ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ: 85 ಮಂದಿ ಸಾವು, ಜನಜೀವನ ಅಸ್ತವ್ಯಸ್ತ
ಅಸ್ಸಾಂ, ಜುಲೈ 14 : ಈಶಾನ್ಯ ಭಾಗದ ಮೂರು ರಾಜ್ಯಗಳಲ್ಲಿ ವ್ಯಾಪಕ ಮಳೆಯಿಂದಾಗಿ ನೆರೆ ಪ್ರವಾಹದಿಂದ 58 ಜಿಲ್ಲೆಗಳಿಗೆ ಹಾನಿಯಾಗಿದ್ದು, ಸುಮಾರು 85 ಮಂದಿ ಮೃತಪಟ್ಟಿದ್ದಾರೆ ಎಂದು ಈಶಾನ್ಯ ಪ್ರದೇಶದ ಅಭಿವೃದ್ಧಿಯ ಕೇಂದ್ರ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ಅಸ್ಸಾಂ,ಅರುಣಾಚಲ ಪ್ರದೇಶ ಮತ್ತು ಮಣಿಪುರಗಳಲ್ಲಿ ಅಲ್ಲಿನ ಅಧಿಕಾರಿಗಳೊಂದಿಗೆ ನೆರೆ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿದ ಅವರು, ವ್ಯಾಪಕ ಮಳೆಯಿಂದ ಉಂಟಾದ ನೆರೆ ಪ್ರವಾಹದಿಂದ ಉಂಟಾದ ನಷ್ಟ ಅಪಾರವಾಗಿದ್ದು, ಪ್ರವಾಹದಿಂದ ಭೂಕುಸಿತದಿಂದ ಸುಮಾರು 80 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದರು.

ಅಂತರಿಕ್ಷ ತಂತ್ರಜ್ಞಾನ ಮತ್ತು ಇಸ್ರೋ ತಜ್ಞರ ತಂಡವನ್ನು ಈ ಮೂರೂ ರಾಜ್ಯಗಳಲ್ಲಿ ಉಂಟಾದ ಹಾನಿ ಮತ್ತು ನಷ್ಟಗಳ ಬಗ್ಗೆ ಅಧ್ಯಯನ ನಡೆಸಲು ಬಳಸಿಕೊಳ್ಳಬಹುದು ಎಂದು ಅಧಿಕಾರಿಗಳಿಗೆ ಸಿಂಗ್ ಸಲಹೆ ನೀಡಿದ್ದಾರೆ.
ಪ್ರವಾಹದಲ್ಲಿ ಸಿಲುಕಿ ನಿರಾಶ್ರಿತರಾದವರಿಗೆ ಆಹಾರ ಮತ್ತು ಮಗುವಿನ ಆಹಾರ ಮತ್ತು ಅಗತ್ಯ ವಸ್ತುಗಳು ಸಿಗುವಂತೆ ಮಾಡಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಪ್ರವಾಹದಿಂದಾಗಿ ಮುಂದಿನ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವುದನ್ನು ತಡೆಗಟ್ಟಲು ಆರೋಗ್ಯ ಇಲಾಖೆಗೆ ಮತ್ತು ಸಂಪರ್ಕ ಮತ್ತು ಸಂವಹನಗಳಿಗಾಗಿ ದೂರಸಂಪರ್ಕ ಇಲಾಖೆಗೆ ಸೂಚಿಸಿರುವುದಾಗಿ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications