ಮುಂಬೈ ಅರ್ತುರ್ ಕಾರಾಗೃಹದಲ್ಲೇ 184 ಮಂದಿಗೆ ಕೊರೊನಾ ವೈರಸ್!
ಮುಂಬೈ, ಮೇ.10: ನೊವೆಲ್ ಕೊರೊನಾ ವೈರಸ್ ಮಹಾಮಾರಿಗೆ ಮಹಾರಾಷ್ಟ್ರ ಅಕ್ಷರಶಃ ನಲುಗಿದೆ. ಮುಂಬೈನ ಅರ್ತುರ್ ರಸ್ತೆಯಲ್ಲಿರುವ ಕಾರಾಗೃಹದಲ್ಲೇ ಭಾನುವಾರ ಮತ್ತೆ 81 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ.
ಮೂರು ದಿನಗಳ ಹಿಂದೆಯಷ್ಟೇ ಅರ್ತುರ್ ರಸ್ತೆಯ ಕಾರಾಗೃಹದಲ್ಲಿ 7 ಮಂದಿ ಸಿಬ್ಬಂದಿ ಸೇರಿದಂತೆ 79 ಜನರಿಗೆ ಕೊರೊನಾ ವೈರಸ್ ಸೋಂಕು ತಗಲಿರುವುದು ಪತ್ತೆಯಾಗಿತ್ತು. ಸೋಂಕಿತರನ್ನೆಲ್ಲ ನಿಗದಿತ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಮುಂಬೈನ ಕಾರಾಗೃಹದ 72 ಕೈದಿಗಳು, 7 ಸಿಬ್ಬಂದಿಗೆ ಕೊರೊನಾ ಪಾಸಿಟಿವ್!
ಮುಂಬೈ ಅರ್ತುರ್ ರಸ್ತೆಯ ಕಾರಾಗೃಹದಲ್ಲಿ ಇದುವರೆಗೂ 184 ಮಂದಿಗೆ ನೊವೆಲ್ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಪೈಕಿ 26 ಮಂದಿ ಜೈಲು ಸಿಬ್ಬಂದಿಯಾಗಿದ್ದರೆ ಬಾಕಿ 158 ಕೈದಿಗಳಿಗೆ ಕೊವಿಡ್-19 ಸೋಂಕು ಅಂಟಿಕೊಂಡಿದೆ.

ಮುಂಬೈನಲ್ಲಿರುವ ನಿಗದಿತ ಆಸ್ಪತ್ರೆಯಲ್ಲಿ ತಪಾಸಣೆ:
ಅರ್ತುರ್ ರಸ್ತೆಯ ಕಾರಾಗೃಹದಲ್ಲಿ ಪತ್ತೆಯಾದ ಕೊರೊನಾ ವೈರಸ್ ಸೋಂಕಿತರನ್ನು ಜಿ.ಟಿ.ಆಸ್ಪತ್ರೆ ಹಾಗೂ ಸೇಂಟ್ ಜಾರ್ಜ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಐಸೋಲೇಷನ್ ವಾರ್ಡ್ ಗಳಲ್ಲಿ ಇರಿಸಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದರ ಮಧ್ಯೆ ಮುಂಬೈನಲ್ಲಿ ಭಾನುವಾರ ಒಂದೇ ದಿನ ಮಹಾರಾಷ್ಟ್ರದ ಮುಂಬೈನಲ್ಲಿ ಕೊರೊನಾ ವೈರಸ್ ನಿಂದ 19 ಮಂದಿ ಪ್ರಾಣ ಬಿಟ್ಟಿದ್ದಾರೆ. 875 ಹೊಸ ಸೋಂಕಿತ ಪ್ರಕರಣ ಪತ್ತೆಯಾಗಿದ್ದು, ಮುಂಬೈ ಒಂದರಲ್ಲೇ ಸೋಂಕಿತರ ಸಂಖ್ಯೆ 13,564ಕ್ಕೆ ಏರಿಕೆಯಾಗಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications