಹಮದಾಬಾದಿನ ಸರಣಿ ಸ್ಫೋಟಕ್ಕೆ ಕಾರಣರಾದ ಇವೆರಲ್ಲರಿಗೆ ಕರೀಂನಗರ, ಪುಣೆ ಹಾಗೂ ಚೆನ್ನೈ ಸ್ಫೋಟಕ್ಕೂ ತಯಾರಿ ಸಿಕ್ಕಿತ್ತು. ಭೋಪಾಲ್ ಕೇಂದ್ರ ಕಾರಾಗೃಹದಲ್ಲಿದ್ದ ಇವರು, ಬೆಡ್ ಶೀಟ್ ಬಳಸಿಕೊಂಡು ಗೋಡೆ ಹತ್ತಿ ಸೋಮವಾರ ಬೆಳಗ್ಗಿನ ಜಾವ 4 ಗಂಟೆ ಸುಮಾರಿಗೆ ಎಸ್ಕೇಪ್ ಹಾಕಿದ್ದಾರೆ. ಪರಾರಿಯಾಗುತ್ತಿದ್ದವರನ್ನು ತಡೆಯಲು ಬಂದ ಜೈಲಿನ ಭದ್ರತಾ ಸಿಬ್ಬಂದಿಯೊಬ್ಬರ ಕುತ್ತಿಗೆಯನ್ನು ಸ್ಟೀಲ್ ತಟ್ಟೆ ಹಾಗೂ ಗಾಜಿನಿಂದ ಸೀಳಿ ಹತ್ಯೆಗೈದಿದ್ದರು.
8 SIMI terrorists who fled from Bhopal Central Jail killed in an encounter in Eintkhedi village on Bhopal outskirts (ANI Exclusive pics) pic.twitter.com/FdWyV8NLfw
— ANI (@ANI_news) October 31, 2016
ಈ ಘಟನೆ ಬಳಿಕ ಐವರು ಜೈಲಿನ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಪರಾರಿಯಾದವರ ಬೆನ್ನು ಹತ್ತಿದ ಎಸ್ಪಿ ಅರವಿಂದ್ ಸಕ್ಸೇನಾ ಅವರ ತಂಡ, ಎಲ್ಲರನ್ನು ಎನ್ ಕೌಂಟರಿನಲ್ಲಿ ಹತ್ಯೆ ಮಾಡಿದೆ. ಇದೇ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಬು ಫೈಸಲ್ ಅಲಿಯಾಸ್ ಡಾಕ್ಟರ್ ಎಂಬ ಉಗ್ರ ಈ 'ಜೈಲ್ ಬ್ರೇಕ್' ಐಡಿಯಾ ಹಾಗೂ ಸಂಚು ರೂಪಿಸಿ ಇವರೆಲ್ಲರನ್ನು ಉತ್ತೇಜಿಸಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications