ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ತಿಂಗಳಲ್ಲಿ 8ನೇ ಚಿರತೆ ಸಾವು
ಬೆಂಗಳೂರು, ಜುಲೈ 14: ಶುಕ್ರವಾರ ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನವನದಲ್ಲಿ ಗಂಡು ಚಿರತೆಯೊಂದು ಸಾವನ್ನಪ್ಪಿದ್ದು, ಸುಮಾರು ನಾಲ್ಕು ತಿಂಗಳಲ್ಲಿ ಎಂಟನೇ ಚಿರತೆ ಈಗ ಸಾವಿಗೀಡಾಗಿದೆ.
ಇಂದು ಮುಂಜಾನೆ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಸೂರಜ್ ಹೆಸರಿನ ಆಫ್ರಿಕನ್ ಚಿರತೆ ಶವವಾಗಿ ಪತ್ತೆಯಾಗಿದೆ. ಸೂರಜ್ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರವಷ್ಟೇ ಮತ್ತೊಂದು ಗಂಡು ಚಿರತೆ ತೇಜಸ್ ರಾಷ್ಟ್ರೀಯ ಉದ್ಯಾನವನದಲ್ಲಿ ಶವವಾಗಿ ಪತ್ತೆಯಾಗಿತ್ತು. ಹೆಣ್ಣು ಚಿರತೆಯೊಂದಿಗಿನ ಹಿಂಸಾತ್ಮಕ ಕಾದಾಟದ ನಂತರ ಚಿರತೆಯು ಭಾರೀ ಆಘಾತದಿಂದ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಚಿರತೆಯ ಶವಪರೀಕ್ಷೆಯು ಬಹಿರಂಗಪಡಿಸಿತ್ತು.
ಮಾರ್ಚ್ 27 ರಂದು ಸಶಾ ಎಂಬ ಹೆಣ್ಣು ಚಿರತೆ ಮೂತ್ರಪಿಂಡದ ಕಾಯಿಲೆಯಿಂದ ಸಾವನ್ನಪ್ಪಿತು, ಏಪ್ರಿಲ್ 23 ರಂದು, ಉದಯ್ ಹೃದಯ-ಶ್ವಾಸಕೋಶದ ವೈಫಲ್ಯದಿಂದ ಮತ್ತು ಮೇ 9 ರಂದು ದಕ್ಷ ಎಂಬ ಹೆಣ್ಣು ಚಿರತೆಯು ಸಂಯೋಗದ ಪ್ರಯತ್ನದ ಸಮಯದಲ್ಲಿ ಪುರುಷನೊಂದಿಗೆ ಕಾದಾಟದ ನಂತರ ಸಾವನ್ನಪ್ಪಿತು. ಎರಡು ಚಿರತೆ ಮರಿಗಳು ಮೇ 25 ರಂದು ಪ್ರತಿಕೂಲ ಹವಾಮಾನ ಪರಿಸ್ಥಿತಿ ಮತ್ತು ನಿರ್ಜಲೀಕರಣದಿಂದ ಸಾವನ್ನಪ್ಪಿವೆ.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಆರಂಭಿಸಿದ ಕೇಂದ್ರ ಸರ್ಕಾರದ ಚಿರತೆಯ ಮರುಪರಿಚಯ ಕಾರ್ಯಕ್ರಮಕ್ಕೆ ಸೂರಜ್ ಸಾವು ಮತ್ತೊಂದು ಹಿನ್ನಡೆಯಾಗಿದೆ. ಈ ಹಿಂದೆ ಆರು ಚಿರತೆಗಳ ಸಾವಿನ ಹಿಂದೆ ಯಾವುದೇ ಲೋಪವಿಲ್ಲ ಎಂದು ಕೇಂದ್ರ ಸರ್ಕಾರವು ನಿರಾಕರಿಸಿತು.
ಚಿರತೆಯ ಸಾವಿನ ಹಿಂದೆ ಯಾವುದೇ ಲೋಪವಿಲ್ಲ. ಮೂರು ಚಿರತೆ ಮರಿಗಳ ಸಾವಿನ ಪ್ರಕರಣದಲ್ಲಿಯೂ ಸಹ, ಜಾಗತಿಕ ವನ್ಯಜೀವಿ ಸಾಹಿತ್ಯವು ಚಿರತೆಗಳಲ್ಲಿ ಶೇಕಡಾ 90 ರಷ್ಟು ಶಿಶು ಮರಣವನ್ನು ಸ್ಪಷ್ಟವಾಗಿ ಉಲ್ಲೇಖಿಸುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದರು.
ಮೇ ತಿಂಗಳಲ್ಲಿ, ದಕ್ಷಿಣ ಆಫ್ರಿಕಾದ ವನ್ಯಜೀವಿ ತಜ್ಞ ವಿನ್ಸೆಂಟ್ ವ್ಯಾನ್ ಡೆರ್ ಮೆರ್ವೆ ಅವರು ಹೆಚ್ಚಿನ ಚಿರತೆಗಳ ಸಾವಿನ ಬಗ್ಗೆ ಭವಿಷ್ಯ ನುಡಿದಿದ್ದರು. ಮರು ಪರಿಚಯ ಯೋಜನೆಯು ಇನ್ನೂ ಹೆಚ್ಚಿನ ಮರಣಕ್ಕೆ ಕಾರಣವಾಗಬಹುದು. ಚಿರತೆಗಳು ಪ್ರದೇಶಕ್ಕೆ ಹೊಂದಿಕೊಳ್ಳಲು ಪ್ರಯತ್ನಿಸುತ್ತವೆ. ಉದ್ಯಾನವನದಲ್ಲಿ ಚಿರತೆಗಳು ಮತ್ತು ಹುಲಿಗಳೊಂದಿಗೆ ಮುಖಾಮುಖಿಯಾಗುತ್ತವೆ ಎಂದು ಹೇಳಿದ್ದರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications